'ರಾಷ್ಟ್ರಪತಿ ಯುಪಿ ಪ್ರವಾಸ ಬಿಜೆಪಿ ಹಿರಿಯ ನಾಯಕರ ಭೇಟಿಯಂತೆ ಭಾಸ': ಎಸ್ಪಿ ಟೀಕೆ
ಲಕ್ನೋ, ಆಗಸ್ಟ್ 26: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಉತ್ತರ ಪ್ರದೇಶದಲ್ಲಿ ನಾಲ್ಕು ದಿನಗಳ ಕಾಲದ ಪ್ರವಾಸವನ್ನು ಆರಂಭ ಮಾಡಿದ್ದಾರೆ. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಉತ್ತರ ಪ್ರದೇಶ ಭೇಟಿಯ ವಿಚಾರದಲ್ಲಿ ಸಮಾಜವಾದಿ ಪಕ್ಷವು ಬಿಜೆಪಿಯನ್ನು ಟೀಕೆ ಮಾಡಿದೆ. ''ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಉತ್ತರ ಪ್ರದೇಶದ ಭೇಟಿಯು ಹಿರಿಯ ಬಿಜೆಪಿ ನಾಯಕರ ಭೇಟಿಯಂತಿದೆ,'' ಎಂದು ಸಮಾಜವಾದಿ ಪಕ್ಷ ಹೇಳಿದೆ.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ತನ್ನ ತವರೂರಿಗೆ ಎರಡೇ ತಿಂಗಳಿನಲ್ಲಿ ಮಾಡುತ್ತಿರುವ ಎರಡನೇ ಭೇಟಿಯಾಗಿದೆ. ಕಳೆದ ಜೂನ್ ತಿಂಗಳಿನಲ್ಲಿ ಮೊದಲ ಬಾರಿ ತನ್ನ ತವರೂರು ಕಾನ್ಪುರ ಹಾಗೂ ಉತ್ತರ ಪ್ರದೇಶ ರಾಜ್ಯ ರಾಜಧಾನಿ ಲಕ್ನೋಗೆ ರೈಲಿನ ಮೂಲಕ ತೆರಳಿ ಭೇಟಿ ನೀಡಿದ್ದರು.
ಲಕ್ನೋದ ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದ ಹಿನ್ನೆಲೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಉತ್ತರ ಪ್ರದೇಶಕ್ಕೆ ನಾಲ್ಕು ದಿನಗಳ ಪ್ರವಾಸಕ್ಕೆ ಹೊರಟ್ಟಿದ್ದಾರೆ. ಆದರೆ ಈ ಭೇಟಿಯ ಸಂದರ್ಭದಲ್ಲಿ ಪ್ರಮುಖ ಭೇಟಿಯು ಅಯೋಧ್ಯೆ ಭೇಟಿಯಾಗಲಿದೆ. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಭಾನುವಾರ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗುತ್ತಿರುವ ಅಯೋಧ್ಯೆಗೆ ರೈಲಿನ ಪ್ರಯಾಣ ನಡೆಸುವ ಮೂಲಕ ಭೇಟಿ ನೀಡಲಿದ್ದಾರೆ.

"ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಉತ್ತರ ಪ್ರದೇಶ ಸರ್ಕಾರದ ಸಂಸ್ಕೃತಿ ಹಾಗೂ ಪ್ರವಾಸೋಧ್ಯಮ ಇಲಾಖೆಯ ಹಲವಾರು ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡಲಿದ್ದಾರೆ. ತುಳಸಿ ಸ್ಮಾರಕ ಭವನದ ನವೀಕರಣಕ್ಕೂ ಚಾಲನೆ ನೀಡಲಿದ್ದಾರೆ. ಇನ್ನು ನಗರದ ಬಸ್ ನಿಲ್ದಾಣದ ಹಾಗೂ ಅಯೋಧ್ಯ ಧಾಮ ಅಭಿವೃದ್ದಿ ಕಾರ್ಯಕ್ಕೂ ಚಾಲನೆ ನೀಡಲಿದ್ದಾರೆ. ಕೊನೆಯದಾಗಿ ಅಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಹಾಗೂ ಪೂಜೆ ಸಲ್ಲಿಸಿದ್ದಾರೆ," ಎಂದು ರಾಷ್ಟ್ರಪತಿ ಭವನವು ಮಾಹಿತಿ ನೀಡಿದೆ.
ಆದರೆ ಈ ನಡುವೆ ರಾಷ್ಟ್ರಪತಿಯ ನಾಲ್ಕು ದಿನಗಳ ಉತ್ತರ ಪ್ರದೇಶ ಭೇಟಿಯನ್ನು ಸಮಾಜವಾದಿ ಪಕ್ಷದ ನಾಯಕರು ಟೀಕೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅಯೋಧ್ಯೆಯ ಸಮಾಜವಾದಿ ಪಕ್ಷದ ಹಿರಿಯ ನಾಯಕ, ಅಖಿಲೇಶ್ ಯಾದವ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಮಾಜಿ ಸಚಿವ ಪವನ್ ಪಾಂಡೆ, "ಬಿಜೆಪಿಯು ರಾಷ್ಟ್ರಪತಿ ಉತ್ತರ ಪ್ರದೇಶ ಭೇಟಿಯನ್ನು ರಾಜಕೀಕರಣ ಮಾಡುತ್ತಿದೆ," ಎಂದು ಆರೋಪ ಮಾಡಿದ್ದಾರೆ.
"ರಾಷ್ಟ್ರಪತಿಗಳು ಅವರಿಗೆ ಎಲ್ಲಿಗೆ ಬೇಕೋ ಅಲ್ಲಿಗೆ ಹೋಗಲು ಸ್ವತಂತ್ಯ್ರರು. ಆದರೆ ಬಿಜೆಪಿಯು ರಾಷ್ಟ್ರಪತಿ ಭೇಟಿಯನ್ನು ರಾಜಕೀಕರಣ ಮಾಡುವ ಪ್ರಯತ್ನ ಮಾಡುತ್ತಿದೆ. ನನಗೆ ಈ ರಾಷ್ಟ್ರಪತಿ ಭೇಟಿಯು ದೇಶದ ರಾಷ್ಟ್ರಪತಿ ನಿರ್ಧಾರ ಮಾಡಿದ ಭೇಟಿಯಂತೆ ನನಗೆ ಕಾಣುತ್ತಿಲ್ಲ ಎಂದು ಹೇಳಲು ನನಗೆ ಯಾವುದೇ ಹಿಂಜರಿಕೆ ಇಲ್ಲ. ಆದರೆ ಇದು ಬಿಜೆಪಿಯ ಹಿರಿಯ ಮುಖಂಡರು ಉತ್ತರ ಪ್ರದೇಶಕ್ಕೆ ನೀಡುತ್ತಿರುವ ಭೇಟಿಯಂತೆ ಭಾಸವಾಗುತ್ತಿದೆ. 2022 ಚುನಾವಣೆಯ ತನ್ನ ತಂತ್ರಗಾರಿಕೆಯಲ್ಲಿ ಬಿಜೆಪಿಯು ದೇಶದ ರಾಷ್ಟ್ರಪತಿ ಸ್ಥಾನದಿಂದಲ್ಲೂ ಲಾಭ ಪಡೆಯುವುದನ್ನು ಬಿಡುವುದಿಲ್ಲ ಎಂಬುವುದು ಕಂಡು ಬಂದಿದೆ," ಎಂದು ಸಮಾಜವಾದಿ ಪಕ್ಷದ ನಾಯಕ ಪವನ್ ಪಾಂಡೆ ಹೇಳಿದ್ದಾರೆ.
ಆದರೆ ಬಿಜೆಪಿ ಮಾತ್ರ ಈ ಆರೋಪವನ್ನು ಅಲ್ಲಗಳೆದಿದೆ. "ಈ ರೀತಿಯಾಗಿ ಎಲ್ಲಾ ವಿಚಾರದಲ್ಲೂ ಆರೋಪವನ್ನು ಮಾಡುವುದು ಪ್ರತಿಪಕ್ಷಗಳ ಕೆಲಸವಾಗಿ ಬಿಟ್ಟಿದೆ. ಆ ಕೆಲಸವನ್ನು ಪ್ರತಿ ಪಕ್ಷಗಳು ಮಾಡಿಕೊಂಡಿರಲಿ. ಆದರೆ ಆ ರೀತಿ ಯಾವುದೇ ವಿಷಯವಿಲ್ಲ. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಗೋರಕ್ ಪುರ ಹಾಗೂ ಅಯೋಧ್ಯೆಗೆ ಹೋಗುತ್ತಿದ್ದಾರೆ. ಈ ಮೊದಲೇ ಕಾನ್ಪುರಕ್ಕೆ ಹೋಗಿದ್ದರು. ರಾಮ್ ನಾಥ್ ಕೋವಿಂದ್ ರಾಷ್ಟ್ರಪತಿ. ದೇಶದ ಎಲ್ಲಿ ಬೇಕಾದರೂ ಓಡಾಡುವ ಹಕ್ಕು ಅವರಿಗೆ ಇದೆ," ಎಂದು ಫೈಜಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಲಲ್ಲು ಸಿಂಗ್ ಸ್ಪಷ್ಟನೆ ನೀಡಿದ್ದಾರೆ.
(ಒನ್ ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications