ಅಯೋಧ್ಯೆ ಭೂಮಿ ಪೂಜೆ: ಪೂಜಾರಿ, 16 ಮಂದಿ ಪೊಲೀಸರಿಗೆ ಕೊರೊನಾ ಸೋಂಕು
ಅಯೋಧ್ಯೆ, ಜುಲೈ 30: ಅಯೋಧ್ಯೆ ರಾಮಮಂದಿರದ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳಬೇಕಿದ್ದ ಪೂಜಾರಿ ಹಾಗೂ 16 ಮಂದಿ ಭದ್ರತಾ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ರಾಮ ಮಂದಿರದ ಭೂಮಿ ಪೂಜೆಗೆ ಭಾರತದ ಪವಿತ್ರ ಸ್ಥಳಗಳಿಂದ ಮಣ್ಣು ಮತ್ತು ನೀರನ್ನು ಸಂಗ್ರಹಿಸಲಾಗುತ್ತಿದೆ. ಪವಿತ್ರ ಸ್ಥಳಗಳಿಂದ ತಂದ ನೀರು ಮತ್ತು ಮಣ್ಣನ್ನು ಅಯೋಧ್ಯೆ ರಾಮ ಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗುವುದು.
ಈಗಾಗಲೇ ಭೂಮಿ ಪೂಜೆಗಾಗಿ ಅಯೋಧ್ಯೆಯ ಬೀದಿ ಬೀದಿಯೂ ಅಲಂಕರಿಸಲಾಗುತ್ತಿದೆ.ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಲಿದೆ.

ಆದರೆ ಇದೀಗ ಪೂಜಾರಿ ಮತ್ತು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನರೇಂದ್ರ ಮೋದಿ ಸೇರಿ ಒಟ್ಟು 50 ವಿಐಪಿಗಳು ಅಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ.
ಎಲ್ಲಾ ಕೊರೊನಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಕಾರ್ಯಕ್ರಮವನ್ನು ನೆರವೇರಿಸಲಾಗುತ್ತದೆ.
ಐತಿಹಾಸಿಕ ರಾಮ ಮಂದಿರ ನಿರ್ಮಾಣ ಕಾರ್ಯಾರಂಭಕ್ಕೆ ಪೌರಾಣಿಕ ನಗರ ಅಯೋಧ್ಯೆ ಶೃಂಗಾರಗೊಳ್ಳತೊಡಗಿದೆ. ಭವ್ಯ ಮಂದಿರ ನಿರ್ಮಾಣಕ್ಕೆ ಪೂರಕವಾಗಿ ಹತ್ತಾರು ಕಾಮಗಾರಿಗಳು ಇಲ್ಲಿ ಆರಂಭಗೊಂಡಿವೆ. ವಿಶೇಷವೆಂದರೆ ಇಡೀ ನಗರ ಕೇಸರಿಮಯವಾಗಿದ್ದು, ನಗರದ ಪ್ರಮುಖ ರಸ್ತೆಗಳು ಹಾಗೂ ಕಟ್ಟಡಗಳನ್ನು ಕೇಸರಿ ಬಣ್ಣದಲ್ಲಿ ಕಂಗೊಳಿಸುವಂತೆ ಮಾಡಲಾಗಿದೆ.
ನಗರದ ಬಹುತೇಕ ಕಟ್ಟಡಗಳು ಕೇಸರಿ ಬಣ್ಣದಲ್ಲಿ ಮಿಂದೆದ್ದಿದ್ದು, ಕಟ್ಟಡಗಳ ಮೇಲೆ ದೇವಾನು ದೇವತೆಗಳ ವರ್ಣಚಿತ್ರ ಬಿಡಿಸಲಾಗಿದೆ. ಪ್ರಮುಖವಾಗಿ ಪ್ರಭು ಶ್ರೀರಾಮ, ಹನುಮಂತ, ಶಿವ, ಗಣೇಶ ಸೇರಿದಂತೆ ಪ್ರಮುಖ ದೇವತೆಗಳು ಎಲ್ಲಾ ಕಟ್ಟಡಗಳ ಮೇಲೆ ರಾರಾಜಿಸುತ್ತಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications