ಚುನಾವಣೆಯ ಸೋಲಿಗೆ 'ಇವರೇ' ಕಾರಣ, ಪ್ರಿಯಾಂಕಾ ರೋಷ ಗುರಿ ಮಾಡಿದ್ದು ಯಾರನ್ನ?
Recommended Video
ರಾಯ್ಬರೇಲಿ, ಜೂನ್ 13: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಪ್ರದರ್ಶನಕ್ಕೆ ಕಾರಣವೇನು ಎಮಬ ಬಗ್ಗೆ ಈಗಾಗಲೇ ಸಾಕಷ್ಟು ವಿಶ್ಲೇಷಣೆಗಳು ನಡೆದಿವೆ. ಆದರೆ ಕಾಂಗ್ರೆಸ್ ಸೋಲಿಗೆ ಅಸಲಿ ಕಾರಣ ಏನು ಎಂಬ ಬಗ್ಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಾತನಾಡಿದ್ದಾರೆ.
ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ತಾಯಿ ಸೋನಿಯಾ ಗಾಂಧಿ ಅವರನ್ನು ಗೆಲ್ಲಿಸಿದ ಮತದಾರರಿಗೆ ಬುಧವಾರ ಕೃತಜ್ಞತೆ ಅರ್ಪಿಸಿದ ಅವರು, ನಂತರ ಪಕ್ಷದ ಸೋಲಿನ ಬಗ್ಗೆ ಮಾತನಾಡಿದರು.
"ನಾನು ಇಲ್ಲಿಗೆ ಭಾಷಣ ಮಾಡಲು ಬಂದಿಲ್ಲ. ಆದರೂ ಜನರು ನನ್ನನ್ನು ಮಾತನಾಡುವಂತೆ ಒತ್ತಾಯಿಸುತ್ತಿದ್ದಾರೆ. ನಾನು ಮಾತನಾಡಬೇಕು ಎಂದಾದರೆ ನನಗೆ ಸತ್ಯವನ್ನು ಮಾತನಾಡಲು ಬಿಡಿ. ಕಾಂಗ್ರೆಸ್ ಯಾಕೆ ಸೋಲು ಕಾಣಬೇಕಾಯಿತು ಎಂಬ ಸತ್ಯವನ್ನು ನಾನು ಬಿಚ್ಚಿಡುತ್ತೇನೆ" ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.

ಕೆಲವು ಕಾರ್ಯಕರ್ತರೇ ಕಾರಣ
"ಕಾಂಗ್ರೆಸ್ ನ ಎಲ್ಲ ಕಾರ್ಯಕರ್ತರೂ ಪಕ್ಷ ನಿಷ್ಠೆಯಿಂದ, ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದರೆ ಹೀಗಾಗುತ್ತಿರಲಿಲ್ಲ. ಕೆಲವರಷ್ಟೇ ಪ್ರಾಮಾಣಿಕವಾಗಿ ಕೆಲಸ ಮಾಡಿದರು, ಉಳಿದವರು ಮಾಡಲಿಲ್ಲ. ಅದೇ ನಮ್ಮ ಸೋಲಿಗೆ ಕಾರಣ. ಕಾಂಗ್ರೆಸ್ ನ ಕೆಲ ಕಾರ್ಯಕರ್ತರು ಗೆಲುವಿಗಾಗಿ ಪ್ರಯತ್ನವನ್ನೇ ಮಾಡದಿರುವುದೇ ಇದಕ್ಕೆ ಕಾರಣ" ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ರಾಯ್ಬರೇಲಿ ನಾಯಕರ ಬಗ್ಗೆಯೂ ಅಸಮಾಧಾನ
ರಾಯ್ಬರೇಲಿಯಲ್ಲಿ ಸೋನಿಯಾ ಗಾಂಧಿ ಅವರ ಗೆಲುವಿಗೆ ಸೋನಿಯಾ ಗಾಂಧಿ ಅವರು ಮಾತ್ರ ಕಾರಣ. ಬೇರೆ ಯಾರೂ ಅವರ ಗೆಲುವಿಗೆ ನೆರವು ನೀಡಿರಲಿಲ್ಲ ಎಂದು ರಾಯ್ಬರೇಲಿಯ ಸ್ಥಳಿಯ ನಾಯಕರ ಬಗ್ಗೆ ಪ್ರಿಯಾಂಕಾ ಗಾಂಧಿ ಅಸಮಾಧಾನ ಹೊರಹಾಕಿದರು.

ಪ್ರಿಯಾಂಕಾ ಮುಖ್ಯಮಂತ್ರಿ ಅಭ್ಯರ್ಥಿ
ಈ ನಡುವೆ, ಪ್ರಿಯಾಂಕಾ ಗಾಂಧಿ ಅವರ ನಾಯಕತ್ವದಿಂದ ಪ್ರಭಾವಿತರಾಗಿರುವ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರು 2022ರ ಉತ್ತರ ಪ್ರದೇಶ ವಿಧಾನಸಬೆ ಚುನಾವಣೆಯ ಹೊತ್ತಿಗೆ ಪ್ರಿಯಾಂಕಾ ಗಾಂಧಿ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವಂಥ ನಾಯಕತ್ವದ ಗುಣ ಇರುವವರು ಸದ್ಯಕ್ಕೆ ಕಾಂಗ್ರೆಸ್ ನಲ್ಲಿ ಯಾರೂ ಇಲ್ಲ. ಅದೂ ಅಲ್ಲದೆ, ಲೋಕಸಭೆ ಚುನಾವಣೆಯ ಹೊತ್ತಲ್ಲಿ ಉತ್ತರ ಪ್ರದೇಶದಲ್ಲಿ ಸಾಕಷ್ಟು ಪ್ರಚಾರ ಕಾರ್ಯವನ್ನೂ ಮಾಡಿರುವ ಕಾರಣ ಪ್ರಿಯಾಂಕಾ ಗಾಂಧಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಬೇಕು ಎಂಬ ಮಾತುಗಳು ಕೇಳಿಬರುತ್ತಿವೆ.

ಕಾಂಗ್ರೆಸ್ ಗೆದ್ದಿದ್ದು ಒಂದೇ ಒಮದು ಸ್ಥಾನ
ಉತ್ತರ ಪ್ರದೇಶದ ಎಂಬತ್ತು ಲೋಕಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಗೆದ್ದಿದ್ದು ಒಂದೇ ಒಂದು ಸ್ಥಾನವನ್ನು. ಈ ಬಾರಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೂ ಅಮೇಥಿ ಕ್ಷೇತ್ರದಲ್ಲಿ ಸೋಲುಂಡಿದ್ದರು. ಲೋಕಸಭೆ ಚುನಾವಣೆ ಘೋಷಣೆಯಾಘುತ್ತಿದಂತೆಯೇ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೂರ್ವ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿತ್ತು. ಈ ಮೂಲಕ ಅವರು ಸಕ್ರಿಯ ರಾಜಕಾರಣಕ್ಕೆ ಕಾಲಿಟ್ತಿದ್ದರಾದರೂ, ಅವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ











Click it and Unblock the Notifications