'ರಾಮ ಎಲ್ಲರಲ್ಲೂ ಇದ್ದಾನೆ': ಭೂಮಿ ಪೂಜೆ ಬಗ್ಗೆ ಪ್ರಿಯಾಂಕಾ ಗಾಂಧಿ ಮೊದಲ ಪ್ರತಿಕ್ರಿಯೆ
ಲಕ್ನೌ, ಆಗಸ್ಟ್ 04: ರಾಮ ಮಂದಿರ ಭೂಮಿ ಪೂಜೆ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮೊದಲ ಸಲ ಪ್ರತಿಕ್ರಿಯಿಸಿದ್ದಾರೆ. ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಭೂಮಿ ಪೂಜೆ ಕಾರ್ಯಕ್ರಮದ ಬಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಮಾತನಾಡಿರಲಿಲ್ಲ.
Recommended Video
ಇದೀಗ, ಮೊದಲ ರಾಮ ಮಂದಿರ ಭೂಮಿ ಪೂಜೆ ಕುರಿತು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದು, 'ಭಗವಾನ್ ರಾಮ ಮತ್ತು ತಾಯಿ ಸೀತಾಮಾತೆಯ ಸಂದೇಶ ಮತ್ತು ಅನುಗ್ರಹದಿಂದ ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮ ರಾಷ್ಟ್ರೀಯ ಏಕತೆ, ಭ್ರಾತೃತ್ವ ಮತ್ತು ಸಾಂಸ್ಕೃತಿಕ ಸಭೆಯ ಒಂದು ಸಂದರ್ಭ ಆಗಿದೆ' ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಂದೆ ಓದಿ....
|
ರಾಮ ಎಲ್ಲರೊಂದಿಗೂ ಇದ್ದಾನೆ
ಶ್ರೀರಾಮನ ಕುರಿತು ವಿವರವಾಗಿ ಬರೆದಿರುವ ಪ್ರಿಯಾಂಕಾ ಗಾಂಧಿ 'ಸರಳತೆ, ಧೈರ್ಯ, ಸಂಯಮ, ತ್ಯಾಗ, ಬದ್ಧತೆ ಇವು ಧೀನಬಂಧು ರಾಮ ಹೆಸರಿನ ಮೂಲತತ್ವ. ರಾಮ ಎಲ್ಲರೊಂದಿಗೂ ಇದ್ದಾನೆ, ರಾಮ ಎಲ್ಲರೊಂದಿಗೂ ಇದ್ದಾನೆ' ಎಂದು ಭೂಮಿ ಪೂಜೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಾಮಾಯಣ ಅಳಿಸಲಾಗದ ಗುರುತು
'ರಾಮಾಯಣವು ವಿಶ್ವದ ಸಂಸ್ಕೃತಿ ಮತ್ತು ಭಾರತದಲ್ಲಿ ಆಳವಾದ ಮತ್ತು ಅಳಿಸಲಾಗದ ಗುರುತು ಹೊಂದಿದೆ. ರಾಮಾಯಣದ ಕಥೆ ನಮ್ಮ ಸಾಂಸ್ಕೃತಿಕ ಮತ್ತು ಧಾರ್ಮಿಕ ನೆನಪುಗಳಲ್ಲಿ ಬೆಳಗಿದೆ' ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶ್ರೀಹರಿಯ ರೂಪಗಳು ಅಸಂಖ್ಯಾತ
'ಭಾರತೀಯರು ರಾಮಾಯಣದಲ್ಲಿನ ಧರ್ಮ, ನೀತಿ, ಕರ್ತವ್ಯ, ತ್ಯಾಗ, ಭವ್ಯ, ಪ್ರೀತಿ, ಶೌರ್ಯ ಮತ್ತು ಸೇವೆಯ ವಿಷಯಗಳಿಂದ ಪ್ರೇರಿತರಾಗಿದ್ದಾರೆ. ಉತ್ತರದಿಂದ ದಕ್ಷಿಣಕ್ಕೆ, ಪೂರ್ವದಿಂದ ಪಶ್ಚಿಮಕ್ಕೆ, ರಾಮನು ಅನೇಕ ರೂಪಗಳಲ್ಲಿ ತನ್ನನ್ನು ತಾನು ರೂಪಿಸಿಕೊಂಡಿದ್ದಾನೆ. ಶ್ರೀಹರಿಯ ಅಸಂಖ್ಯಾತ ರೂಪಗಳಂತೆ, ರಾಮಕಥಾ ಹರಿಕಥಾ ಅನಂತ' ಎಂದು ಪ್ರಿಯಾಂಕಾ ಹೇಳಿದ್ದಾರೆ.

ರಾಮ ಎಲ್ಲರಿಗೂ ಸೇರಿದವನು
'ರಾಮ ಎನ್ನುವುದು ಆಶ್ರಯ ಮತ್ತು ತ್ಯಾಗದ ಸಂಕೇತ. ರಾಮ ಶಬರಿ, ಸುಗ್ರೀವನಿಗೆ ಸೇರಿದವನು. ರಾಮ ವಾಲ್ಮೀಕಿಗೆ ಸೇರಿದವನು. ರಾಮ ಭಾಷಾಗೆ ಸೇರಿದವನು. ರಾಮ ಕಂಬನ್ಗೆ ಸೇರಿದವನು ಮತ್ತು ಯೇಸುಕ್ರಿಸ್ತನಿಗೂ ಸೇರಿದವನು. ಕಬೀರ್, ತುಳಸಿದಾಸ್, ರೈದಾಸ್ಗೆ ಸೇರಿದವನು ರಾಮ. ಎಲ್ಲವನ್ನು ಕೊಡುವವನು ಭಗವಾನ್ ರಾಮ. ವಾರಿಸ್ ಅಲಿ ಶಾ ಜೋ ರಬ್ ಹೈ ವೋಹಿ ರಾಮ್ ಹೈ' ಎಂದು ಪ್ರಿಯಾಂಕಾ ಹೇಳಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications