'ರಾಮ ಎಲ್ಲರಲ್ಲೂ ಇದ್ದಾನೆ': ಭೂಮಿ ಪೂಜೆ ಬಗ್ಗೆ ಪ್ರಿಯಾಂಕಾ ಗಾಂಧಿ ಮೊದಲ ಪ್ರತಿಕ್ರಿಯೆ
ಲಕ್ನೌ, ಆಗಸ್ಟ್ 04: ರಾಮ ಮಂದಿರ ಭೂಮಿ ಪೂಜೆ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮೊದಲ ಸಲ ಪ್ರತಿಕ್ರಿಯಿಸಿದ್ದಾರೆ. ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಭೂಮಿ ಪೂಜೆ ಕಾರ್ಯಕ್ರಮದ ಬಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಮಾತನಾಡಿರಲಿಲ್ಲ.
Recommended Video
ಇದೀಗ, ಮೊದಲ ರಾಮ ಮಂದಿರ ಭೂಮಿ ಪೂಜೆ ಕುರಿತು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದು, 'ಭಗವಾನ್ ರಾಮ ಮತ್ತು ತಾಯಿ ಸೀತಾಮಾತೆಯ ಸಂದೇಶ ಮತ್ತು ಅನುಗ್ರಹದಿಂದ ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮ ರಾಷ್ಟ್ರೀಯ ಏಕತೆ, ಭ್ರಾತೃತ್ವ ಮತ್ತು ಸಾಂಸ್ಕೃತಿಕ ಸಭೆಯ ಒಂದು ಸಂದರ್ಭ ಆಗಿದೆ' ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಂದೆ ಓದಿ....
|
ರಾಮ ಎಲ್ಲರೊಂದಿಗೂ ಇದ್ದಾನೆ
ಶ್ರೀರಾಮನ ಕುರಿತು ವಿವರವಾಗಿ ಬರೆದಿರುವ ಪ್ರಿಯಾಂಕಾ ಗಾಂಧಿ 'ಸರಳತೆ, ಧೈರ್ಯ, ಸಂಯಮ, ತ್ಯಾಗ, ಬದ್ಧತೆ ಇವು ಧೀನಬಂಧು ರಾಮ ಹೆಸರಿನ ಮೂಲತತ್ವ. ರಾಮ ಎಲ್ಲರೊಂದಿಗೂ ಇದ್ದಾನೆ, ರಾಮ ಎಲ್ಲರೊಂದಿಗೂ ಇದ್ದಾನೆ' ಎಂದು ಭೂಮಿ ಪೂಜೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಾಮಾಯಣ ಅಳಿಸಲಾಗದ ಗುರುತು
'ರಾಮಾಯಣವು ವಿಶ್ವದ ಸಂಸ್ಕೃತಿ ಮತ್ತು ಭಾರತದಲ್ಲಿ ಆಳವಾದ ಮತ್ತು ಅಳಿಸಲಾಗದ ಗುರುತು ಹೊಂದಿದೆ. ರಾಮಾಯಣದ ಕಥೆ ನಮ್ಮ ಸಾಂಸ್ಕೃತಿಕ ಮತ್ತು ಧಾರ್ಮಿಕ ನೆನಪುಗಳಲ್ಲಿ ಬೆಳಗಿದೆ' ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶ್ರೀಹರಿಯ ರೂಪಗಳು ಅಸಂಖ್ಯಾತ
'ಭಾರತೀಯರು ರಾಮಾಯಣದಲ್ಲಿನ ಧರ್ಮ, ನೀತಿ, ಕರ್ತವ್ಯ, ತ್ಯಾಗ, ಭವ್ಯ, ಪ್ರೀತಿ, ಶೌರ್ಯ ಮತ್ತು ಸೇವೆಯ ವಿಷಯಗಳಿಂದ ಪ್ರೇರಿತರಾಗಿದ್ದಾರೆ. ಉತ್ತರದಿಂದ ದಕ್ಷಿಣಕ್ಕೆ, ಪೂರ್ವದಿಂದ ಪಶ್ಚಿಮಕ್ಕೆ, ರಾಮನು ಅನೇಕ ರೂಪಗಳಲ್ಲಿ ತನ್ನನ್ನು ತಾನು ರೂಪಿಸಿಕೊಂಡಿದ್ದಾನೆ. ಶ್ರೀಹರಿಯ ಅಸಂಖ್ಯಾತ ರೂಪಗಳಂತೆ, ರಾಮಕಥಾ ಹರಿಕಥಾ ಅನಂತ' ಎಂದು ಪ್ರಿಯಾಂಕಾ ಹೇಳಿದ್ದಾರೆ.

ರಾಮ ಎಲ್ಲರಿಗೂ ಸೇರಿದವನು
'ರಾಮ ಎನ್ನುವುದು ಆಶ್ರಯ ಮತ್ತು ತ್ಯಾಗದ ಸಂಕೇತ. ರಾಮ ಶಬರಿ, ಸುಗ್ರೀವನಿಗೆ ಸೇರಿದವನು. ರಾಮ ವಾಲ್ಮೀಕಿಗೆ ಸೇರಿದವನು. ರಾಮ ಭಾಷಾಗೆ ಸೇರಿದವನು. ರಾಮ ಕಂಬನ್ಗೆ ಸೇರಿದವನು ಮತ್ತು ಯೇಸುಕ್ರಿಸ್ತನಿಗೂ ಸೇರಿದವನು. ಕಬೀರ್, ತುಳಸಿದಾಸ್, ರೈದಾಸ್ಗೆ ಸೇರಿದವನು ರಾಮ. ಎಲ್ಲವನ್ನು ಕೊಡುವವನು ಭಗವಾನ್ ರಾಮ. ವಾರಿಸ್ ಅಲಿ ಶಾ ಜೋ ರಬ್ ಹೈ ವೋಹಿ ರಾಮ್ ಹೈ' ಎಂದು ಪ್ರಿಯಾಂಕಾ ಹೇಳಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications