ರಾಯ್ ಬರೇಲಿಯಲ್ಲಿ ಗೂಂಡಾಗಳಿಗೆ ಪ್ರಿಯಾಂಕಾ ರಕ್ಷಣೆ : ಕಾಂಗ್ರೆಸ್ ಶಾಸಕನಿಂದಲೇ ಆರೋಪ
Recommended Video
ರಾಯ್ ಬರೇಲಿ (ಉತ್ತರ ಪ್ರದೇಶ), ಮೇ 16 : ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಒಡೆಯುತ್ತಿರುವುದು ಮಾತ್ರವಲ್ಲ, ಕ್ರಿಮಿನಲ್ ಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ರಾಯ್ ಬರೇಲಿ ಶಾಸಕ ಗಂಭೀರ ಆರೋಪ ಮಾಡಿರುವುದು ಪಕ್ಷಕ್ಕೆ ಭಾರೀ ಮುಜುಗರ ತಂದಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಉತ್ತರ ಪ್ರದೇಶದ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಪೂರ್ವ ಭಾಗದ ಉಸ್ತುವಾರಿ ವಹಿಸಿಕೊಂಡಿರುವ ನಲವತ್ತೇಳು ವರ್ಷದ ಪ್ರಿಯಾಂಕಾ ವಾದ್ರಾ ಅವರ ವಿರುದ್ಧ ರಾಯ್ ಬರೇಲಿ ಶಾಸಕ ರಾಕೇಶ್ ಸಿಂಗ್ ಅವರು ಗಂಭೀರ ಆರೋಪಗಳನ್ನು ಮಾಡಿರುವುದು ಪ್ರಿಯಾಂಕಾ ಮತ್ತು ಸೋನಿಯಾಗೆ ಇರುಸುಮುರುಸು ಉಂಟು ಮಾಡಿದೆ.
ರಾಯ್ ಬರೇಲಿ ಜಿಲ್ಲೆಯ ಹರಚಂದಪುರದವರಾದ ಅವರು, "ನಾನು ತುಂಬಾ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನು ಕಾಂಗ್ರೆಸ್ ಎಂಎಲ್ಎ ಆಗಿದ್ದರೂ ಹೊರಗಿನ ಗೂಂಡಾಗಳನ್ನು ಜಿಲ್ಲೆಯೊಳಗೆ ಕರೆತಂದು ನನ್ನ ಸಹೋದರರ ಮೇಲೆ ಹಲ್ಲೆ ಮಾಡಿಸಿರುವುದು ಮತ್ತು ಆರೋಪ ಹೊರಿಸಿರುವುದು ಸಲ್ಲದು" ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಪಕ್ಷ ಮತ್ತು ಅದರಲ್ಲಿನ ನನ್ನ ಸ್ಥಾನ ತಾತ್ಕಾಲಿಕ. ಆದರೆ, ಸೋದರ ಸಂಬಂಧಗಳು ಎಂದಿಗೂ ಶಾಶ್ವತ. ನನ್ನ ಸಹೋದರನ ಮೇಲೆ ಇಲ್ಲದ ಆರೋಪ ಹೊರಿಸಿದರೆ ನಾನೇಕೆ ಸುಮ್ಮನಿರಬೇಕು? ಈ ಕುರಿತಾಗಿ ಪ್ರಿಯಾಂಕಾ ಹೇಳುತ್ತಿರುವುದರಲ್ಲಿ ಸತ್ಯಾಂಶವಿಲ್ಲ. ಅಲ್ಲದೆ, ಅವರು ಕ್ರಿಮಿನಲ್ ಗಳಿಗೆ ಆಶ್ರಯ ನೀಡುತ್ತಿದ್ದಾರೆ ಎಂದು ರಾಕೇಶ್ ಸಿಂಗ್ ಕಿಡಿಕಾರಿದ್ದಾರೆ.
ಪ್ರಿಯಾಂಕಾ ವಾದ್ರಾ ಅವರ ಹಸ್ತಕ್ಷೇಪದಿಂದಾಗಿ ಮತ್ತು ಅವರ ಷಡ್ಯಂತ್ರದಿಂದಾಗಿ ಈ ಬಾರಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ಸಿಗೆ ಕಡಿಮೆ ಸ್ಥಾನಗಳು ಲಭಿಸಲಿವೆ. ಚುನಾವಣೆಯ ಸಮಯದಲ್ಲಿ ಮಾತ್ರ ಇಲ್ಲಿ ಕೇವಲ ಒಂದು ಗಂಟೆಯ ಕಾಲ ಬಂದು ನಮ್ನಮ್ಮ ನಡುವೆ ಜಗಳ ತಂದಿತ್ತು ಹೋಗುತ್ತಾರೆ. ಇದರಿಂದ ಅವರಿಗೇನು ಸಿಗುತ್ತದೆ ಎಂದು ರಾಜೇಶ್ ಪ್ರಶ್ನಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications