ಸಿಎಎ ವಿರುದ್ಧ ಪ್ರತಿಭಟನೆ; ಉ. ಪ್ರದೇಶದಲ್ಲಿ 16 ಸಾವು

ಲಕ್ನೋ, ಡಿಸೆಂಬರ್ 22 : ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಉತ್ತರ ಪ್ರದೇಶದಲ್ಲಿ ನಡೆದ ಪ್ರತಿಭಟನೆ ವೇಳೆ 16 ಜನರು ಮೃತಪಟ್ಟಿದ್ದಾರೆ. ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಿಂದ ಅಪಾರವಾದ ನಷ್ಟ ಉಂಟಾಗಿದೆ. ಬಿಹಾರದಲ್ಲಿಯೂ ಭಾರಿ ಪ್ರತಿಭಟನೆ ನಡೆದಿದೆ.

ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗಳು ಇನ್ನೂ ನಿಂತಿಲ್ಲ. ಆದ್ದರಿಂದ, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸರ್ಕಾರ ಎಲ್ಲಾ ದರ್ಜೆಯ ಪೊಲೀಸ್ ಸಿಬ್ಭಂದಿಗಳ ರಜೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಪೊಲೀಸರು ಇರುವರೆಗೂ 705 ಜನರನ್ನು ಬಂಧಿಸಿದ್ದು, 4,500 ಜನರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿಭಟನೆ, ಹಿಂಸಾಚಾರದಲ್ಲಿ ತೊಡಗಿದವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Protest Against CAA 16 Killed In Uttar Pradesh

260 ಪೊಲೀಸ್ ಸಿಬ್ಬಂದಿಗಳು ಇದುವರೆಗೂ ಹಿಂಸಾಚಾರದಲ್ಲಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿಯಿಂದಾಗಿ 57 ಜನರು ಗಾಯಗೊಂಡಿದ್ದಾರೆ. ನವದೆಹಲಿಯಲ್ಲಿ ನಡೆದ ಹಿಂಸಾಚಾರದ ಬಳಿಕ ಭೀಮ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬಂಧಿಸಲಾಗಿದೆ. 14 ದಿನ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಶನಿವಾರ ಉತ್ತರ ಪ್ರದೇಶದ ರಾಂಪುರದಲ್ಲಿ ಸಿಎಎ ಪರ ವಿರುದ್ಧ ಹೋರಾಟ ಮಾಡುತ್ತಿದ್ದವರ ನಡುವೆ ಕಲ್ಲು ತೂರಾಟ ನಡೆದಿದೆ. ಇದರಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಪೊಲೀಸರು ಅಶ್ರುವಾಯು ಸಿಡಿಸಿ ಜನರನ್ನು ಚದುರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+