ಎಸ್ಪಿ, ಆರ್ಎಲ್ಡಿ ಜಂಟಿ ಅಭ್ಯರ್ಥಿಯಾಗಿ ಜಯಂತ್ ಚೌಧರಿ ಕಣಕ್ಕೆ
ಲಕ್ನೋ, ಮೇ 27: ಉತ್ತರ ಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ಸಮಾಜವಾದಿ ಪಕ್ಷ ಮತ್ತು ರಾಷ್ಟ್ರೀಯ ಲೋಕದಳ ಜಂಟಿ ಅಭ್ಯರ್ಥಿಯಾಗಿ ಆರ್ಎಲ್ಡಿ ಪಕ್ಷದ ಅಧ್ಯಕ್ಷ ಜಯಂತ್ ಚೌಧರಿ ಸ್ಪರ್ಧಿಸಲಿದ್ದಾರೆ ಎಂದು ಸಮಾಜವಾದಿ ಪಕ್ಷ ಪ್ರಕಟಿಸಿದೆ.
ಇತ್ತೀಚೆಗಷ್ಟೇ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ರಾಜ್ಯಸಭಾ ಚುನಾವಣೆಗೆ ಎಸ್ಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದ್ದರು. ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಜಾವೇದ್ ಅಲಿ ಖಾನ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು.
"ಜಯಂತ್ ಚೌಧರಿ ಎಸ್ಪಿ ಮತ್ತು ಆರ್ಎಲ್ಡಿಯ ಜಂಟಿ ಅಭ್ಯರ್ಥಿಯಾಗಲಿದ್ದಾರೆ" ಎಂದು ಸಮಾಜವಾದಿ ಪಕ್ಷವು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಘೋಷಿಸಿದೆ.

ಉತ್ತರ ಪ್ರದೇಶ ವಿಧಾನಸಭೆಯಲ್ಲಿ 273 ಶಾಸಕರ ಬಲ ಹೊಂದಿರುವ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್ಡಿಎ ಸಂಸತ್ತಿನ ಮೇಲ್ಮನೆಗೆ ಎಂಟು ಸದಸ್ಯರನ್ನು ಸುಲಭವಾಗಿ ಆಯ್ಕೆ ಮಾಡಲು ಸಾಧ್ಯವಾಗುತ್ತದೆ, ಆದರೆ ಎಸ್ಪಿ ಮತ್ತು ಅದರ ಮಿತ್ರಪಕ್ಷಗಳಾದ ಆರ್ಎಲ್ಡಿ ಮತ್ತು ಎಸ್ಬಿಎಸ್ಪಿ, 125 ಶಾಸಕರ ಬಲ ಹೊಂದಿದ್ದು, ಮೂರು ಅಭ್ಯರ್ಥಿಗಳನ್ನು ಆಯ್ಕೆ ಮಾಡಬಹುದಾಗಿದೆ.
ಗೆಲುವಿಗೆ ಬೇಕು ಕನಿಷ್ಠ 34 ಮತ; ರಾಜ್ಯದ 11 ನಿವೃತ್ತ ರಾಜ್ಯಸಭಾ ಸದಸ್ಯರ ಪೈಕಿ ಐವರು ಭಾರತೀಯ ಜನತಾ ಪಕ್ಷ (ಬಿಜೆಪಿ), ಮೂವರು ಎಸ್ಪಿ, ಇಬ್ಬರು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮತ್ತು ಒಬ್ಬರು ಕಾಂಗ್ರೆಸ್ಗೆ ಸೇರಿದವರಾಗಿದ್ದಾರೆ. ಅವರ ಅಧಿಕಾರಾವಧಿ ಕೊನೆಗೊಳ್ಳುತ್ತಿರುವ ವೇಳೆ, ಕಪಿಲ್ ಸಿಬಲ್, ಬಿಎಸ್ಪಿಯ ಸತೀಶ್ ಚಂದ್ರ ಮಿಶ್ರಾ ಮತ್ತು ಸಮಾಜವಾದಿ ಪಕ್ಷದ ರಿಯೋತಿ ರಮಣ್ ಸಿಂಗ್ ಸ್ಪರ್ಧಿಸುತ್ತಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆಯಲ್ಲಿ 403 ಚುನಾಯಿತ ಸದಸ್ಯರನ್ನು ಹೊಂದಿರುವ ಅಭ್ಯರ್ಥಿ ಗೆಲುವಿಗೆ ಕನಿಷ್ಠ 34 ಮತಗಳು ಬೇಕಾಗುತ್ತವೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ ಇಬ್ಬರು ಶಾಸಕರನ್ನು ಹೊಂದಿದ್ದರೆ, ಮಾಯಾವತಿ ನೇತೃತ್ವದ ಬಿಎಸ್ಪಿ ಒಬ್ಬ ಶಾಸಕರನ್ನು ಹೊಂದಿದೆ. ಇಬ್ಬರು ಹಿರಿಯ ಬಿಎಸ್ಪಿ ನಾಯಕರಾದ ಮಿಶ್ರಾ ಮತ್ತು ಅಶೋಕ್ ಸಿದ್ಧಾರ್ಥ್ ಜುಲೈನಲ್ಲಿ ರಾಜ್ಯಸಭಾ ಸದಸ್ಯ ಸ್ಥಾನದಿಂದ ನಿವೃತ್ತರಾಗುತ್ತಾರೆ, ನಂತರ ಪಕ್ಷದ ರಾಮ್ಜಿ ಗೌತಮ್ ಮಾತ್ರ ರಾಜ್ಯಸಭೆಯಲ್ಲಿ ಉಳಿಯುತ್ತಾರೆ.

ಬಿಜೆಪಿಯ ಐವರ ಅಧಿಕಾರಾವಧಿ ಪೂರ್ಣ; ಜಾಫರ್ ಇಸ್ಲಾಂ, ಶಿವ ಪ್ರತಾಪ್ ಶುಕ್ಲಾ, ಸಂಜಯ್ ಸೇಠ್, ಸುರೇಂದ್ರ ನಗರ ಮತ್ತು ಜೈ ಪ್ರಕಾಶ್ ನಿಶಾದ್ ಬಿಜೆಪಿಯಿಂದ ನಿವೃತ್ತರಾಗುತ್ತಿರುವ ರಾಜ್ಯಸಭಾ ಸದಸ್ಯರಾಗಿದ್ದಾರೆ. ತಮ್ಮ ಅವಧಿಯನ್ನು ಪೂರ್ಣಗೊಳಿಸುತ್ತಿರುವ ಎಸ್ಪಿ ನಾಯಕರಲ್ಲಿ ಉತ್ತರ ಪ್ರದೇಶದ ವಿಧಾನ ಪರಿಷತ್ತಿನ ಮಾಜಿ ಅಧ್ಯಕ್ಷ ಸುಖರಾಮ್ ಸಿಂಗ್ ಯಾದವ್ ಪುತ್ರ ಮೋಹಿತ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಯಾದವ್ ಜೊತೆಗೆ ರೆಯೋಟಿ ರಮಣ್ ಸಿಂಗ್ ಮತ್ತು ವಿಶಂಭರ್ ಪ್ರಸಾದ್ ನಿಶಾದ್ ಅವರ ಅಧಿಕಾರವೂ ಜುಲೈನಲ್ಲಿ ಕೊನೆಗೊಳ್ಳಲಿದೆ.
ಮೇ 24 ರಂದು ಚುನಾವಣಾ ಆಯೋಗ ರಾಜ್ಯಸಭಾ ಚುನಾವಣೆಯ ಅಧಿಸೂಚನೆಯನ್ನು ಘೋಷಿಸಿದ್ದು, ಜೂನ್ 10ರಂದು ಮತದಾನ ನಡೆಯಲಿದೆ, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications