ಶ್ರೀರಾಮ ನವಮಿಗೂ ಆವರಿಸಿದ ಕೊರೊನಾ ವೈರಸ್ ಕರಿಛಾಯೆ
ಲಕ್ನೋ, ಏಪ್ರಿಲ್.02: ಕೋಟ್ಯಂತರ ಜನರು ಶ್ರೀರಾಮನ ಜನ್ಮಭೂಮಿ ಎಂದೆ ನಂಬಿರುವ ಅಯೋಧ್ಯೆಯಲ್ಲಿ ಎಲ್ಲವೂ ಸ್ತಬ್ಧವಾಗಿದೆ. ಶ್ರೀರಾಮ ನವಮಿ ದಿನ ಅಯೋಧ್ಯೆಯಲ್ಲಿ ಕೊರೊನಾ ವೈರಸ್ ಕರಿಛಾಯೆ ಆವರಿಸಿಕೊಂಡಿದೆ.
ಕೊರೊನಾ ವೈರಸ್ ನಿಯಂತ್ರಿಸುವ ದೃಷ್ಟಿಯಿಂದ ದೇಶಕ್ಕೆ ದೇಶವನ್ನೇ ಲಾಕ್ ಡೌನ್ ಮಾಡಿಲಾಗಿದೆ. ಇದರಿಂದ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಬೇಕಿದ್ದ ಸಂಭ್ರಮದ ರಾಮ ನವಮಿ ಆಚರಣೆಗೂ ಬ್ರೇಕ್ ಬಿದ್ದಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಈಗಾಗಲೇ ರಾಮಜನ್ಮ ಭೂಮಿ ತೀರ್ಥ ಟ್ರಸ್ಟ್ ನ್ನು ರಚನೆ ಮಾಡಲಾಗಿದೆ. ಇನ್ನೊಂದೆಡೆ ಶ್ರೀರಾಮ ನವಮಿಯಾಗಿದ್ದರೂ ಭಕ್ತರು ದೇವಸ್ಥಾನಕ್ಕೆ ಬರಲು ಅವಕಾಶವಿಲ್ಲ. ಒಬ್ಬ ಆಚಾರ್ಯರನ್ನು ಬಿಟ್ಟು ಕೆಲವು ಪೊಲೀಸರಷ್ಟೇ ದೇವಸ್ಥಾನದ ಸುತ್ತಲಿನಲ್ಲಿ ಇದ್ದಾರೆ ಎಂದು ರಾಮಜನ್ಮಭೂಮಿ ದೇವಸ್ಥಾನದ ಆಚಾರ್ಯ ಸತ್ಯಂದ್ರ ದಾಸ್ ತಿಳಿಸಿದ್ದಾರೆ.

ಪ್ರಸಾದ ವಿತರಣೆ ಅಂಗಡಿಗಳೂ ಬಂದ್:
ಅಯೋಧ್ಯೆಯಲ್ಲಿ ಇರುವ ಹನುಮಾನ್ ಘರ್ ದೇವಸ್ಥಾನ ಮತ್ತು ದಶರಥ ಮಹಲ್ ದೇವಸ್ಥಾನವನ್ನು ಮುಚ್ಚಲಾಗಿದೆ. ಇದರ ಜೊತೆಗೆ ಈ ಮಾರ್ಗದಲ್ಲಿ ಇರುವ ಪ್ರಸಾದ ವಿತರಣೆ ಅಂಗಡಿಗಳನ್ನು ಕೂಡಾ ಬಂದ್ ಮಾಡಲಾಗಿದೆ. ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ರಾಮಜನ್ಮ ಭೂಮಿಯಲ್ಲಿ ರಾಮ ನವಮಿ ಆಚರಣೆಗೆ ಜನರು ಸೇರುವಂತಿಲ್ಲ. ಈ ನಿಟ್ಟಿನಲ್ಲಿ ಕ್ರಮವನ್ನು ಕೂಡಾ ತೆಗೆದುಕೊಳ್ಳಲಾಗಿದೆ.
ಇನ್ನು, ಕಳೆದ ಎರಡು ದಿನಗಳ ಹಿಂದೆಯಷ್ಟೇ ವಿಶ್ವ ಹಿಂದೂ ಪರಿಷತ್ ರಾಮಭಕ್ತರೆಲ್ಲ ತಮ್ಮ ತಮ್ಮ ಮನೆಗಳಲ್ಲಿಯೇ ರಾಮ ನವಮಿಯನ್ನು ಆಚರಿಸುವಂತೆ ಮನವಿ ಮಾಡಿಕೊಂಡಿತ್ತು. ಕಳೆದ ತಿಂಗಳಿನಲ್ಲೇ ಸಾರ್ವಜನಿಕರು ಯಾವುದೇ ಸಭೆ, ಸಮಾರಂಭ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರು ಭಾಗವಹಿಸದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications