ಕೇಸ್ ಹಾಕಿದ್ದಕ್ಕೆ ರಮ್ಯಾ ನೀಡಿದ್ದು ಎರಡೇ ಪದದ ಪ್ರತಿಕ್ರಿಯೆ!
ಬೆಂಗಳೂರು, ಸೆಪ್ಟೆಂಬರ್ 26: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಾಕಾರಿಯಾಗಿ ಚಿತ್ರಿಸುವ ಫೋಟೊವನ್ನು ಟ್ವಿಟ್ಟರ್ನಲ್ಲಿ ಹಾಕಿದ್ದಾರೆ ಎಂದು ಆರೋಪಿಸಿ ತಮ್ಮ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿರುವ ಎಫ್ಐಆರ್ ಕುರಿತು ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ, ನಟಿ ರಮ್ಯಾ ಎರಡೇ ಪದದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ತಮ್ಮ ವಿರುದ್ಧ ದಾಖಲಾಗಿರುವ ದೂರನ್ನು ರಮ್ಯಾ ಗಂಭೀರವಾಗಿ ಪರಿಗಣಿಸಿಲ್ಲ ಎನ್ನುವುದು ಅವರ ಪ್ರತಿಕ್ರಿಯೆಯಿಂದ ತಿಳಿಯುತ್ತದೆ.
'ಚೋರ್ ಪಿಎಂ' ಎಂದು ಮೋದಿ ಅವರನ್ನು ನಿಂದಿಸುವ ಟ್ವೀಟ್ ಮಾಡಿದ್ದ ರಮ್ಯಾ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ ಎಂದು ಪತ್ರಕರ್ತೆ ಕಾರ್ಣಿಕಾ ಕೊಹ್ಲಿ ಅವರು ಮಾಡಿದ್ದ ಟ್ವೀಟ್ಅನ್ನು ಹಂಚಿಕೊಂಡಿರುವ ರಮ್ಯಾ, 'ಓಹ್ ವೆಲ್' ಎಂದಷ್ಟೇ ಪ್ರತಿಕ್ರಿಯೆ ನೀಡಿದ್ದಾರೆ.
|
ಅಧಿಕೃತ ಹೇಳಿಕೆ!
ರಫೇಲ್ ಒಪ್ಪಂದ ಮತ್ತಿತರ ವಿಚಾರಗಳಿಗೆ ಸಂಬಂಧಿಸಿದ ಟ್ವೀಟ್ಗಳನ್ನು ಹಂಚಿಕೊಳ್ಳುತ್ತಿರುವ ರಮ್ಯಾ, ತಮ್ಮ ವಿರುದ್ಧ ಪ್ರಕರಣ ದಾಖಲಾಗಿರುವುದಕ್ಕೆ 'ಓಹ್ ವೆಲ್' ಎಂದಷ್ಟೇ ಹೇಳಿಕೆ ನೀಡಿದ್ದು ಅಚ್ಚರಿ ಮೂಡಿಸಿದೆ.
ಇದು ನಿಮ್ಮ ಅಧಿಕೃತ ಹೇಳಿಕೆಯೇ ಎಂದು ಪತ್ರಕರ್ತೆ ಕಾರ್ಣಿಕಾ ಪ್ರಶ್ನಿಸಿದ್ದು, ಅದಕ್ಕೆ ರಮ್ಯಾ 'ಹೌದು' ಎಂದು ಉತ್ತರಿಸಿದ್ದಾರೆ.

ರಿಜ್ವಾನ್ ಅಹ್ಮದ್ ದೂರು
ವಕೀಲಿಕೆ, ಸಾಮಾಜಿಕ ಧಾರ್ಮಿಕ ಭಾಷಣ, ಫೋಟೋಗ್ರಫಿ ಮುಂತಾದ ವೃತ್ತಿಯಲ್ಲಿ ತೊಡಗಿಕೊಂಡಿರುವ ಡಾ. ಸೈಯದ್ ರಿಜ್ವಾನ್ ಅಹ್ಮದ್, ಭಾರತದ ಪ್ರಧಾನಿ ನರೇಂದ್ರ ಮೋದಿಯನ್ನು 'ಚೋರ್' (ಕಳ್ಳ) ಎಂದು ಕರೆದಿದ್ದಕ್ಕೆ ಭಾರತೀಯ ದಂಡ ಸಂಹಿತೆಯ 124ಎ ಸೆಕ್ಷನ್ ಅಡಿಯಲ್ಲಿ 'ದೇಶದ್ರೋಹ'ದ ದೂರು ದಾಖಲಿಸಿದ್ದಾರೆ.

ದೇಶಕ್ಕೆ ಮಾಡಿದ ಅಗೌರವ
"ಅವರ ಟ್ವೀಟ್ ತೀರ ಅವಹೇಳನಕಾರಿಯಾಗಿದೆ. ಪ್ರಧಾನ ಮಂತ್ರಿಯವರು ನಮ್ಮ ಸಾರ್ವಭೌಮತ್ವವನ್ನು ಪ್ರತಿನಿಧಿಸುತ್ತಾರೆ. ಅವರನ್ನು ಚೋರ್ ಎಂದು ಕರೆದಿರುವುದು ದೇಶಕ್ಕೆ ಮಾಡಿದ ಅಗೌರವ. ಅವರ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ಸಲ್ಲಿಸಲಾಗಿದೆ" ಎಂದು ಲಖನೌದಲ್ಲಿ ಎಫ್ಐಆರ್ ದಾಖಲಿಸಿರುವ ರಿಜ್ವಾನ್ ಅವರು ಹೇಳುತ್ತಾರೆ.
| Array |
ರಮ್ಯಾ ಬರೆದಿದ್ದೇನು?
ನರೇಂದ್ರ ಮೋದಿಯವರೇ ಸ್ವತಃ ತಮ್ಮ ಹಣೆಯ ಮೇಲೆ 'ಚೋರ್' ಎಂಬ ಕುಂಚದಿಂದ ಬರೆಯುವಂಥ ಚಿತ್ರವನ್ನು ರಮ್ಯಾ ಅವರು ಟ್ವಿಟ್ಟರ್ ನಲ್ಲಿ ಪ್ರಕಟಿಸಿದ್ದರು. ಜೊತೆಗೆ, ಚೋರ್ ಪಿಎಂ ಚುಪ್ ಹೈ (ಕಳ್ಳ ಪ್ರಧಾನಿ ಬಾಯಿಬಿಚ್ಚುತ್ತಿಲ್ಲ) ಎಂದು ಕೂಡ ದಿವ್ಯಾ ಸ್ಪಂದನಾ ಅವರು ಟ್ವಿಟ್ಟರ್ ಪೋಸ್ಟ್ ನಲ್ಲಿ ಬರೆದಿದ್ದರು.
|
ಕಾಂಗ್ರೆಸ್ಗೆ ಹಾನಿಕರ
ಮೇಡಂ, ನಿಮ್ಮ ಪೋಸ್ಟ್ ಖಂಡಿತ ಟ್ರೋಲ್ ಅಲ್ಲ. ನಾನು ಸಿಟ್ಟಿನಿಂದ ಕುದಿಯುತ್ತಿದ್ದೇನೆ. ನಿಮ್ಮ ಟ್ವೀಟ್ ನನ್ನನ್ನು ಘಾಸಿಯನ್ನಾಗಿ ಮಾಡಿದೆ. ಬಿಜೆಪಿ ಸೇರುವಂತೆ ನನ್ನನ್ನು ಉತ್ತೇಜಿಸುತ್ತಿದೆ. ದಯವಿಟ್ಟು ಇನ್ನು ತೆಗೆಯಿರಿ. ಇದು ನಿಮ್ಮ (ಕಾಂಗ್ರೆಸ್) ಪಕ್ಷಕ್ಕೇ ಹಾನಿಕರ ಎಂದು ಸೈಯದ್ ರಿಜ್ವಾನ್ ಅಹ್ಮದ್ ಅವರು ರಮ್ಯಾ ಅವರನ್ನು ನಿನ್ನೆಯೇ ಕೋರಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications