ಅಮೇಥಿಯಲ್ಲಿ ಕಳ್ಳರನ್ನು ತಡೆಯಲು ಯತ್ನಿಸಿದ ನಿವೃತ್ತ ಯೋಧ ಹತ್ಯೆ
ಲಕ್ನೋ, ಜುಲೈ 29: ಉತ್ತರಪ್ರದೇಶಾ ಅಮೇಥಿ ಜಿಲ್ಲೆಯ ಹೆಚ್ಚುತ್ತಿರುವ ಕ್ರೈಂಗಳ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಕಾ ಗಾಂಧಿ ವಾದ್ರಾ ಇತ್ತೀಚಿಗೆ ಎಚ್ಚರಿಸಿದ್ದರು. ನಿವೃತ್ತ ಯೋಧರನ್ನು ಅಪರಿಚಿತರ ಗುಂಪೊಂದು ಬಡಿದು ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.
ಕಮ್ರೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊದಿಯಾನ್ ಕಾ ಪೂರ್ವ ಗ್ರಾಮದ ನಿವಾಸಿ 64ವರ್ಷ ವಯಸ್ಸಿನ ನಿವೃತ್ತ ಕ್ಯಾಪ್ಟನ್ ಅಮಾನುಲ್ಲಾ ಅವರು ಮೃತ ದುರ್ದೈವಿ. ಶನಿವಾರ ತಡರಾತ್ರಿ ಕ್ಯಾಪ್ಟನ್ ಅವರ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಹಾಕಿ ಸ್ಟಿಕ್ ಗಳಿಂದ ಹೊಡೆದಿದ್ದಾರೆ ಎಂದು ಅಮಾನುಲ್ಲಾ ಅವರ ಪುತ್ರ ಹೇಳಿದ್ದಾರೆ.
"ಮನೆಗೆ ಹೊಂದಿಕೊಂಡಂತೆ ಇರುವ ಅಂಗಡಿಯನ್ನು ದೋಚಲು ಈ ದುಷ್ಕರ್ಮಿಗಳ ತಂಡ ಬಂದಿತ್ತು. ನಾನು ನನ್ನ ಪತಿ ಇದನ್ನು ಪ್ರಶ್ನಿಸಿದೆವು, ಪೊಲೀಸರಿಗೆ ವಿಷಯ ತಿಳಿಸಲು ಮುಂದಾದೆವು, ತಕ್ಷಣ ಮನೆಗೆ ನುಗ್ಗಿ ಏಕಾಏಕಿ ದಾಳಿ ನಡೆಸಿದರು" ಎಂದು ಅಮಾನುಲ್ಲಾ ಅವರ ಪತ್ನಿ ದೂರಿನಲ್ಲಿ ಹೇಳಿದ್ದಾರೆ ಎಂದು ಎ ಎಸ್ ಪಿ ದಯಾರಾಮ್ ತಿಳಿಸಿದರು.

"ಹಲ್ಲೆ ವೇಳೆ ಅಮಾನುಲ್ಲಾ ಅವರ ತಲೆಗೆ ತೀವ್ರವಾಗಿ ಪೆಟ್ಟಾಗಿತ್ತು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುವ ಯತ್ನ ವಿಫಲವಾಗಿದೆ. ಮರಣೋತ್ತರ ಪರೀಕ್ಷೆ ನಂತರ ಘಟನೆ ಬಗ್ಗೆ ಇನ್ನಷ್ಟು ವಿವರಗಳು ತಿಳಿದು ಬರಲಿದೆ, ತನಿಖೆ ಮುಂದುವರೆದಿದೆ' ಎಂದು ಪೊಲೀಸರು ಹೇಳಿದ್ದಾರೆ.
उप्र की कानून व्यवस्था अब प्रशासन के हाथ से निकल गयी है। अपराध होते जा रहे हैं लेकिन भाजपा सरकार की मंशा केवल लीपा-पोती करने की है।
— Priyanka Gandhi Vadra (@priyankagandhi) July 28, 2019
ये मेरे घर अमेठी की घटना है। क्या भाजपा सरकार से वाकई में इस समस्या का कोई हल निकलेगा या इसी तरह लीपापोती कर सोती रहेगी?https://t.co/F9sc0zehuW
ಘಟನೆ ಬಗ್ಗೆ ಪ್ರಿಯಾಂಕಾ ಪ್ರತಿಕ್ರಿಯೆ:
"ನನ್ನ ಸ್ವಕ್ಷೇತ್ರ ಅಮೇಥಿಯಲ್ಲಿ ಇಂಥ ದುರ್ಘಟನೆ ನಡೆದಿರುವುದು ಖೇದಕರ. ಉತ್ತರಪ್ರದೇಶದಲ್ಲಿ ಕಾನೂನು -ಸುವ್ಯವಸ್ಥೆ ಹದಗೆಟ್ಟಿದೆ, ಇದಕ್ಕೆ ಪರಿಹಾರ ಕಂಡುಕೊಳ್ಳದಿದ್ದಾರೆ, ಮತ್ತೆ ಮತ್ತೆ ಮರುಕಳಿಸುತ್ತದೆ" ಎಂದು ಟ್ವೀಟ್ ಮಾಡಿದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಾಬಲ್ಯವಿರುವ ಅಮೇಥಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿರನ್ನು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಸೋಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications