ಅಮೇಥಿಯಲ್ಲಿ ಕಳ್ಳರನ್ನು ತಡೆಯಲು ಯತ್ನಿಸಿದ ನಿವೃತ್ತ ಯೋಧ ಹತ್ಯೆ
ಲಕ್ನೋ, ಜುಲೈ 29: ಉತ್ತರಪ್ರದೇಶಾ ಅಮೇಥಿ ಜಿಲ್ಲೆಯ ಹೆಚ್ಚುತ್ತಿರುವ ಕ್ರೈಂಗಳ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಕಾ ಗಾಂಧಿ ವಾದ್ರಾ ಇತ್ತೀಚಿಗೆ ಎಚ್ಚರಿಸಿದ್ದರು. ನಿವೃತ್ತ ಯೋಧರನ್ನು ಅಪರಿಚಿತರ ಗುಂಪೊಂದು ಬಡಿದು ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.
ಕಮ್ರೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊದಿಯಾನ್ ಕಾ ಪೂರ್ವ ಗ್ರಾಮದ ನಿವಾಸಿ 64ವರ್ಷ ವಯಸ್ಸಿನ ನಿವೃತ್ತ ಕ್ಯಾಪ್ಟನ್ ಅಮಾನುಲ್ಲಾ ಅವರು ಮೃತ ದುರ್ದೈವಿ. ಶನಿವಾರ ತಡರಾತ್ರಿ ಕ್ಯಾಪ್ಟನ್ ಅವರ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಹಾಕಿ ಸ್ಟಿಕ್ ಗಳಿಂದ ಹೊಡೆದಿದ್ದಾರೆ ಎಂದು ಅಮಾನುಲ್ಲಾ ಅವರ ಪುತ್ರ ಹೇಳಿದ್ದಾರೆ.
"ಮನೆಗೆ ಹೊಂದಿಕೊಂಡಂತೆ ಇರುವ ಅಂಗಡಿಯನ್ನು ದೋಚಲು ಈ ದುಷ್ಕರ್ಮಿಗಳ ತಂಡ ಬಂದಿತ್ತು. ನಾನು ನನ್ನ ಪತಿ ಇದನ್ನು ಪ್ರಶ್ನಿಸಿದೆವು, ಪೊಲೀಸರಿಗೆ ವಿಷಯ ತಿಳಿಸಲು ಮುಂದಾದೆವು, ತಕ್ಷಣ ಮನೆಗೆ ನುಗ್ಗಿ ಏಕಾಏಕಿ ದಾಳಿ ನಡೆಸಿದರು" ಎಂದು ಅಮಾನುಲ್ಲಾ ಅವರ ಪತ್ನಿ ದೂರಿನಲ್ಲಿ ಹೇಳಿದ್ದಾರೆ ಎಂದು ಎ ಎಸ್ ಪಿ ದಯಾರಾಮ್ ತಿಳಿಸಿದರು.

"ಹಲ್ಲೆ ವೇಳೆ ಅಮಾನುಲ್ಲಾ ಅವರ ತಲೆಗೆ ತೀವ್ರವಾಗಿ ಪೆಟ್ಟಾಗಿತ್ತು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುವ ಯತ್ನ ವಿಫಲವಾಗಿದೆ. ಮರಣೋತ್ತರ ಪರೀಕ್ಷೆ ನಂತರ ಘಟನೆ ಬಗ್ಗೆ ಇನ್ನಷ್ಟು ವಿವರಗಳು ತಿಳಿದು ಬರಲಿದೆ, ತನಿಖೆ ಮುಂದುವರೆದಿದೆ' ಎಂದು ಪೊಲೀಸರು ಹೇಳಿದ್ದಾರೆ.
उप्र की कानून व्यवस्था अब प्रशासन के हाथ से निकल गयी है। अपराध होते जा रहे हैं लेकिन भाजपा सरकार की मंशा केवल लीपा-पोती करने की है।
— Priyanka Gandhi Vadra (@priyankagandhi) July 28, 2019
ये मेरे घर अमेठी की घटना है। क्या भाजपा सरकार से वाकई में इस समस्या का कोई हल निकलेगा या इसी तरह लीपापोती कर सोती रहेगी?https://t.co/F9sc0zehuW
ಘಟನೆ ಬಗ್ಗೆ ಪ್ರಿಯಾಂಕಾ ಪ್ರತಿಕ್ರಿಯೆ:
"ನನ್ನ ಸ್ವಕ್ಷೇತ್ರ ಅಮೇಥಿಯಲ್ಲಿ ಇಂಥ ದುರ್ಘಟನೆ ನಡೆದಿರುವುದು ಖೇದಕರ. ಉತ್ತರಪ್ರದೇಶದಲ್ಲಿ ಕಾನೂನು -ಸುವ್ಯವಸ್ಥೆ ಹದಗೆಟ್ಟಿದೆ, ಇದಕ್ಕೆ ಪರಿಹಾರ ಕಂಡುಕೊಳ್ಳದಿದ್ದಾರೆ, ಮತ್ತೆ ಮತ್ತೆ ಮರುಕಳಿಸುತ್ತದೆ" ಎಂದು ಟ್ವೀಟ್ ಮಾಡಿದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಾಬಲ್ಯವಿರುವ ಅಮೇಥಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿರನ್ನು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಸೋಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications