ರೌಡಿ ವಿಕಾಸ್ ದುಬೆ ಪೊಲೀಸರ ಆಯುಧಗಳನ್ನೇ ಬಳಸಿ ಹತ್ಯೆ ಮಾಡಿದ್ದ
ಲಕ್ನೋ, ಜುಲೈ 6: ಕಾನ್ಪುರದಲ್ಲಿ ಎಂಟು ಮಂದಿ ಪೊಲೀಸರನ್ನು ಹತ್ಯೆಗೈದಿದ್ದ ರೌಡಿ ಶೀಟರ್ ವಿಕಾಸ್ ದುಬೆ ಪೊಲೀಸರ ಆಯುಧಗಳನ್ನೇ ಬಳಸಿ ಹತ್ಯೆ ಮಾಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ.
Recommended Video
54 ವರ್ಷದ ಪೊಲೀಸ್ ಅಧಿಕಾರಿಯೊಬ್ಬರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಐದು ಬಾರಿ ಗುಂಡು ಹಾರಿಸಲಾಗಿದೆ. ಹಣೆ, ಎದೆ, ಹೊಟ್ಟೆ ಹಾಗೂ ಕಾಲುಗಳಿಗೆ ಗುಂಡು ಹಾರಿಸಿದ್ದಾರೆ. ಹಾಗೆಯೇ ದೇಹದ ಮೇಲೆ ಅನೇಕ ಗಾಯಗಳಾಗಿದ್ದು, ಹತ್ಯೆ ಮಾಡಿದ ಬಳಿಕ ಹಿಂಸೆ ನೀಡಿದ್ದಾರೋ ಅಥವಾ ಹಿಂಸೆ ನೀಡಿ ಬಳಿಕ ಹತ್ಯೆ ಮಾಡಿದ್ದಾರೋ ಎಂದು ತಿಳಿದುಬಂದಿಲ್ಲ.
ವಿಕಾಸ್ ದುಬೆ ಮತ್ತು ಆತನ ಸಹಚರರನ್ನು ಹಿಡಿಯಲು 50 ಮಂದಿ ಪೊಲೀಸ್ ತಂಡ ತೆರಳಿತ್ತು. ಪೊಲೀಸರನ್ನು ಅವರ ಆಯುಧದ ಮೂಲಕವೇ ಹತ್ಯೆ ಮಾಡಲಾಗಿದೆ. 2 9ಎಂಎಂ ಪಿಸ್ತೂಲ್, ಎಕೆ-47, ಇನ್ಸಾಸ್ ರೈಫಲ್ ಸೇರಿದಂತೆ ಹಲವು ಆಯುಧಗಳನ್ನು ಪೊಲೀಸರಿಂದ ಕಿತ್ತುಕೊಂಡಿದ್ದರು.

ಮೂರು ದಿನಗಳಿಂದ ಶೋಧ
ಎಂಟು ಪೊಲೀಸರ ಹತ್ಯೆ ನಡೆಸಿ ತಲೆ ಮರೆಸಿಕೊಂಡಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ ವಿಕಾಸ್ ದುಬೆಗಾಗಿ ಕಳೆದ ಮೂರು ದಿನಗಳಿಂದ ಶೋಧ ನಡೆಯುತ್ತಲೇ ಇದೆ.
ಬಂಧಿತನಾಗಿರುವ ಆತನ ಸಹಚರ ನೀಡಿರುವ ಮಾಹಿತಿ ಮೇರೆಗೆ ಪೊಲೀಸರಿಂದಲೇ ಆತನಿಗೆ ದಾಳಿಯ ವಿಷಯ ಮುಟ್ಟಿತ್ತು. ಹೀಗಾಗಿ ಪೊಲೀಸರು ಮನೆಗೆ ಬರುವ ಮುನ್ನವೇ ಪ್ರತಿದಾಳಿ ನಡೆಸಲು ಆತ ಸಿದ್ಧತೆ ಮಾಡಿಕೊಂಡಿದ್ದ.

ಮನೆ ಮದ್ದುಗುಂಡುಗಳ ಕಾರ್ಖಾನೆ
ಇಷ್ಟಕ್ಕೂ ಆತನಿದ್ದದ್ದು ಬರೀ ಮನೆಯಾಗಿರಲಿಲ್ಲ. ಅದೊಂದು ಮದ್ದುಗುಂಡುಗಳ ಮಿನಿ ಕಾರ್ಖಾನೆಯಾಗಿತ್ತು ಎಂದೇ ಪೊಲೀಸರು ಹೇಳಿದ್ದಾರೆ. ಆತನ ಮನೆಯಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಕೆಜಿ ಸ್ಫೋಟಕಗಳು, ಆರು ನಾಡ ಪಿಸ್ತೂಲ್ಗಳು, 25 ಕಾಟ್ರಿಡ್ಜ್ಗಳು ದೊರೆತಿವೆ.

60 ಪ್ರಕರಣಗಳಿವೆ
ಉತ್ತರಪ್ರದೇಶವೊಂದರಲ್ಲಿಯೇ ವಿಕಾಸ್ ದುಬೆ ವಿರುದ್ಧ 60 ಪ್ರಕರಣಗಳಿವೆ. ಆತ ರಾಜ್ಯದಿಂದ ಪಲಾಯನ ಮಾಡಿದ್ದಾನೆ ಎನ್ನಲಾಗಿದೆ. ಈತನ ಜತೆ ಗುರುತಿಸಿಕೊಂಡಿದ್ದ 21 ಜನರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಮನೆಯಲ್ಲೇ ಬಾಂಬ್ ತಯಾರಿಕೆ:
ವಿಕಾಸ್ ದುಬೆ ಮನೆಯಲ್ಲೇ ಬಾಂಬ್ ತಯಾರಿಸುತ್ತಿದ್ದ. ಇದಕ್ಕಾಗಿ ಸ್ಫೋಟಕಗಳೊಂದಿಗೆ ಭಾರಿ ಪ್ರಮಾಣದಲ್ಲಿ ಕಬ್ಬಿಣದ ಮೊಳೆಗಳನ್ನು ಸಂಗ್ರಹಿಸಿಟ್ಟಿದ್ದ.
ಇಡೀ ಪ್ರದೇಶವನ್ನೇ ಬಾಂಬ್ನಿಂದ ಉಡಾಯಿಸುವುದು ಆತನ ಉದ್ದೇಶವಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಈತ ಹಾಗೂ ಸಹಚರರು ಪೊಲೀಸರ ಮೇಲೆ ಎಕೆ-47 ನಂಥ ಶಸ್ತ್ರಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications