ವಾರಣಾಸಿಯಲ್ಲಿ ಪ್ರಿಯಾಂಕಾ ಸ್ಪರ್ಧೆ ಯಾಕಿಲ್ಲ? ಸ್ಯಾಮ್ ಪಿತ್ರೋಡಾ ನೀಡಿದ ಕಾರಣ
ವಾರಣಾಸಿ, ಏಪ್ರಿಲ್ 26: ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದಕ್ಕೆ ಕಾರಣವನ್ನು ಕಾಂಗ್ರೆಸ್ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡ ನೀಡಿದ್ದಾರೆ.
"ವಾರಣಾಸಿಯಲ್ಲಿ ಸ್ಪರ್ಧಿಸಬಾರದು ಎಂಬುದು ಪ್ರಿಯಾಂಕಾ ಗಾಂಧಿ ಅವರದೇ ನಿರ್ಧಾರ. ಏಕೆಂದರೆ ಅವರ ಜವಾಬ್ದಾರಿಯೇ ಬೇರೆ. ಒಂದು ಕಡೆ ಸ್ಪರ್ಧೆಗೆ ನಿಂತರೆ ಬೇರೆ ಕಡೆ ಗಮನ ನೀಡುವುದಕ್ಕೆ ಸಾಧ್ಯವಾಗುದಿಲ್ಲ. ಒಂದೇ ಒಂದು ಕ್ಷೇತ್ರದ ಬಗ್ಗೆ ಗಮನ ಹರಿಸುವುದಕ್ಕಿಂತ ಎಲ್ಲಾ ಕ್ಷೇತ್ರಗಳ ಬಗ್ಗೆಯೂ ಗಮನ ನೀಡಿ, ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಬೇಕು ಎಂಬುದು ಪ್ರಿಯಾಂಕಾ ಅವರ ಅಭಿಪ್ರಾಯ" ಎಂದು ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.
"ಕಾಂಗ್ರೆಸ್ ಅವರಿಗೆ ಪ್ರಧಾನ ಕಾರ್ಯದರ್ಶಿಯ ಜವಾಬ್ದಾರಿ ನೀಡಿದೆ. ಆದ್ದರಿಂದ ಆ ಜವಾಬ್ದಾರಿಯನ್ನು ನಿಭಾಯಿಸುವ ಬಗ್ಗೆ ಅವರು ಹೆಚ್ಚಿನ ಮಹತ್ವ ನೀಡಲಿದ್ದಾರೆ. ಈ ನಿರ್ಧಾರ ಅವರ ಸ್ವಂತ ನಿರ್ಧಾರ" ಎಂದು ಪಿತ್ರೋಡಾ ಹೇಳಿದ್ದಾರೆ.

ವಾರಣಾಸಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ತಾವು ಸ್ಪರ್ಧೆಗೆ ಸಿದ್ಧ ಎಂದು ಅವರೂ ಹೇಳಿದ್ದರು. ಆದರೆ ಗುರುವಾರ ಪ್ರಕಟವಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾಂಗ್ರೆಸ್ 2014 ರಲ್ಲಿ ಈ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಅಜಯ್ ರೈ ಅವರನ್ನೇ ಮತ್ತೆ ಕಣಕ್ಕಿಳಿಸಿತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications