ಉತ್ತರ ಪ್ರದೇಶದಲ್ಲಿ ರೈತ ವಿರೋಧಿ ಸರ್ಕಾರ ಕಿತ್ತೆಸೆಯುವುದೇ ನಮ್ಮ ಗುರಿ: ಅಖಿಲೇಶ್ ಯಾದವ್
ಲಕ್ನೋ, ಅಕ್ಟೋಬರ್ 14: ''ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2022ರಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರವನ್ನು ತೆಗೆದು ಹಾಕುವುದೇ ತಮ್ಮ ಮುಖ್ಯ ಉದ್ದೇಶವಾಗಿದೆ,'' ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.
ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, 2022ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
"ಬಿಜೆಪಿ ಸರ್ಕಾರದ ವಿರುದ್ಧದ ನಿರಾಶೆಯನ್ನು ನೋಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮತದಾರರು ನಮ್ಮ ಪಕ್ಷವನ್ನು 400 ಕ್ಷೇತ್ರಗಳಲ್ಲಿ ಗೆಲ್ಲುವಂತೆ ಮಾಡಬಹುದು. ಬಿಜೆಪಿ ಸರ್ಕಾರವನ್ನು ತೆಗೆದು ಹಾಕುವುದೇ ನಮ್ಮ ಗುರಿ," ಎಂದು ಅಖಿಲೇಶ್ ಯಾದವ್ ಹೇಳಿದರು.

ಶೀಘ್ರದಲ್ಲೇ ನಕಲಿ ಬಾಬಾರನ್ನು ತೆಗೆದು ಹಾಕಲಾಗುವುದು:
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ ಅಖಿಲೇಶ್ ಯಾದವ್, ನಕಲಿ ಬಾಬಾರನ್ನು ಶೀಘ್ರದಲ್ಲೇ ಅಧಿಕಾರದಿಂದ ತೆಗೆದು ಹಾಕಲಾಗುವುದು ಎಂದು ಕಿಡಿ ಕಾರಿದರು. ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಯುಪಿ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷವೂ ವಿರೋಧ ವ್ಯಕ್ತಪಡಿಸಿತ್ತು. ಅಕ್ಟೋಬರ್ 3ರಂದು ನಡೆದ ಘಟನೆಯಲ್ಲಿ ನಾಲ್ವರು ರೈತರು, ಒಬ್ಬ ಪತ್ರಕರ್ತ ಸೇರಿದಂತೆ ಎಂಟು ಮಂದಿ ಪ್ರಾಣ ಬಿಟ್ಟಿದ್ದರು.
ಮೃತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಅಖಿಲೇಶ್:
ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ರೈತರ ಮೇಲೆ ಹಿಂಸಾಚಾರ ನಡೆದ ಕೆಲವು ದಿನಗಳ ನಂತರ ಅಖಿಲೇಶ್ ಯಾದವ್ ಟಿಕುನಿಯಾ ಗ್ರಾಮದ ಸಂತ್ರಸ್ತ ರೈತರ ಕುಟುಂಬಗಳಿಗೆ ಭೇಟಿ ನೀಡಲು ತೆರಳಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದು, ಖಾಕಿ ಕ್ರಮವನ್ನು ಅಖಿಲೇಶ್ ಯಾದವ್ ಖಂಡಿಸಿದ್ದರು. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು "ರೈತ ವಿರೋಧಿ" ಸರ್ಕಾರ ಎಂದು ಆರೋಪಿಸಿದ್ದರು.

ಲಖೀಂಪುರ್ ಖೇರಿ ಘಟನೆ ಬಗ್ಗೆ ಉಲ್ಲೇಖ:
ಕಳೆದ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖೀಂಪುರ್ ಖೇರಿ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿ ವಾಪಸ್ ಆಗುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಬೆಂಗಾವಲಿನಲ್ಲಿದ್ದ ವಾಹನವನ್ನು ಹರಿಸಲಾಗಿದೆ. ಈ ವೇಳೆ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ರೈತರು ಹೇಳಿಕೊಂಡಿದ್ದಾರೆ. ಸಚಿವರು ಹಾಗೂ ಅವರ ಪುತ್ರ ತಮ್ಮ ಮೇಲಿನ ಆರೋಪವನ್ನು ಪದೇಪದೆ ನಿರಾಕರಿಸುತ್ತಿದ್ದಾರೆ. ಅದಾಗ್ಯೂ ಪೊಲೀಸರು ಆರೋಪಿ ಸ್ಥಾನದಲ್ಲಿರುವ ಸಚಿವರ ಪುತ್ರ ಆಶಿಶ್ ಮಿಶ್ರಾರನ್ನು ಬಂಧಿಸಿರುವ ಬಗ್ಗೆ ಅಖಿಲೇಶ್ ಯಾದವ್ ಉಲ್ಲೇಖಿಸಿದ್ದಾರೆ.
ಬಿಜೆಪಿಯದ್ದು ರೈತ ವಿರೋಧಿ ಸರ್ಕಾರ:
ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ರೈತರು ಮತ್ತು ಸಾರ್ವಜನಿಕರನ್ನು ವಂಚಿಸುವ ಕೆಲಸ ಮಾಡುತ್ತಿದೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಒಂದು ಕಡೆಯಲ್ಲಿ ಬಿಜೆಪಿ ಕಾರ್ಯಕರ್ತರು ರೈತರ ಮೇಲೆಯೇ ವಾಹನಗಳಲ್ಲಿ ಹತ್ತಿಸಿಕೊಂಡು ಹೋಗುತ್ತಾರೆ. ಇನ್ನೊಂದು ಕಡೆಯಲ್ಲಿ ಗೊಬ್ಬರ ಕಳ್ಳತನ ಮತ್ತು ಕೀಟನಾಶಕಗಳ ಬೆಲೆ ಗಗನಮುಖಿ ಆಗುತ್ತಿರುವುದು ಬಿಜೆಪಿಯದ್ದು ರೈತ ವಿರೋಧಿ ಸರ್ಕಾರ ಎಂಬುದನ್ನು ಸ್ಪಷ್ಟವಾಗಿ ಹೇಳುತ್ತದೆ. "ಈ ಸರ್ಕಾರದ ಅಡಿಯಲ್ಲಿ, ಹಣದುಬ್ಬರ ಹೆಚ್ಚಾಗಿದೆ, ನಿರುದ್ಯೋಗ ಹೆಚ್ಚಾಗಿದೆ, ಭ್ರಷ್ಟಾಚಾರ ಹೆಚ್ಚಾಗಿದೆ, ಅಪರಾಧ ಹೆಚ್ಚಾಗಿದೆ, ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ" ಎಂದು ಅವರು ಹೇಳಿದ್ದಾರೆ.
ಯಾವುದೇ ದೊಡ್ಡ ಪಕ್ಷಗಳೊಂದಿಗೆ ಮೈತ್ರಿಯಿಲ್ಲ:
2022ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಇತರೆ ಸಣ್ಣ ಪಕ್ಷಗಳೊಂದಿಗೆ ಕೈಜೋಡಿಸಿ ಚುನಾವಣೆ ಎದುರಿಸಲಿದೆ. ಇದರ ಹೊರತಾಗಿ ಯಾವುದೇ ರಾಷ್ಟ್ರೀಯ ಪಕ್ಷಗಳೊಂದಿಗೆ ಕೈಜೋಡಿಸುವುದಿಲ್ಲ. ಮುಂದಿನ ವರ್ಷದ ಚುನಾವಣೆಗಾಗಿ ರಾಜ್ಯದಲ್ಲಿ "ವಿಜಯ ರಥಯಾತ್ರೆ" ನಡೆಸುವುದಾಗಿ ಅಖಿಲೇಶ್ ಯಾದವ್ ಹೇಳಿದ್ದಾರೆ.
2017ರ ಉತ್ತರ ಪ್ರದೇಶ ಚುನಾವಣೆ ಫಲಿತಾಂಶ:
ಕಳೆದ 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 403 ಸ್ಥಾನಗಳ ಪೈಕಿ ಬಿಜೆಪಿ 312 ರಲ್ಲಿ ಗೆಲುವು ದಾಖಲಿಸಿತ್ತು. ಈ ಪಕ್ಷ ಶೇ. 39.67ರಷ್ಟು ಮತವನ್ನು ಪಡೆದುಕೊಂಡಿತ್ತು. ಅಂದು ಸಮಾಜವಾದಿ ಪಕ್ಷವು 47 ಸ್ಥಾನಗಳನ್ನು, ಬಹುಜನ ಸಮಾಜ ಪಕ್ಷ (BSP) 19 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
-
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications