ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಬಿಗ್ ಶಾಕ್: ಸಂಸದೆ ರಾಜೀನಾಮೆ
Recommended Video

ಲಕ್ನೋ, ಡಿಸೆಂಬರ್ 06: ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಉತ್ತರ ಪ್ರದೇಶದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಉತ್ತರ ಪ್ರದೇಶದ ಬಹ್ರೈಚ್ ನ ಸಂಸದೆಯಾಗಿದ್ದ ಸಾವಿತ್ರಿಬಾಯಿ ಅವರು ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ ಬಿಜೆಪಿ ವಲಯದಲ್ಲಿ ಆಘಾತ ಸೃಷ್ಟಿಸಿದ್ದಾರೆ.
"ಬಿಜೆಪಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ಆದ್ದರಿಂದ ನಾನು ಈ ಪಕ್ಷದಲ್ಲಿ ಇರಲು ಇಷ್ಟಪಡುವುದಿಲ್ಲ" ಎಂದು ರಾಜೀನಾಮೆ ನೀಡಿದ ನಂತರ ಅವರು ಹೇಳಿದ್ದಾರೆ.
2012 ರಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಿದ್ದ ಸಾವಿತ್ರಿ ಅವರು, 2014 ರ ಲೋಕಸಭಾ ಚುನಾವಣೆಯಲ್ಲಿ ಬಹ್ರೈಚ್ ನಿಂದ ಸ್ಪರ್ಧಿಸಿ ಗೆದ್ದಿದ್ದರು.

ರಾಜೀನಾಮೆಗೆ ಕಾರಣವೇನು?
"ನಾನು ಇಂದು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ. ದಲಿತರು ಮತ್ತು ಹಿಂದುಳಿದವರ ಪರ ಇರುವ ಸಂವಿಧಾನ ಮತ್ತು ಮೀಸಲಾತಿಯನ್ನು ಅಳಿಸಿಹಾಕಲು ಪಿತೂರಿ ನಡೆಯುತ್ತಿದೆ. ಬಿಜೆಪಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ" ಆದ್ದರಿಂದ ನಾನು ಈ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಾಧ್ವಿ ಫುಲೆ ಹೇಳಿದ್ದಾರೆ.

ವಿವಾದ ಸೃಷ್ಟಿಸಿದ್ದ ಫುಲೆ
ಇತ್ತೀಚೆಗಷ್ಟೇ ದಲಿತ ಮತ್ತು ಭಗವಂತ ಹನುಮನ ಬಗ್ಗೆ ಫುಲೆ ಅವರು ನೀಡಿದ ಹೇಳಿಕೆ ವಿವಾದ ಸೃಷ್ಟಿಸಿತ್ತು. ದಲಿತರು ಮತ್ತು ಹಿಂದುಳಿದ ವರ್ಗದವರು ಮಂಗಗಳು, ರಾಕ್ಷಸರು ಹನುಮಾನ್ ದಲಿತ ಮತ್ತು ಮನುವಾದಿ ಜನರ ಗುಲಾಮ ಎಂಬ ಹೇಳಿಕೆ ನೀಡಿದ್ದರು. ಇದು ಸಾಕಷ್ಟು ವಿವಾದ ಸೃಷ್ಟಿಸಿತ್ತು.

ದಲಿತರನ್ನೇಕೆ ಮನುಷ್ಯರಂತೆ ನೋಡಲ್ಲ?
ಹನುಮಂತ ಎಲ್ಲವನ್ನೂ ರಾಮನಿಗಾಗಿ ಮಾಡಿದರೂ ಆತನನ್ನು ರಾಮ ಎಂದಿಗೂ ಮನುಷ್ಯನಂತೆ ನೋಡಲಿಲ್ಲ. ಅವನನ್ನು ಮಂಗನೆಂದೇ ನೋಡಲಾಯಿತು. ನಾವು ದಲಿತರನ್ನೇಕೆ ಎಂದಿಗೂ ಮನುಷ್ಯರಂತೆ ನೋಡುವುದಿಲ್ಲ ಎಂದು ಅವರು ಪ್ರಶ್ನಿಸಿದ್ದರು.

ಬಿಜೆಪಿಗೆ ಬಿಗ್ ಶಾಕ್
2019 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೂ ಮುನ್ನ ಇದು ಬಿಜೆಪಿಗೆ ಅತೀ ದೊಡ್ಡ ಶಾಕ್ ಎನ್ನಿಸಿದೆ. ಫುಲೆ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತಾರಾ? ಸ್ಪರ್ಧಿಸಿದರೂ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ? ಈ ಹೊತ್ತಿನಲ್ಲಿ ಬಿಜೆಪಿಯ ಪ್ರಮುಖ ನಾಯಕರು ರಾಜೀನಾಮೆ ನೀಡುತ್ತಿರುವುದು ಪಕ್ಷಕ್ಕೆ ಸಾಕಷ್ಟು ನಷ್ಟ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications