ವಿಕಾಸ್ ದುಬೆ ಸಾವು; ಯುಪಿ ಸರ್ಕಾರಕ್ಕೆ ಸುಪ್ರೀಂ ಮಹತ್ವದ ಸೂಚನೆ
ಲಕ್ನೋ, ಜುಲೈ 20 : ರೌಡಿ ಶೀಟರ್ ವಿಕಾಸ್ ದುಬೆ ಎನ್ ಕೌಂಟರ್ ಬಗ್ಗೆ ತನಿಖೆ ನಡೆಸಲು ಸಮಿತಿಯೊಂದನ್ನು ಉತ್ತರ ಪ್ರದೇಶ ಸರ್ಕಾರ ರಚನೆ ಮಾಡಿದೆ. ಈ ಸಮಿತಿಯ ಸದಸ್ಯರಲ್ಲಿ ಬದಲಾವಣೆ ಮಾಡುವಂತೆ ಸುಪ್ರೀಂಕೋರ್ಟ್ ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿದೆ.
ಸೋಮವಾರ ಸುಪ್ರೀಂಕೋರ್ಟ್ನಲ್ಲಿ ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಸಮಿತಿಯ ಸದಸ್ಯರನ್ನು ಬದಲಾವಣೆ ಮಾಡಿ ಎಂದು ಮುಖ್ಯ ನ್ಯಾಯಮೂರ್ತಿಗಳು ಸರ್ಕಾರಕ್ಕೆ ಸೂಚಿಸಿದರು.
ರೌಡಿ ವಿಕಾಸ್ ದುಬೆ ಹತ್ಯೆ 'ನಕಲಿ ಎನ್ಕೌಂಟರ್' ಅಲ್ಲ: ಪೊಲೀಸರ ಮಾಹಿತಿ
ಒಬ್ಬರು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಒಬ್ಬರು ನಿವೃತ್ತ ಪೊಲೀಸ್ ಅಧಿಕಾರಿಯನ್ನು ಸಮಿತಿಗೆ ಸೇರಿಸಿಕೊಳ್ಳಬೇಕು ಎಂದು ಸಲಹೆ ನೀಡಿದೆ. ಇದಕ್ಕೆ ಉತ್ತರ ಪ್ರದೇಶ ಸರ್ಕಾರ ಒಪ್ಪಿಗೆ ನೀಡಿದ್ದು, ಸಮಿತಿಯಲ್ಲಿ ಬದಲಾವಣೆ ಮಾಡುವುದಾಗಿ ಹೇಳಿದೆ.
ವಿಕಾಸ್ ದುಬೆ ಎನ್ ಕೌಂಟರ್; ಪೊಲೀಸರ ಮುಂದೆ 5 ಪ್ರಶ್ನೆಗಳು
ಪ್ರಸ್ತುತ ಸಮಿತಿಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿದ್ದಾರೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಒಬ್ಬರು ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ಸೇರಿಸಿ ಸಮಿತಿಯನ್ನು ಪುನರ್ ರಚನೆ ಮಾಡಲಾಗುತ್ತದೆ ಎಂದು ಸರ್ಕಾರ ಕೋರ್ಟ್ಗೆ ಹೇಳಿತು.
ಉತ್ತರ ಪ್ರದೇಶವನ್ನು ಬೆಚ್ಚಿ ಬೀಳಿಸಿದ ರೌಡಿ ವಿಕಾಸ್ ದುಬೆ ಯಾರು?
8 ಪೊಲೀಸರ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ವಿಕಾಸ್ ದುಬೆಯನ್ನು ಮಧ್ಯಪ್ರದೇಶದಲ್ಲಿ ಬಂಧಿಸಲಾಗಿತ್ತು. ಆತನನ್ನು ಕಾನ್ಪುರಕ್ಕೆ ಕರೆತರುವಾಗ ಕಾರು ಪಲ್ಟಿಯಾಗಿತ್ತು. ಆಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ವಿಕಾಸ್ ದುಬೆ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದ.
ಈ ಎನ್ ಕೌಂಟರ್ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.