ಅಯೋಧ್ಯೆ ಮಸೀದಿ ನಿರ್ಮಾಣ ಟ್ರಸ್ಟ್:ಸರ್ಕಾರಿ ಪ್ರತಿನಿಧಿ ನಾಮನಿರ್ದೇಶನಕ್ಕೆ ಸುಪ್ರೀಂ ನಕಾರ
ನವದೆಹಲಿ, ಡಿಸೆಂಬರ್ 05: ಅಯೋಧ್ಯೆ ಮಸೀದಿ ಕಟ್ಟಡ ನಿರ್ಮಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳನ್ನು ನಾಮನಿರ್ದೇಶನಗೊಳಿಸುವಂತೆ ನಿರ್ದೇಶನ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಅಯೋಧ್ಯೆಯ ಮಸೀದಿ ಕಟ್ಟಡ ನಿರ್ಮಾಣಕ್ಕಾಗಿ ರಚಿಸಿರುವ ಇಂಡೋ ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಷನ್ ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳನ್ನು ನಾಮನಿರ್ದೇಶನಗೊಳಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು.

ಅರ್ಜಿದಾರರು ರಾಮ ಮಂದಿರ ಟ್ರಸ್ಟ್ ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳು ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ಗೆ ಸೇರಿಸುವಂತೆ ಅರ್ಜಿದಾರರು ಕೋರಿದ್ದರು.
ವಕೀಲರಾದ ಶಿಶಿರ್ ಚತುರ್ವೇದಿ ಮತ್ತು ಕೆಕೆ ಶುಕ್ಲಾ ಸಲ್ಲಿಸಿದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಆರ್ ಎಫ್ ನಾರಿಮನ್ ಮತ್ತು ನ್ಯಾಯಮೂರ್ತಿ ಕೆಎಂ ಜೋಸೆಫ್ ಅವರನ್ನೊಳಗೊಂಡ ನ್ಯಾಯಪೀಠ ವಜಾಗೊಳಿಸಿತು.
ಉತ್ತರ ಪ್ರದೇಶದ ಅಯೋಧ್ಯಾ ರಾಮ ಜನ್ಮಭೂಮಿ ಮತ್ತು ಬಾಬರಿ ಮಸೀದಿ ವಿಷಯದ ವಿವಾದ ದಶಕಗಳ ಇತಿಹಾಸ ಹೊಂದಿದೆ. ಭಾರತದಲ್ಲಿ ಅಯೋಧ್ಯೆ ರಾಮಮಂದಿರ ವಿವಾದ ಎನ್ನುವುದು ಇತಿಹಾಸದ ಪುಟಗಳಲ್ಲಿ ತನ್ನದೇ ಆದ ಸ್ಥಾನ ಹೊಂದಿದೆ. 1528ರಲ್ಲಿ ಇಲ್ಲಿ ಬಾಬರಿ ಮಸೀದಿ ನಿರ್ಮಾಣವಾಗಿತ್ತು ಎನ್ನುವ ವಾದ.
ಆದರೆ 1885ರಿಂದ ಈ ಕುರಿತು ಕಾನೂನು ಹೋರಾಟ ನಡೆಯುತ್ತಲೇ ಇದೆ. ಇದಕ್ಕೆ ಕೊನೆಗೂ ಮುಕ್ತಿ ಸಿಕ್ಕಿದ್ದು ನವೆಂಬರ್ 9, 2019ರಲ್ಲಿ. ಈಗ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ಕೂಡ ಸಿಕ್ಕಿದೆ. ಈಗ ಬಾಬರಿ ಮಸೀದಿ ಧ್ವಂಸ ಪ್ರಕರಣ ಕೂಡ ಮತ್ತೊಂದು ಅಧ್ಯಾಯ ಕಂಡಿದೆ.
ಎಲ್ಕೆ ಅಡ್ವಾಣಿ ಸೇರಿದಂತೆ ಬಹುತೇಕ ಎಲ್ಲರನ್ನೂ ಆರೋಪ ಮುಕ್ತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇತಿಹಾಸವನ್ನೊಮ್ಮೆ ಅವಲೋಕನ ಮಾಡಿದರೆ ಹಲವಾರು ಘಟನೆಗಳು ದಾಖಲಾಗಿವೆ
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications