ಅಖಿಲೇಶ್ ಯಾದವ್ ಚಿಕ್ಕಪ್ಪ ಶಿವಪಾಲ್ ಗೆ 12 ಕೋಣೆಯ ಸರಕಾರಿ ಬಂಗಲೆ
ಲಖನೌ, ಅಕ್ಟೋಬರ್ 12: ಸಮಾಜವಾದಿ ಪಕ್ಷದಿಂದ ಹೊರಬಂದು ಬಿಜೆಪಿಗೆ ಸೇರಬಹುದು ಎಂಬ ಊಹೆ ಇರುವ, ಮುಲಾಯಂ ಸಿಂಗ್ ಯಾದವ್ ರ ತಮ್ಮ ಶಿವಪಾಲ್ ಯಾದವ್ ಗೆ ಲಖನೌದಲ್ಲಿ ಸರಕಾರದಿಂದ ಅದ್ಭುತವಾದ ಬಂಗಲೆ ನೀಡಲಾಗಿದೆ. ಇದಕ್ಕೂ ಮುನ್ನ ಈ ಬಂಗಲೆಯಲ್ಲಿ ಮಾಜಿ ಮುಖ್ಯಮಂತ್ರಿ ಮಾಯಾವತಿ ವಾಸವಾಗಿದ್ದರು.
ಉತ್ತರಪ್ರದೇಶದ ಶಾಸ್ತ್ರೀಜಿ ಮಾರ್ಗದಲ್ಲಿ ಇರುವ ಬಂಗಲೆಯಲ್ಲಿ ಈ ವರ್ಷ ಮೇ ತನಕ ಮಾಯಾವತಿ ವಾಸವಿದ್ದರು. ಮಾಯಾವತಿ ಸೇರಿದಂತೆ ಐವರು ಮಾಜಿ ಮುಖ್ಯಮಂತ್ರಿಗಳು ಸರಕಾರಿ ಬಂಗಲೆಯನ್ನು ತೆರವು ಮಾಡಿಕೊಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು.
ಅಖಿಲೇಶ್ ಯಾದವ್ ಗೆ ಚಿಕ್ಕಪ್ಪ ಶಿವಪಾಲ್ ತಮಗೆ ಈ ಬಂಗಲೆ ಸಿಕ್ಕಿದ್ದಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಧನ್ಯವಾದ ಹೇಳಿದ್ದಾರೆ. ಈ ಬಂಗಲೆಯಲ್ಲೆ ಹನ್ನೆರಡು ಮಲಗುವ ಕೋಣೆಗಳು ಇವೆ. ಹನ್ನೆರಡು ಡ್ರೆಸ್ಸಿಂಗ್ ರೂಮ್ ಗಳಿವೆ. ನಾಲ್ಕು ವಿಶಾಲವಾದ ವರಾಂಡ ಇದೆ. ಎರಡು ಹಜಾರ, ಅಡುಗೆ ಮನೆ, ನಾಲ್ಕು ಭದ್ರತಾ ವೀಕ್ಷಣಾ ಗೋಪುರ, ಸಿಬ್ಬಂದಿ ಉಳಿದುಕೊಳ್ಳುವ ವ್ಯವಸ್ಥೆ ಇದೆ.

"ನಾನು ಸಣ್ಣ ಫ್ಲ್ಯಾಟ್ ನಲ್ಲಿದ್ದೆ. ಐದು ಬಾರಿ ಶಾಸಕ ಹಾಗೂ ಎರಡು ಬಾರಿ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ಸರಕಾರದಿಂದ ದೊಡ್ಡ ಬಂಗಲೆ ಪಡೆಯಲು ನಾನು ಅರ್ಹ ಹಾಗೂ ಅದರ ಅಗತ್ಯ ನನಗೆ ಇದೆ" ಎಂದು ಶಿವಪಾಲ್ ಯಾದವ್ ಹೇಳಿದ್ದಾರೆ.
ಅಖಿಲೇಶ್ ವಿರುದ್ಧ ವಾಗ್ದಾಳಿ ನಡೆಸುವುದಕ್ಕೆ ಪ್ರತಿಯಾಗಿ ಬಿಜೆಪಿ ಸರಕಾರ ನೀಡಿದ ಕೊಡುಗೆ ಈ ಬಂಗಲೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ. ಜತೆಗೆ ತಮ್ಮ ಜೀವಕ್ಕೆ ಬೆದರಿಕೆ ಇದೆ ಎಂಬ ಗುಪ್ತಚರ ವರದಿ ನಿಜ ಎಂದು ಕೂಡ ಶಿವಪಾಲ್ ಹೇಳಿದ್ದಾರೆ.
ಅಖಿಲೇಶ್ ಯಾದವ್ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರಹಾಕಿದ ಮೇಲೆ ಶಿವಪಾಲ್ ಯಾದವ್ ಸ್ವಂತ ಪಕ್ಷ ಸ್ಥಾಪನೆ ಮಾಡಿದ್ದರು. ಉತ್ತರ ಪ್ರದೇಶದ ಎಂಬತ್ತು ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದಾರೆ. ಆದರೆ ಅಧಿಕೃತವಾಗಿ ಸಮಾಜವಾದಿ ಪಕ್ಷ ತೊರೆಯದ ಶಿವಪಾಲ್ ಯಾದವ್, ಹೊಸ ಬಂಗಲೆಯನ್ನು ತಮ್ಮ ಹೊಸ ಪಕ್ಷದ ಕೆಲಸಕ್ಕೆ ಬಳಸುವ ಸಾಧ್ಯತೆ ಇದೆ.
ಮಾಜಿ ಮುಖ್ಯಮಂತ್ರಿಯೊಬ್ಬರು ಇದ್ದ ವಿಶಾಲವಾದ ಬಂಗಲೆಯಲ್ಲಿ ಶಿವಪಾಲ್ ಯಾದವ್ ಗೆ ಹಂಚಿಕೆ ಮಾಡಬಹುದಾ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ. ಇನ್ನು ಶಿವಪ್ರಸಾದ್ ಮಾತನಾಡಿ, ನಮ್ಮ ಹೋರಾಟ ಬಿಜೆಪಿ ವಿರುದ್ಧ ಹಾಗೇ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಸಮಾಜವಾದಿ ಪಕ್ಷದಲ್ಲಿ ಶಿವಪಾಲ್ ಯಾದವ್ ರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂಬ ಮಾತು ಕೇಳಿಬಂದಿದ್ದು, ಈಚೆಗೆ ಬಿಜೆಪಿಯ ನಾಯಕರನ್ನು ಭೇಟಿ ಆಗಿದ್ದರು ಎಂಬ ಸುದ್ದಿ ಇದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications