ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೈ ಸಿಎಂ ಆಪ್ತರ ಮೇಲೆ ಐಟಿ ದಾಳಿ, ರಾಹುಲ್ ಮೌನವೇಕೆ?: ಸ್ಮೃತಿ ಇರಾನಿ

|
Google Oneindia Kannada News

ಅಮೇಥಿ, ಏಪ್ರಿಲ್ 11: ಮಧ್ಯ ಪ್ರದೇಶದ ಸಿಎಂ ಕಮಲ್‌ನಾಥ್ ಅವರ ಆಪ್ತರ ಮನೆಯ ಮೇಲೆ ಐಟಿ ದಾಳಿ ನಡೆದಿರುವ ಬಗ್ಗೆ ರಾಹುಲ್ ಗಾಂಧಿ ಏಕೆ ಮೌನವಾಗಿದ್ದಾರೆ ಎಂದು ಬಿಜೆಪಿಯ ಕೇಂದ್ರ ಮಂತ್ರಿ ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಅಮೇಥಿಯಲ್ಲಿ ರಾಹುಲ್ ಗಾಂಧಿ ಎದುರು ಚುನಾವಣೆಗೆ ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

ಅಮೇಥಿ ಕ್ಷೇತ್ರದ ಅಭ್ಯರ್ಥಿ ಸ್ಮೃತಿ ಇರಾನಿ ಆಸ್ತಿ, ಸಾಲ ವಿವರ ಅಮೇಥಿ ಕ್ಷೇತ್ರದ ಅಭ್ಯರ್ಥಿ ಸ್ಮೃತಿ ಇರಾನಿ ಆಸ್ತಿ, ಸಾಲ ವಿವರ

ಮಧ್ಯ ಪ್ರದೇಶ ಸಿಎಂ ಕಮಲನಾಥ್ ಅವರ ಆಪ್ತರ ಮೇಲೆ ಐಟಿ ದಾಳಿ ನಡೆದ ವೇಳೆ 281 ಕೋಟಿ ರೂಪಾಯಿ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ಈ ಹಣ ಪಕ್ಷವೊಂದಕ್ಕೆ ಸಾಗಿಸಲಾಗುತ್ತಿದ್ದು ಎನ್ನಲಾಗುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡರು ಪ್ರಶ್ನೆ ಮಾಡುತ್ತಿದ್ದಾರೆ.

Smriti Irani questioned Rahul Gandhi silence about IT raid on MP CM close aides

ಈ ಬಗ್ಗೆ ಮಾತನಾಡಿದ ಸ್ಮೃತಿ ಇರಾನಿ, ರಾಹುಲ್ ಗಾಂಧಿ ಅವರು ಐಟಿ ದಾಳಿ ಬಗ್ಗೆ ಮೌನವಾಗಿರುವುದು ಅವರ ನಿಜ ಬಣ್ಣ ತೋರಿಸುತ್ತಿದೆ ಎಂದಿದ್ದಾರೆ.

ಮಹಿಳೆಯರು ಮತ್ತು ಗರ್ಭವತಿಯರಿಗಾಗಿ ಮೀಸಲಿಟ್ಟಿದ್ದ ಹಣವನ್ನು ಲೂಟಿ ಮಾಡುತ್ತಾರೆಂದರೆ ಯಾವ ರೀತಿಯ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಅರ್ಥಮಾಡಿಕೊಳ್ಳಬಹುದು ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ಮೋದಿ ಅವರು ಐದು ವರ್ಷ ಪ್ರಧಾನ ಸೇವಕರಾಗಿ ದೇಶದ ಸೇವೆ ಮಾಡಿದ್ದಾರೆ, ಅವರಿಗೆ ದೇಶದ ಜನತೆ ಮತ್ತೊಂದು ಅವಕಾಶವನ್ನು ನೀಡಲಿದ್ದಾರೆ ಎಂದು ಹೇಳಿದರು.

English summary
Union minister Smriti Irani questioned Rahul Gandhi's silence about IT raid on Madya Pradesh CM Kamalnath's close aides. IT department detained 281 crore unaccounted money from Madya Pradesh CM's close aides.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X