ವಾರಾಣಸಿಯಲ್ಲಿ ಹಸಿವಿನಿಂದ ಎಲೆ ತಿಂದರೆ ಈ ಆರು ಮಕ್ಕಳು?
ವಾರಾಣಸಿ (ಉತ್ತರಪ್ರದೇಶ), ಮಾರ್ಚ್ 27: ಹಸಿವಿನಿಂದ ಮಕ್ಕಳು ಎಲೆಗಳನ್ನು ತಿನ್ನುತ್ತಿರುವ ಕರುಳು ಹಿಂಡುವ ವರದಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ವಾರಾಣಸಿಯಿಂದ ಬಂದಿದೆ. ವಾರಾಣಸಿ ಜಿಲ್ಲೆಯ ಬಾರಾಗಾಂವ್ ಪ್ರದೇಶಕ್ಕೆ ಬುಧವಾರ ಜಿಲ್ಲಾಡಳಿತದ ಅಧಿಕಾರಿಗಳು ಧಾವಿಸಿದ್ದು, ಮುಸಾಹರ್ ಸಮುದಾಯಕ್ಕೆ ಸೇರಿದ ಈ ಆರು ಮಕ್ಕಳ ಕುಟುಂಬಕ್ಕೆ ನೆರವು ನೀಡಲು ಮುಂದಾಗಿದ್ದಾರೆ.
ಕೊರೊನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಮಕ್ಕಳ ಫೋಟೋ ಗುರುವಾರ ವೈರಲ್ ಆಗಿತ್ತು. ಸ್ಟೀಲ್ ಪಾತ್ರೆಯಲ್ಲಿ ಎಲೆಯ ಭಾಗವೊಂದನ್ನು ತಿನ್ನುತ್ತಿರುವ ದೃಶ್ಯ ಇರುವ ವಿಡಿಯೋ ಕೂಡ ಹರಿದಾಡಿತ್ತು. ಈ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ರಾಜ್ ಶರ್ಮಾ ಮಾತನಾಡಿ, ಈ ಹಳ್ಳಿಯ ಮಕ್ಕಳು ಈ ಎಲೆಗಳನ್ನು ತಿನ್ನುತ್ತಾರೆ. ಈ ಕುಟುಂಬಕ್ಕೆ ರೇಷನ್ ಕಾರ್ಡ್ ಇದೆ. ಈ ತಿಂಗಳ ದಿನಸಿಯನ್ನೂ ತೆಗೆದುಕೊಂಡಿದ್ದಾರೆ. ಈ ದಿನ ಹೆಚ್ಚುವರಿ ದಿನಸಿ ಕೂಡ ನೀಡಲಾಗಿದೆ ಎಂದಿದ್ದಾರೆ.
ಈ ಕುಟುಂಬಕ್ಕೆ ಸಮಸ್ಯೆ ಇರುವುದಾಗಿ ಮಾಧ್ಯಮಗಳಿಂದ ತಿಳಿದು ಬಂತು. ಆ ಕೂಡಲೇ ಅವರಿಗೆ ಎಲ್ಲ ಅಗತ್ಯ ಪದಾರ್ಥಗಳನ್ನು ಒದಗಿಸಲಾಗಿದೆ ಎಂದು ಕೂಡ ಅವರು ತಿಳಿಸಿದ್ದು, ಇನ್ನೂ ಅಗತ್ಯ ನೆರವು ಒದಗಿಸುವುದಾಗಿ ಹೇಳಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಮೇಲೆ, ಪೊಲೀಸರು ಹಳ್ಳಿಗೆ ಬಂದಿದ್ದಾರೆ. ಯಾವುದೇ ಸಮಸ್ಯೆ ಬಂದಲ್ಲಿ ಹಳ್ಳಿಯ ಮುಖ್ಯಸ್ಥರನ್ನು ಸಂಪರ್ಕಿಸಿ. ಆತ ಸರಿಯಾಗಿ ಸ್ಪಂದಿಸದಿದ್ದಲ್ಲಿ ತಮ್ಮ ಬಳಿ ತಿಳಿಸಿದರೆ ಅಗತ್ಯ ವಸ್ತುಗಳ ಪೂರೈಕೆ ಮಾಡುವುದಾಗಿ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications