ಮಗನ ಶವವನ್ನು ರಿಕ್ಷಾದಲ್ಲಿ ಸಾಗಿಸಿದ ತಾಯಿ: ಹೃದಯ ಕಲಕುವ ಘಟನೆ
ವಾರಾಣಸಿ, ಏಪ್ರಿಲ್ 20: ಕೋವಿಡ್ ಸೋಂಕಿನಲ್ಲಿ ಉಂಟಾಗುತ್ತಿರುವ ಭಾರಿ ಏರಿಕೆಯು ದೇಶದ ಆರೋಗ್ಯ ಮೂಲಸೌಕರ್ಯದ ಕರಾಳ ಸ್ವರೂಪವನ್ನು ತೆರೆದಿಡುತ್ತಿದೆ. ಈ ಸನ್ನಿವೇಶವು ಕೋವಿಡ್ ಮಾತ್ರವಲ್ಲದೆ, ಇತರೆ ಸಾಮಾನ್ಯ ರೋಗಿಗಳಿಗೂ ಆರೋಗ್ಯ ಸೇವೆಗಳು ಸರಿಯಾಗಿ ಸಿಗದಂತೆ ಮಾಡಿದೆ.
ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಆಸ್ಪತ್ರೆ ಹುಡುಕುವ ಪ್ರಯತ್ನದ ನಡುವೆ ಮೃತಪಟ್ಟಿದ್ದಾರೆ. ಸಾವಿನ ಬಳಿಕವೂ ಅವರಿಗೆ ಸೂಕ್ತ ಗೌರವ ಸಿಕ್ಕಿಲ್ಲ. ಅವರು ಮೃತಪಟ್ಟ ಬಳಿಕ ದೇಹ ಕೊಂಡೊಯ್ಯಲು ಆಂಬುಲೆನ್ಸ್ ದೊರಕದ ಕಾರಣ ಅವರ ತಾಯಿ ಇ-ರಿಕ್ಷಾದಲ್ಲಿ ಶವವನ್ನು ಸಾಗಿಸಿದ್ದಾರೆ.
ಜಾವುನ್ಪುರದ ನಿವಾಸಿಯಾಗಿರುವ ವಿನಯ್ ಸಿಂಗ್ ಅವರು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. ವೈದ್ಯಕೀಯ ಚಿಕಿತ್ಸೆಯ ತುರ್ತು ಅಗತ್ಯಕ್ಕಾಗಿ ಅವರು ವಾರಾಣಸಿಗೆ ತೆರಳಿದ್ದರು. ಮೊದಲು ಬನಾರಸ್ ಹಿಂದೂ ವಿವಿಗೆ ತೆರಳಿದ್ದ ಅವರಿಗೆ ಅಲ್ಲಿ ಕೋವಿಡ್ ಯೇತರ ಹಾಸಿಗೆಗಳ ಕೊರತೆ ಕಾರಣ ಚಿಕಿತ್ಸೆ ನಿರಾಕರಿಸಲಾಯಿತು. ಬಿಕ ಅವರು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾದರು. ಆದರೆ ಅಲ್ಲಿ ಸೂಕ್ತ ಚಿಕಿತ್ಸೆ ದೊರಕದೆ ತಾಯಿಯ ಕಣ್ಣೆದುರೇ ಮೃತಪಟ್ಟಿದ್ದಾರೆ.
A Helpless Mother Lost His Son In PM Constituency Varanasi
— Sanwar Ali (@SanwarSpeaks) April 20, 2021
Who Is Responsible ? Who Is Accountable ? pic.twitter.com/UqbTtDzmeW
ಮಗನ ಸಾವಿನ ಆಘಾತದ ನಡುವೆಯೂ ತಾಯಿ, ಮೃತದೇಹವನ್ನು ಮರಳಿ ತಮ್ಮ ಊರಿಗೆ ಸಾಗಿಸುವ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಿದ್ದಾರೆ. ಆದರೆ ಎಷ್ಟೇ ಪ್ರಯತ್ನಿಸಿದರೂ ಅವರಿಗೆ ಆಂಬುಲೆನ್ಸ್ ಸಿಗಲಿಲ್ಲ. ಕೊನೆಗೆ ಇ-ರಿಕ್ಷಾವೊಂದನ್ನು ಬಾಡಿಗೆಗೆ ಹೊಂದಿಸಲು ಯಶಸ್ವಿಯಾಗಿದ್ದಾರೆ. ತನ್ನ ಮಗನ ದೇಹವನ್ನು ಆ ತಾಯಿ ಆಟೊರಿಕ್ಷಾದಲ್ಲಿ ಇರಿಸಿಕೊಂಡು ಕೊಂಡೊಯ್ಯುತ್ತಿರುವ ಹೃದಯವಿದ್ರಾವಕ ಘಟನೆಯ ಚಿತ್ರಗಳು ವೈರಲ್ ಆಗಿವೆ.

ರಾಜ್ಯದಲ್ಲಿ ಯಾವುದೇ ರೀತಿಯ ಆರೋಗ್ಯ ಸೇವೆಗೆ ಕೊರತೆಯಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳುತ್ತಿರುವಾಗ, ಚಿಕಿತ್ಸೆಗೆ ಹಾಸಿಗೆ ಸಿಗದೆ, ಕೊನೆಗೆ ಶವ ಕೊಂಡೊಯ್ಯಲೂ ವಾಹನ ಸಿಗದೆ ಪರದಾಡಿದ ಅಸಹಾಯಕ ಮಹಿಳೆಯ ಸ್ಥಿತಿ ಸರ್ಕಾರದ ವಿರುದ್ಧದ ಟೀಕೆಗೆ ಗುರಿಯಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications