ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರನ ಮೇಲೆ ದುಷ್ಕರ್ಮಿಗಳಿಂದ ಫೈರಿಂಗ್
ಲಕ್ನೋ,ಮಾರ್ಚ್ 03: ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರನ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಉತ್ತರ ಪ್ರದೇಶ ರಾಜಧಾನಿ ಲಕ್ನೋನಲ್ಲಿ ಕಾನೂನು ವ್ಯವಸ್ಥೆಯ ಸ್ಥಿತಿಯ ಬಗ್ಗೆ ಕೆಲವು ಪ್ರಶ್ನೆಗಳು ಏಳುತ್ತಿವೆ.
ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರ ಆಯುಷ್ ಮೇಲೆ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಫೈರಿಂಗ್ ನಡೆಸಿ ತಲೆ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. ಲಕ್ನೋನ ಮಡಿಯಾವ ಕ್ಷೇತ್ರದ ಛಟಾಮೀಲ್ ಪ್ರದೇಶದಲ್ಲಿ ಆಯುಷ್ ಮೇಲೆ ಗುಂಡು ಹಾರಿಸಲಾಗಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಆಯುಷ್ ಎದೆಗೆ ಗುಂಡು ಹಾರಿಸಿ ನಾಪತ್ತೆಯಾಗಿದ್ದಾರೆ, ಗಂಭೀರವಾಗಿ ಗಾಯಗೊಂಡಿದ್ದ ಆಯುಷ್ನನ್ನು ಟ್ರಾಮಾ ಸೆಂಟರ್ಗೆ ಸೇರಿಸಲಾಯಿತು. ಅವರ ಆರೋಗ್ಯ ಈಗ ಸ್ಥಿರವಾಗಿದೆ.
ಪ್ರಕರಣ ದಾಖಲಿಸಲಾಗಿದೆ, ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications