ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರನ ಮೇಲೆ ದುಷ್ಕರ್ಮಿಗಳಿಂದ ಫೈರಿಂಗ್
ಲಕ್ನೋ,ಮಾರ್ಚ್ 03: ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರನ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಉತ್ತರ ಪ್ರದೇಶ ರಾಜಧಾನಿ ಲಕ್ನೋನಲ್ಲಿ ಕಾನೂನು ವ್ಯವಸ್ಥೆಯ ಸ್ಥಿತಿಯ ಬಗ್ಗೆ ಕೆಲವು ಪ್ರಶ್ನೆಗಳು ಏಳುತ್ತಿವೆ.
ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರ ಆಯುಷ್ ಮೇಲೆ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಫೈರಿಂಗ್ ನಡೆಸಿ ತಲೆ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. ಲಕ್ನೋನ ಮಡಿಯಾವ ಕ್ಷೇತ್ರದ ಛಟಾಮೀಲ್ ಪ್ರದೇಶದಲ್ಲಿ ಆಯುಷ್ ಮೇಲೆ ಗುಂಡು ಹಾರಿಸಲಾಗಿದೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಆಯುಷ್ ಎದೆಗೆ ಗುಂಡು ಹಾರಿಸಿ ನಾಪತ್ತೆಯಾಗಿದ್ದಾರೆ, ಗಂಭೀರವಾಗಿ ಗಾಯಗೊಂಡಿದ್ದ ಆಯುಷ್ನನ್ನು ಟ್ರಾಮಾ ಸೆಂಟರ್ಗೆ ಸೇರಿಸಲಾಯಿತು. ಅವರ ಆರೋಗ್ಯ ಈಗ ಸ್ಥಿರವಾಗಿದೆ.
ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಕಾಂಗ್ರೆಸ್ ಶಾಸಕ ರಮಿಂದರ್ ವಿರುದ್ಧ ಎಫ್ಐಆರ್ ದಾಖಲು
ಪ್ರಕರಣ ದಾಖಲಿಸಲಾಗಿದೆ, ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Comments
English summary
Lucknow, Ayush, son of MP has received a gun shot injury and was brought to the hospital for treatment. His condition is stable now. Case will be registered. Investigation underway," says police.