ಲೋಕ ಸಮರ : ರಾಯ್ ಬರೇಲಿಯಿಂದಲೇ ಸೋನಿಯಾ ಗಾಂಧಿ ಸ್ಪರ್ಧೆ?
Recommended Video

ಲಕ್ನೋ, ಫೆಬ್ರವರಿ 22: ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷವು ಉತ್ತರ ಪ್ರದೇಶದಿಂದ ತನ್ನ ಕಾರ್ಯತಂತ್ರ ಆರಂಭಿಸಿದೆ. ಈ ನಡುವೆ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಕೆರಳಿಸಿದೆ.
ಲಭ್ಯ ಮಾಹಿತಿ ಪ್ರಕಾರ, ಈ ಬಗ್ಗೆ ಸದ್ಯಕ್ಕೆ ಯಾವುದೇ ಅಧಿಕೃತ ಘೋಷಣೆ ಹೊರಬಂದಿಲ್ಲ. ಸೋನಿಯಾ ಗಾಂಧಿ(72) ಅವರು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದು, ಈ ಬಾರಿ ಚುನಾವಣಾ ಕಣಕ್ಕಿಳಿಯುವುದೇ ಅನುಮಾನ ಎಂಬ ಸುದ್ದಿಯೂ ಇದೆ.
19ವರ್ಷಗಳ ಕಾಲ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವರು 2017ರಲ್ಲಿ ಪಕ್ಷದ ಜವಾಬ್ದಾರಿಯನ್ನು ಪುತ್ರ ರಾಹುಲ್ ಗಾಂಧಿಗೆ ವಹಿಸಿಕೊಟ್ಟರು. ಸದ್ಯ ಯುಪಿಎ ಚೇರ್ಮನ್ ಆಗಿ ಸೋನಿಯಾ ಗಾಂಧಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೈತ್ರಿ ಪಕ್ಷಗಳ ಜತೆ ಸಂಪರ್ಕ ಸಂಪನ್ಮೂಲ ವ್ಯಕ್ತಿಯಾಗಿ ಸೋನಿಯಾ ಇದ್ದಾರೆ.

ಕಳೆದ ಹಲವು ವರ್ಷಗಳಿಂದ ಸೋನಿಯಾ ಗಾಂಧಿ ಅವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಅಮೆರಿಕ ಸೇರಿದಂತೆ ವಿವಿಧ ದೇಶಗಳಲ್ಲಿ ಚಿಕಿತ್ಸೆ ಪಡೆದು ಮತ್ತೆ ಭಾರತಕ್ಕೆ ಮರಳಿದ್ದಾರೆ. ಅನಾರೋಗ್ಯ ಬಾಧಿಸಿದರೂ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿಲ್ಲ.
ಆದರೆ, ಈಗ ಪುತ್ರಿ ಪ್ರಿಯಾಂಕಾ ಗಾಂಧಿ ಅವರು ಸಕ್ರಿಯ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಬಳಿಕ ಸೋನಿಯಾ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ರಾಯ್ ಬರೇಲಿ ಕ್ಷೇತ್ರವನ್ನು ಪುತ್ರಿ ಪ್ರಿಯಾಂಕಾಗೆ ಬಿಟ್ಟು ಕೊಡುತ್ತಾರೆ ಎಂಬ ಸುದ್ದಿಯೂ ಬಂದಿದೆ.
ಅಮೇಥಿಯಲ್ಲಿ 1999ರಲ್ಲಿ ಗೆಲುವು ಸಾಧಿಸಿದ್ದ ಸೋನಿಯಾ ನಂತರ ಅಮೇಥಿಯನ್ನು ಪುತ್ರ ರಾಹುಲ್ ಗೆ ಬಿಟ್ಟುಕೊಟ್ಟರು. 2004ರಿಂದ ರಾಹುಲ್ ಅಲ್ಲಿಂದಲೇ ಸ್ಪರ್ಧಿಸುತ್ತಿದ್ದಾರೆ.
ಮತ್ತೆ ರಾಯ್ ಬರೇಲಿಗೆ ಮರಳಿದ ಸೋನಿಯಾ ಅವರು ಸ್ಪರ್ಧಿಸಿದರೆ ಮುಖ್ಯ ಕ್ಷೇತ್ರ ರಾಯ್ ಬರೇಲಿ ಆಗಲಿದ್ದು, ಮತ್ತೊಂದು ಕ್ಷೇತ್ರವನ್ನು ದಕ್ಷಿಣ ಭಾಗದಲ್ಲಿ (ಈ ಹಿಂದೆ ಬಳ್ಳಾರಿಯಿಂದ ಸ್ಪರ್ಧಿಸಿದಂತೆ) ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯೂ ಇದೆ.
ಪ್ರಿಯಾಂಕಾ ಗಾಂಧಿ ಅವರು ಪ್ರಸ್ತುತ ಲಕ್ನೋ ಪೂರ್ವ ವಿಭಾಗದ ಚುನಾವಣಾ ಉಸ್ತುವಾರಿಯಾಗಿದ್ದು, ಉತ್ತರಪ್ರದೇಶದಲ್ಲಿ ಕಾಂಗ್ರೆಸ್ಸಿಗೆ ಬಲ ತುಂಬಲು ಮುಂದಾಗಿದ್ದಾರೆ. ಉತ್ತರಪ್ರದೇಶದಲ್ಲಿ ಈಗ ಬಿಜೆಪಿ ವಿರುದ್ಧ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜವಾದಿ ಪಕ್ಷದ ಮೈತ್ರಿ ಜತೆಗೆ ಕಾಂಗ್ರೆಸ್ ವಿರುದ್ಧವೂ ಸೆಣಸಬೇಕಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications