ಬಡವರ ಅಂತ್ಯ ಸಂಸ್ಕಾರಕ್ಕಾಗಿ 3 ಲೋಡ್ ಕಟ್ಟಿಗೆ ಕಳುಹಿಸಿದ ಸೋನಿಯಾ
ರಾಯ್ ಬರೇಲಿ, ಮೇ 25: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಲೋಕಸಭಾ ಕ್ಷೇತ್ರವಾದ ರಾಯ್ ಬರೇಲಿಯಲ್ಲಿ ಬಡವರ ಶವಸಂಸ್ಕಾರ ಮಾಡಲು ಮೂರು ಟ್ರಕ್ ಲೋಡ್ ಕಟ್ಟಿಗೆಯನ್ನು ಕಳುಹಿಸಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಪಕ್ಷದ ವಕ್ತಾರ ವಿನಯ್ ದ್ವಿವೇದಿ, "ಶವಸಂಸ್ಕಾರಕ್ಕಾಗಿ ಕಟ್ಟಿಗೆಗಳನ್ನು ವ್ಯವಸ್ಥೆ ಮಾಡುವಂತೆ ಸೋನಿಯಾಜಿ ತನ್ನ ಪ್ರತಿನಿಧಿ ಕೆ.ಎಲ್. ಶರ್ಮಾ ಅವರಿಗೆ ನಿರ್ದೇಶನ ನೀಡಿದ್ದಾರೆ. ಬಡವರಿಗೆ ಅಂತ್ಯ ಸಂಸ್ಕಾರ ನಡೆಸಲೂ ಸಂಕಷ್ಟದಲ್ಲಿರುವ ಸಂದರ್ಭ ಈಗ ಪಕ್ಷದ ಕಾರ್ಯಕರ್ತರು ಅಂತ್ಯ ಸಂಸ್ಕಾರಕ್ಕೆ ಸಹಾಯ ಮಾಡುವ ಮೂಲಕ ತಮ್ಮ ಆತ್ಮೀಯರನ್ನು ಕಳೆದುಕೊಂಡ ಬಡ ಜನರಿಗೆ ಸಹಾಯ ಮಾಡಲಿದೆ" ಎಂದು ಹೇಳಿದ್ದಾರೆ.
ರಾಯ್ ಬರೇಲಿಯಲ್ಲಿ ಶವಸಂಸ್ಕಾರವು ಗಂಗಾ ನದಿ ತೀರದಲ್ಲಿರುವ ಗೋಕ್ನಾ, ಡಾಲ್ಮಾ, ಮತ್ತು ಗೆಗಾಸೊ ಘಾಟ್ಗಳಲ್ಲಿ ನಡೆಯುತ್ತದೆ. ಅನೇಕ ಬಡ ಜನರು ತಮ್ಮ ಮನೆಯವರ ಕೊನೆಯ ವಿಧಿ ಸಂಸ್ಕಾರಕ್ಕೆ ಕಟ್ಟಿಗೆ ಖರೀದಿಸಲೂ ಸಾಧ್ಯವಾಗದೆ ನದಿಯ ಪಕ್ಕದಲ್ಲಿ ಮೃತರನ್ನು ಸಮಾಧಿ ಮಾಡುತ್ತಿದ್ದಾರೆ.

ಈ ತಿಂಗಳ ಆರಂಭದಲ್ಲಿ ಯುಪಿಯಲ್ಲಿ ಗಂಗಾ ನದಿ ತೀರದಲ್ಲಿ ಶಂಕಿತ ಕೋವಿಡ್ ರೋಗಿಗಳ ಶವಗಳು ತೇಲಿ ಬಂದಿರುವುದು ಸುದ್ದಿಯಾಗಿತ್ತು. ಈ ಬಳಿಕ ಯೋಗಿ ಆದಿತ್ಯನಾಥ್ ಸರ್ಕಾರವು ಹಳ್ಳಿಗಳಲ್ಲಿನ ಎಲ್ಲ ಬಡವರ ಅಂತ್ಯಕ್ರಿಯೆಗಾಗಿ 5,000 ರೂ.ಗಳನ್ನು ಘೋಷಿಸಿದರೆ, ರಾಜ್ಯದ ಕಾರ್ಮಿಕ ಕಲ್ಯಾಣ ಮಂಡಳಿಯು ಪ್ರತ್ಯೇಕವಾಗಿ 7,500 ರೂಗಳನ್ನು ಘೋಷಿಸಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications