ಮುಲಾಯಂ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ: ಆಸ್ಪತ್ರೆ ಮಾಹಿತಿ
ಲಕ್ನೋ, ಆಗಸ್ಟ್ 12: ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.
ಮೂತ್ರನಾಳ ಸಮಸ್ಯೆಯಿಂದ ಬಳಲುತ್ತಿರುವ ಮುಲಾಯಂ ಅವರನ್ನು ವೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೊವಿಡ್ ಪರೀಕ್ಷೆಯನ್ನೂ ನಡೆಸಿದ್ದ, ವರದಿ ನೆಗೆಟಿವ್ ಬಂದಿತ್ತು.
80 ವರ್ಷದ ಮುಲಾಯಂ ಸಿಂಗ್ ಅವರು ಅಲ್ಟ್ರಾಸೌಂಡ್, ರಕ್ತ ಮತ್ತು ಮೂತ್ರ ಪರೀಕ್ಷೆಗೆ ಒಳಗಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಆದರೆ ಅವರು ಇನ್ನೂ ಸಂಪೂರ್ಣವಾಗಿ ಗುಣಮುಖರಾಗಿಲ್ಲ ಎಂದು ಆಸ್ಪತ್ರೆ ನಿರ್ದೇಶಕ ಡಾ. ರಾಕೇಶ್ ಕಪೂರ್ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು: 1989ರ ಅಜಿತ್, ಮುಲಾಯಂ ನೆನಪಾದ್ರು
ಪಕ್ಷದ ವಕ್ತಾರ ರಾಜೇಂದ್ರ ಚೌದರಿ ಮಾತನಾಡಿ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪತ್ನಿ ಡಿಂಪಲ್ ಯಾದವ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿಸಿದರು.
ಮುಲಾಯಂ ಸಿಂಗ್ ಯಾದವ್ ಅವರನ್ನು ಈ ವರ್ಷದ ಆರಂಭದಲ್ಲಿಸಹ ಮೇದಾಂತ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಎರಡನೇ ಬಾರಿಗೆ ಯಾದವ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಾದವ್ ವಾಡಿಕೆಯ ತಪಾಸಣೆಗಾಗಿ ಹೋಗಿದ್ದರು ಮತ್ತು ಚಿಕಿತ್ಸೆಯನ್ನು ಪಡೆಯಲು ವೈದ್ಯರು ಸಲಹೆ ನೀಡಿದ್ದರು ಎಂದು ಎಸ್ಪಿಪಕ್ಷದ ಮುಖಂಡರು ಸುದ್ದಿ ಸಂಸ್ಥೆಗಳಿಗೆ ತಿಳಿದ್ದಾರೆ.
ಯಾದವ್ ಅವರು ಹೊಟ್ಟೆ ನೋವಿನ ಕಾರಣ ಕಳೆದ ವರ್ಷದ ಡಿಸೆಂಬರ್ನಲ್ಲಿ ಮುಂಬೈನ ಖಾಸಗಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ಮೂರು ದಿನಗಳ ನಂತರ ಡಿಸ್ಚಾರ್ಜ್ ಮಾಡಲಾಗಿತ್ತು,
ಯಾದವ್ 1989 ರಿಂದ 1991, 1993-1995 ಹಾಗೂ 2003-2007 ಮೂರು ಅವಧಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಮಗ ಅಖಿಲೇಶ್ ಯಾದವ್ 2012ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.