ಮನೆಯಲ್ಲಿ ಶಾಂತಿ ನೆಲೆಸಲು ಗೋಮೂತ್ರ ಸಿಂಪಡಿಸಿ: ಯುಪಿ ಸಚಿವರ ವಿಲಕ್ಷಣ ಸಲಹೆ
ಫತೇಪುರ್ ಮೇ 14: ಗೋಮೂತ್ರವನ್ನು ಚಿಮುಕಿಸುವುದರಿಂದ ಮನೆಯಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ ಎಂದು ಉತ್ತರ ಪ್ರದೇಶದ ಸಚಿವ ಧರಂಪಾಲ್ ಸಿಂಗ್ ಶುಕ್ರವಾರ ವಿಲಕ್ಷಣ ಸಲಹೆಯನ್ನು ನೀಡಿದ್ದಾರೆ.
ಇಲ್ಲಿನ ಸುದ್ದಿಗಾರರೊಂದಿಗೆ ಮಾತನಾಡಿದ ಪಶುಸಂಗೋಪನಾ ಸಚಿವರು, ಗಂಗಾ ದೇವಿಯು ಗೋವಿನ ಮೂತ್ರದಲ್ಲಿ ನೆಲೆಸಿದ್ದಾಳೆ. ಇದನ್ನು ಮನೆಯಲ್ಲಿ ಚಿಮುಕಿಸುವುದರಿಂದ ವಾಸ್ತು ದೋಷಗಳು ಅಥವಾ ಇನ್ನಾವುದೇ ಅಡೆತಡೆಗಳು ನಿವಾರಣೆಯಾಗುತ್ತದೆ. ಲಕ್ಷ್ಮೀಜಿ ಹಸುವಿನ ಸಗಣಿಯಲ್ಲಿ ವಾಸಿಸುತ್ತಾಳೆ ಎಂದಿದ್ದಾರೆ.

ಗೋಶಾಲೆಗಳಲ್ಲಿ ಗೋವುಗಳ ದುಃಸ್ಥಿತಿಯ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗೋಶಾಲೆಗಳ ಸುಧಾರಣೆಗೆ ತಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಮತ್ತು ಶೀಘ್ರದಲ್ಲೇ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಹೇಳಿದರು. ಗೋಶಾಲೆ ತೆರಳುವ ಮುನ್ನ ಸಚಿವರು ಪಕ್ಷದ ಪದಾಧಿಕಾರಿಗಳು ಹಾಗೂ ಶಾಸಕರನ್ನು ಭೇಟಿ ಮಾಡಿದರು. ನಂತರ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಗೋಶಾಲೆಗಳಿಗೆ ಸಂಬಂಧಿಸಿದಂತೆ ನಿರ್ದೇಶನ ನೀಡಿದರು.
ಕಳೆದ ವಾರವಷ್ಟೇ ಉತ್ತರಪ್ರದೇಶದಲ್ಲಿ ಶಾಸಕರೊಬ್ಬರು ಇದೇ ರೀತಿ ಸಲಹೆಯನ್ನು ನೀಡಿದ ವಿಡಿಯೋ ವೈರಲ್ ಆಗಿತ್ತು. ಕೋವಿಡ್ ಸೋಂಕು ತಡೆಯಲು ಖಾಲಿ ಹೊಟ್ಟೆಯಲ್ಲಿ ಜನರು ಗೋಮೂತ್ರ ಸೇವಿಸಿಬೇಕು ಎಂದು ಬಿಜೆಪಿ ಶಾಸಕರು ಸಲಹೆ ನೀಡಿದ್ದರು. ತಾವೇ ಗೋಮೂತ್ರ ಕುಡಿದು ಜನರಿಗೆ ಸಲಹೆ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಉತ್ತರ ಪ್ರದೇಶ ರಾಜ್ಯದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಗೆ ಗೋಮೂತ್ರ ಸೇವಿಸಬೇಕು ಎಂದು ಜನರಿಗೆ ಮಾಹಿತಿ ನೀಡಿದ್ದಾರೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮೂರು ಮುಚ್ಚಳ ಗೋಮೂತ್ರವನ್ನು ಒಂದು ಲೋಟ ನೀರಿನಲ್ಲಿ ಬೆರೆಸಿ ಸೇವಿಸಿಬೇಕು ಎಂದು ಹೇಳಿದ್ದಾರೆ.

"ತಾನು ವಿಜ್ಞಾನವನ್ನು ನಂಬದಿದ್ದರೂ ಗೋಮೂತ್ರವನ್ನು ನಂಬುತ್ತೇನೆ. ಗೂಮೂತ್ರ ಸೇವಿಸಿದ ಬಳಿಕ ಅರ್ಧಗಂಟೆ ಬೇರೆ ಏನೂ ಸೇವಿಸಬಾರದು," ಎಂದು ಶಾಸಕರು ವಿಡಿಯೋದಲ್ಲಿ ತಿಳಿಸಿದ್ದಾರೆ.
"ತಾನು ಪ್ರತಿನಿತ್ಯ 18 ಗಂಟೆ ಕೆಲಸ ಮಾಡುತ್ತೇನೆ. ಇದಕ್ಕೆ ಗೋಮೂತ್ರದಿಂದ ಸಿಕ್ಕಿರುವ ಆರೋಗ್ಯವೇ ಕಾರಣವಾಗಿದೆ," ಎಂದು ಶಾಸಕರು ವಿಡಿಯೋದಲ್ಲಿ ವಿವರಣೆ ನೀಡಿದ್ದಾರೆ. ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾಗಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications