ದೀಪಾವಳಿಗೆ ಅಯೋಧ್ಯೆಯ ರಾಮ್ ಕಿ ಪೈಡಿ ಘಾಟ್ನಲ್ಲಿ ಭರ್ಜರಿ ಲೇಸರ್ ಶೋ
ಅಯೋಧ್ಯೆ, ನವೆಂಬರ್ 3: ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ದೀಪೋತ್ಸವ ಆಚರಣೆ ಸೋಮವಾರ ಸಂಜೆ ಅದ್ಧೂರಿಯಾಗಿ ಆರಂಭವಾಗಿದೆ. ಮೆಗಾ ಸಂಭ್ರಮಕ್ಕಾಗಿ ಭವ್ಯವಾದ 'ರಾಮ್ ಕಿ ಪೈಡಿ' ಘಾಟ್ನ್ನು ಬಣ್ಣಬಣ್ಣದ ದೀಪಗಳಿಂದ ಅಲಂಕಾರಗೊಳಿಸಲಾಗಿದೆ. ಘಾಟ್ ದೀಪೋತ್ಸವ ಆಚರಣೆಯ ಪ್ರಮುಖ ಸ್ಥಳವಾಗಿದೆ. ನಗರದ ರಾಮ್ ಕಿ ಪೈಡಿ ಘಾಟ್ನಲ್ಲಿ ಮಂಗಳವಾರ ನಡೆದ ಅತ್ಯಾಕರ್ಷಕ ಲೇಸರ್ ಶೋವನ್ನು ನೂರಾರು ಪ್ರವಾಸಿಗರು ಕಣ್ತುಂಬಿಕೊಂಡರು. ಅಯೋಧ್ಯೆಯಲ್ಲಿ ದೀಪೋತ್ಸವವನ್ನು ಸತತ ಐದನೇ ವರ್ಷ ನಡೆಸಲಾಗುತ್ತಿದೆ. ರಾಮ್ ಕಥಾ ಪಾರ್ಕ್ನಲ್ಲಿ ಶಿಲ್ಪ ಬಜಾರ್ ಉದ್ಘಾಟನೆಯೊಂದಿಗೆ ದೀಪಾವಳಿ ಆಚರಣೆಗಳು ಪ್ರಾರಂಭವಾಗಿವೆ. ಇದು ಬುಧವಾರದಂದು ದೀಪಾವಳಿಯ ಮುನ್ನಾ ಒಂಬತ್ತು ಲಕ್ಷ ಮಣ್ಣಿನ ದೀಪಗಳಿಂದ ಪ್ರಕಾಶಿಸಲ್ಪಡುತ್ತದೆ.
ನಾಗ್ಪುರದ ವಾಟ್ಕರ್ ಸಹೋದರಿಯರಾದ ಭಾಗ್ಯಶ್ರೀ ಮತ್ತು ಧನಶ್ರೀ ಅವರು ಉದ್ಘಾಟನಾ ದಿನದಂದು ರಾಮಾಯಣದ ವಿವಿಧ ಭಾಗಗಳ ಸಂಗೀತ ನಿರೂಪಣೆಯನ್ನು ಪ್ರಸ್ತುತಪಡಿಸಿದರು. ನಂತರ ಲಕ್ನೋದ ಇಶಾ ರತನ್ ಮತ್ತು ಮಿಶಾ ರತನ್ ಅವರಿಂದ ಕಥಕ್ ಪ್ರಸ್ತುತಿಪಡಿಸಲಾಯಿತು.
ಸುದ್ದಿಗಾರರೊಂದಿಗೆ ಮಾತನಾಡಿದ ಅಯೋಧ್ಯೆ ಬಿಜೆಪಿ ಶಾಸಕ ವೇದ್ ಪ್ರಕಾಶ್ ಗುಪ್ತಾ, "ಅಯೋಧ್ಯೆಯಲ್ಲಿ ಸೋಮವಾರ ದೀಪೋತ್ಸವ ಆಚರಣೆ ಪ್ರಾರಂಭವಾಯಿತು. ಇಡೀ ನಗರವನ್ನು ಅಲಂಕರಿಸಲಾಗಿದೆ. ಬುಧವಾರದಂದು ಮುಖ್ಯ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ" ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು 12 ಲಕ್ಷ ಮಣ್ಣಿನ ದೀಪಗಳನ್ನು ಬೆಳಗಿಸಲಿದೆ. ಅದರಲ್ಲಿ ಒಂಬತ್ತು ಲಕ್ಷ ದೀಪಗಳನ್ನು ಸರಯೂ ನದಿ ದಡದಲ್ಲಿ ಬೆಳಗಿಸಲಾಗುವುದು, ಇದು ಹಿಂದಿನ ದೀಪಾವಳಿ ದಾಖಲೆಯನ್ನು ಉತ್ತಮಗೊಳಿಸುತ್ತದೆ. ಕಳೆದ ವರ್ಷ ಹಬ್ಬವನ್ನು ಆಚರಿಸಲು "ದೀಪೋತ್ಸವ" ಸಮಯದಲ್ಲಿ ಆರು ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳನ್ನು ಬೆಳಗಿಸಿ ವಿಶ್ವದಾಖಲೆಯನ್ನು ನಿರ್ಮಿಸಿತು. ಸರ್ಕಾರದ ಹೇಳಿಕೆಯ ಪ್ರಕಾರ, ಸೋಮವಾರದಿಂದ ಪ್ರಾರಂಭವಾಗುವ ಐದು ದಿನಗಳ ಆಚರಣೆಯ ಭಾಗವಾಗಿ ರಾಮ್ ಲೀಲಾಸ್, 3D ಹೊಲೊಗ್ರಾಫಿಕ್ ಪ್ರದರ್ಶನ, ಲೇಸರ್ ಶೋ ಮತ್ತು ಪಟಾಕಿಗಳನ್ನು ಪ್ರದರ್ಶಿಸಲಾಗುತ್ತದೆ.
ನವೆಂಬರ್ 3 ರಂದು ಸಂಜೆ 6 ರಿಂದ 6.30 ರವರೆಗೆ ಪಟ್ಟಣದ ಕೆಲವು ಭಾಗಗಳಲ್ಲಿ ಉಳಿದ ಮೂರು ಲಕ್ಷ ದೀಪಗಳೊಂದಿಗೆ ನದಿಯ ದಡದಲ್ಲಿ ಒಂಬತ್ತು ಲಕ್ಷ ದೀಪಗಳನ್ನು ಬೆಳಗಿಸಲಾಗುತ್ತದೆ. ಅಯೋಧ್ಯೆ ಆಡಳಿತ ಮತ್ತು ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆಯು ದೀಪಗಳನ್ನು ಬೆಳಗಿಸುವ ಕಾರ್ಯಕ್ಕಾಗಿ 12,000 ಸ್ವಯಂಸೇವಕರನ್ನು ಸಜ್ಜುಗೊಳಿಸಿದೆ. ನವೆಂಬರ್ 1 ರಿಂದ 5 ರವರೆಗೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿದ್ದು, ರಾಮ್ ಲೀಲಾವನ್ನು ಪ್ರದರ್ಶಿಸಲು ಶ್ರೀಲಂಕಾದಿಂದ ಸಾಂಸ್ಕೃತಿಕ ತಂಡವನ್ನು ಆಹ್ವಾನಿಸಲಾಗಿದೆ.
ರಾಜ್ಯದ ಎಲ್ಲಾ 75 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ 90,000 ಕ್ಕೂ ಹೆಚ್ಚು ಹಳ್ಳಿಗಳಿಂದ ಮಣ್ಣಿನ ದೀಪಗಳು ಸಕಾಲದಲ್ಲಿ ಅಯೋಧ್ಯೆಗೆ ತಲುಪುವಂತೆ ನೋಡಿಕೊಳ್ಳುವ ಕಾರ್ಯವನ್ನು ನಿಯೋಜಿಸಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಒಂಬತ್ತು ಲಕ್ಷ ದಿಯಾಗಳಲ್ಲಿ, ಉತ್ತರ ಪ್ರದೇಶದ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಗಳ ಆವಾಸ್ ಯೋಜನೆಗಳ ಅಂದಾಜು ಒಂಬತ್ತು ಲಕ್ಷ ಫಲಾನುಭವಿಗಳಿಗೆ ತಲಾ ಒಂದು ಮನೆ ನೀಡಲಾಗುತ್ತಿತ್ತು. ಅದರಂತೆ 9 ಲಕ್ಷ ದೀಪ ಬೆಳಗಾಲಾಗುತ್ತಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

Recommended Video
ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಕಾರಣ ಭವ್ಯ ದೀಪೋತ್ಸವ 2021 ಇನ್ನಷ್ಟು ಮಹತ್ವದ್ದಾಗಿದೆ. ಅಯೋಧ್ಯೆಯು ರಾಜ್ಯದ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳಿಗೆ ಕೇಂದ್ರ ಬಿಂದುವಾಗಿದೆ.ಈ ಕುರಿತು ಮಾತನಾಡಿರುವ ಅಧಿಕಾರಿಗಳು ಇದೊಂದು ಸ್ವಾಗತಾರ್ಹ ಹೆಜ್ಜೆಯಾಗಿದ್ದು, ರಾಜ್ಯದ ಎಲ್ಲಾ ಗ್ರಾಮಗಳು ಮತ್ತು ಜಿಲ್ಲೆಗಳು ಅಯೋಧ್ಯೆಯಲ್ಲಿ ಆಚರಣೆಯ ಭಾಗವಾಗಲು ಅವಕಾಶ ನೀಡುತ್ತಿರುವುದಾಗಿ ತಿಳಿಸಿದೆ.ಯೋಗಿ ಆದಿತ್ಯನಾಥ್ 2017ರಿಂದ ಈ ದೀಪೋತ್ಸವ ಆಚರಣೆಯನ್ನು ನಡೆಸಿಕೊಂಡು ಬಂದಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications