ಸಿಎಂ ಯೋಗಿ ವಿರುದ್ಧ ಪ್ರಚಾರಕ್ಕೆ ಮುಂದಾದ ರೈತ ಸಂಘಟನೆಗಳು
ಲಕ್ನೋ, ಸೆಪ್ಟೆಂಬರ್ 23: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿ ಪ್ರಯತ್ನ ನಡೆಸಿದೆ. ಆದರೆ ಇನ್ನೊಂದೆಡೆ ರೈತ ಸಂಘಟನೆಗಳು ಯೋಗಿ ವಿರುದ್ಧ ಪ್ರಚಾರ ನಡೆಸಲು ಮುಂದಾಗಿವೆ.
ಸಂಯುಕ್ತ ಕಿಸಾನ್ ಮೋರ್ಚಾ ಮಂಗಳವಾರ ಸಭೆ ನಡೆಸಿದ್ದು, ಸೆಪ್ಟೆಂಬರ್ 27 ರಂದು ಭಾರತ ಬಂದ್ಗೆ ಕರೆ ನೀಡಿದ್ದಾರೆ. ಚುನಾವಣೆಗೂ ಮುನ್ನ ರೈತ ಸಂಘಟನೆಗಳು ಮನೆಮನೆಗೂ ತೆರಳಿ ಮೂರು ವಿವಾದಿತ ಕೃಷಿ ಕಾನೂನುಗಳ ಬಗ್ಗೆ ಅರಿವು ಮೂಡಿಸಲು ಮುಂದಾಗಿದ್ದಾರೆ. ಈ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಬಿಜೆಪಿಯು ಕೃಷಿಯಲ್ಲಿ ಖಾಸಗೀಕರಣವನ್ನು ತರಲು ಪ್ರಯತ್ನಿಸುತ್ತಿದೆ.
ಸಣ್ಣ ಹಾಗೂ ಮಧ್ಯಮ ರೈತರು ರೈತ ಸಮುದಾಯದ ಶೇ.82ರಷ್ಟಿದ್ದಾರೆ ಹಾಗೂ ಕೃಷಿಯನ್ನು ಖಾಸಗೀಕರಣಗೊಳಿಸುವ ಮೂಲಕ ಮುಂದಿನ ಐದು ವರ್ಷಗಳಲ್ಲಿ ಸಣ್ಣ ರೈತರನ್ನು ಬದಿಗೊತ್ತಲಾಗುತ್ತದೆ ಎಂದು ಅಖಿಲ ಭಾರತೀಯ ಕಿಸಾನ್ ಸಭಾದ ಪ್ರಧಾನ ಕಾರ್ಯದರ್ಶಿ ಅತುಲ್ ಅಂಜನ್ ಹೇಳಿದ್ದಾರೆ.

ಅಂತಹ ಸಣ್ಣ ರೈತರ ಭೂಮಿಗಳು ಅಂತಿಮವಾಗಿ ದೊಡ್ಡ ಕಂಪನಿಗಳಿಗೆ ಹೋಗುತ್ತದೆ, ರೈತರು ಕಾರ್ಪೊರೇಟ್ ದಾಸರಾಗುತ್ತಾರೆ ದೇಶದಲ್ಲಿ ಶೇ.70ರಷ್ಟು ಯುವಕರು ಕೃಷಿಗೆ ಸಂಬಂಧಿಸಿದ ವ್ಯಾಪಾರವನ್ನು ಅವಲಂಬಿಸಿದ್ದಾರೆ, ಇದು ಕೇವಲ ರೈತರಿಗೆ ಮಾತ್ರವಲ್ಲ ದೇಶಕ್ಕೂ ದುರಂತವಾಗಲಿದೆ ಎಂದು ಹೇಳಿದ್ದಾರೆ. ರೈತ ಸಂಘಟನೆಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, ಬಿಜೆಪಿಗೆ ಮತವನ್ನು ನೀಡದಂತೆ ಕೇಳಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೇಶದ ರೈತರು ಕಳೆದ ಒಂದು ವರ್ಷಗಳಿಂದ ಸತತವಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೂ ಕೇಂದ್ರ ಸರ್ಕಾರ ಮಾತ್ರ ಈ ಕಾಯ್ದೆಗಳನ್ನು ಹಿಂಪಡೆಯುವ ಯಾವುದೇ ಲಕ್ಷಣಗಳೂ ಕಾಣಿಸುತ್ತಿಲ್ಲ.
ಈ ನಡುವೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿರುವ ಸಂಯುಕ್ತ ಕಿಸಾನ್ ಮೋರ್ಚಾ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ಕಿಸಾನ್ ಮಹಾಪಂಚಾಯತ್ ಆಯೋಜಿಸಿದೆ. ಒಕ್ಕೂಟ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಬಿಗಿ ಭದ್ರತೆ ನಡುವೆ ನಡೆಯುತ್ತಿರುವ ಕಿಸಾನ್ ಮಹಾಪಂಚಾಯತ್ಗೆ ಉತ್ತರ ಪ್ರದೇಶದ ಪೊಲೀಸರು ಮುಜಾಫರ್ನಗರದಲ್ಲಿ ಭಾರಿ ಭದ್ರತೆ ಹೆಚ್ಚಿಸಿದ್ದಾರೆ.
ವಿಧಾನಸಭಾ ಚುನಾವಣೆಗೆ ಸಜ್ಜುಗೊಳ್ಳುತ್ತಿರುವ ಉತ್ತರಪ್ರದೇಶಕ್ಕೆ ಈ ಕಿಸಾನ್ ಮಹಾಪಂಚಾಯತ್ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಈ ಹಿಂದೆ ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಿ ಖಂಡನೆಗೆ ಒಳಗಾಗಿತ್ತು.
ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಇಂದು ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಬೃಹತ್ ಸಭೆ ನಡೆಸಿದರು.
ಅಲ್ಲಿ ಅವರು ಮುಂಬರುವ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರತಿಭಟನೆ ಮತ್ತು ಚಳವಳಿ ಮುಂದುವರಿಸುವ ತಮ್ಮ ನಿರ್ಧಾರವನ್ನು ಪುನರುಚ್ಚರಿಸಿದರು. ಬೆರಳೆಣಿಕೆಯಷ್ಟು ರೈತರು ಮಾತ್ರ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕೇಂದ್ರ ಹೇಳುತ್ತಿದೆ.
ಆ ಕೆಲವೇ ಕೆಲವು ರೈತರು ಹೇಗೆ ಪ್ರತಿಭಟಿಸುತ್ತಿದ್ದಾರೆ ಎಂಬುದನ್ನು ನೋಡೋಣ. ನಾವು ಧ್ವನಿ ಎತ್ತೋಣ ಆದ್ದರಿಂದ ಸಂಸತ್ತಿನಲ್ಲಿ ಕುಳಿತವರ ಕಿವಿಗೆ ಅದು ತಲುಪುತ್ತದೆ" ರೈತರು ಹೇಳಿದ್ದಾರೆ.
ರಾಕೇಶ್ ಟಿಕಾಯತ್ ಮತ್ತು ಇತರ ರೈತ ಮುಖಂಡರು ಭಾಗವಹಿಸಿದ ಈ ಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸುಮಾರು 8,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೂಟ ನಡೆಯುತ್ತಿರುವ ಐತಿಹಾಸಿಕ ಜಿಐಸಿ ಮೈದಾನದಲ್ಲಿ ರೈತರಿಂದ ಸ್ಥಳ ಕಿಕ್ಕಿರಿದು ತುಂಬಿದೆ.
ಸರ್ಕಾರ ಏನನ್ನಾದರೂ ಅರ್ಥಮಾಡಿಕೊಂಡರೆ ಒಳ್ಳೆಯದು. ಇಂತಹ ಸಭೆಗಳನ್ನು ದೇಶಾದ್ಯಂತ ನಡೆಸಲಾಗುವುದು. ನಾವು ದೇಶವನ್ನು ಮಾರಾಟ ಮಾಡದಂತೆ ಉಳಿಸಬೇಕಾಗಿದೆ. ರೈತರು, ಕಾರ್ಮಿಕರು ಮತ್ತು ಯುವಕರಿಗೆ ಬದುಕಲು ಅವಕಾಶ ನೀಡಬೇಕು ಎಂದು ಮಹೇಂದ್ರ ಸಿಂಗ್ ಟಿಕಾಯತ್ ಪುತ್ರ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ರಾಜ್ಯದಾದ್ಯಂತ ಇಂತಹ ಪ್ರತಿಭಟನೆಗಳನ್ನು ಮುಂದುವರಿಸಲು ರೈತರು ನಿರ್ಧರಿಸಿದ್ದಾರೆ. ಅಲ್ಲಿ ಅವರು ಮುಂದಿನ ವರ್ಷದ ಚುನಾವಣೆಗೆ ಮುನ್ನ ಆಡಳಿತಾರೂಢ ಯೋಗಿ ಆದಿತ್ಯನಾಥ ಸರ್ಕಾರದ ವಿರುದ್ಧ ಪ್ರಚಾರ ನಡೆಸಲಿದ್ದಾರೆ.
ಅವರು ತಮ್ಮ ಸಂದೇಶವನ್ನು ರಾಜ್ಯದ ಪ್ರತಿಯೊಂದು ಗ್ರಾಮಕ್ಕೂ ತಲುಪಿಸಲು ಯೋಜಿಸಿದ್ದಾರೆ. ಅವರು ಸೆಪ್ಟೆಂಬರ್ 27 ರಂದು ಅಖಿಲ ಭಾರತ ಮುಷ್ಕರವನ್ನು ನಡೆಸಲು ಯೋಜಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications