ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ; 18 ಸಾವು
ಲಕ್ನೋ, ಜುಲೈ 28; ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಐಷಾರಾಮಿ ಖಾಸಗಿ ಬಸ್ಗೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 18 ಜನರು ಮೃತಪಟ್ಟಿದ್ದು,19 ಜನರು ಗಾಯಗೊಂಡಿದ್ದಾರೆ.
ಬಾರಬಂಕಿ ಜಿಲ್ಲೆಯ ರಾಮ್ ಸನೇಹಿ ಘಾಟ್ ಸಮೀಪ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಐಷಾರಾಮಿ ಖಾಸಗಿ ಬಸ್ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ.
ವಿಡಿಯೋ: ಬಸ್ ನಿರ್ವಾಹಕನ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಅಪಘಾತದ ರಭಸಕ್ಕೆ ಬಸ್ನಲ್ಲಿದ್ದ 18 ಜನರು ಮೃತಪಟ್ಟಿದ್ದಾರೆ. 19 ಜನರು ಗಾಯಗೊಂಡಿದ್ದಾರೆ. ಬಸ್ ನಜ್ಜುಗುಜ್ಜಾಗಿದ್ದು, ಗಾಯಗೊಂಡವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಡಿಸಿಎಂ ಲಕ್ಷ್ಮಣ ಸವದಿ ಪುತ್ರನ ಕಾರು ಅಪಘಾತ; ಎಸ್ಪಿ ಸ್ಪಷ್ಟನೆ
ಹಲವು ಶವಗಳು ಜಖಂಗೊಂಡ ಬಸ್ನ ಅವಶೇಷಗಳಡಿ ಸಿಲಕಿದ್ದು ತಡರಾತ್ರಿಯೇ ಕಾರ್ಯಾಚರಣೆ ನಡೆಸಿ ಎಲ್ಲಾ ಶವಗಳನ್ನು ತೆಗೆಯಲಾಗಿದೆ. ಸ್ಥಳೀಯ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.
ನಟ ಸಂಚಾರಿ ವಿಜಯ್ ಅಪಘಾತ ಪ್ರಕರಣ: ಬೈಕ್ ಸವಾರ ನವೀನ್ ಹೇಳಿಕೆ ದಾಖಲು
ಘಟನೆ ಬಗ್ಗೆ ಲಕ್ನೋ ವಲಯದ ಎಡಿಜಿ ಸತ್ಯನಾರಾಯಣ ಸಬತ್ ಮಾಹಿತಿ ನೀಡಿದ್ದಾರೆ. "ಲಾರಿ ಬಸ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. 18 ಜನರು ಮೃತಪಟ್ಟಿದ್ದಾರೆ. 19 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಹೇಳಿದ್ದಾರೆ.