ಉನ್ನಾವ ಅತ್ಯಾಚಾರ ಸಂತ್ರಸ್ತೆಯ ಮನೆಗೆ ಹೋಗ್ತಾರಾ ಸಿಎಂ ಯೋಗಿ?
ಲಕ್ನೊ, ಡಿಸೆಂಬರ್ 8; ಉತ್ತರ ಪ್ರದೇಶದ ಉನ್ನಾವದಲ್ಲಿ ಅತ್ಯಾಚಾರವಾಗಿ ಕೊಲೆಯಾದ ಬಾಲಕಿಯ ಶವ ಸಂಸ್ಕಾರವನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ ಬರುವವರೆಗೂ ಮಾಡುವುದಿಲ್ಲ ಎಂದು ಕುಟುಂಬದವರು ಪಟ್ಟು ಹಿಡಿದಿದ್ದಾರೆ.
ಉನ್ನಾವದ ಬಾಲಕಿ ಮೇಲೆ ಆತ್ಯಾಚಾರ ನಡೆಸಿ ಬಂಧನಕ್ಕೆ ಒಳಗಾಗಿ ಹೊರ ಬಂದಿದ್ದ ಆರೋಪಿಗಳೇ ಕಳೆದ ವಾರ ಬಾಲಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ತೀವ್ರ ಗಾಯಗೊಂಡಿದ್ದ ಆಕೆ, ಚಿಕಿತ್ಸೆ ಫಲಿಸದೇ ಶನಿವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಅಂತ್ಯ ಸಂಸ್ಕಾರಕ್ಕೆ ಶವವನ್ನು ಉನ್ನಾವಗೆ ತೆಗೆದುಕೊಂಡು ಹೋಗಲಾಗಿತ್ತು.
ಭಾನುವಾರ ಮೃತಳ ಅಂತ್ಯ ಸಂಸ್ಕಾರ ನಡೆಸಲು ತಿರ್ಮಾನಿಸಲಾಗಿತ್ತು. ಆದರೆ, ಕುಟುಂಬಸ್ಥರು ಹಾಗೂ ಬಾಲಕಿ ಸಹೋದರಿ ಒಬ್ಬಳು ಮುಖ್ಯಮಂತ್ರಿ ಸ್ಥಳಕ್ಕೆ ಬರುವವರೆಗೂ ಅಂತ್ಯ ಸಂಸ್ಕಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಸಿಎಂ ಯೋಗಿ ಬರಬೇಕು, ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಮೃತಳ ಸಹೋದರಿ ಮಾದ್ಯಮಗಳಿಗೆ ತಿಳಿಸಿದ್ದಾಳೆ. ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಆದರೆ, ಸರ್ಕಾರ ಅಂತ್ಯ ಸಂಸ್ಕಾರ ನಡೆಸಿ ಎಂದು ಮಾತುಕತೆ ನಡೆಸುತ್ತಿದೆ. ಈಗಾಗಲೇ ಮೃತಳಿಗೆ ಪರಿಹಾರವಾಗಿ ಯೋಗಿ ಅವರು 25 ಲಕ್ಷ ರುಪಾಯಿ ಘೋಷಿಸಿದ್ದಾರೆ. ವಿಚಾರಣೆಗಾಗಿ ತ್ವರಿತ ನ್ಯಾಯಾಲಯ ಸ್ಥಾಪಿಸಲಾಗಿದೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಶಾಸಕ ಕುಲದೀಪ ಸಿಂಗ್ ಸೆಹಾರ್ ಹಾಗೂ ಇತರ ಐವರನ್ನು ಬಂಧಿಸಲಾಗಿತ್ತು. ಆದರೆ, ಉನ್ನಾವಗೆ ಸಿಎಂ ಯೋಗಿ ಬರಲೇಬೇಕು ಎಂದು ಪಟ್ಟು ಹಿಡಿದಿರುವುದರಿಂದ ಇನ್ನೂ ಅಂತ್ಯ ಸಂಸ್ಕಾರ ನಡೆದಿಲ್ಲ. ಯೋಗಿ ಅವರು ಉನ್ನಾವ ಗೆ ಹೋಗುತ್ತಾರಾ? ಎಂಬುದು ಸದ್ಯದ ಪ್ರಶ್ನೆಯಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications