ಯುಪಿ: ಬಾರಿ ಬಿಗಿ ಭದ್ರತೆಯೊಂದಿಗೆ ಲಖಿಂಪುರದಲ್ಲಿ ಮತ ಚಲಾಯಿಸಿದ ಅಜಯ್ ಮಿಶ್ರಾ
ಲಖೀಂಪುರ ಖೇರಿ ಫೆಬ್ರವರಿ 23: ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ ಲಖಿಂಪುರ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರ ತಂದೆ, ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಅಜಯ್ ಮಿಶ್ರಾ ಅವರು ಬುಧವಾರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮತ ಚಲಾಯಿಸಿದರು. ಈ ವೇಳೆ ಭಾರೀ ಸಂಖ್ಯೆಯ ಭದ್ರತಾ ಸಿಬ್ಬಂದಿಗಳು ಅವರನ್ನು ಸುತ್ತುವರೆದಿದ್ದು ಕಂಡುಬಂದಿದೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವರು ಬನ್ವಾರಿಪುರದ ಶಾಲೆಯೊಂದರಲ್ಲಿ ಮತಗಟ್ಟೆಗೆ ಹೋಗುವಾಗ ಅಥವಾ ಮತ ಚಲಾಯಿಸಿ ಹೊರಬಂದಾಗ ಮಾಧ್ಯಮಗಳೊಂದಿಗೆ ಮಾತನಾಡಲಿಲ್ಲ. ಬೆಳಗ್ಗೆ 11.30 ರ ಸುಮಾರಿಗೆ ನಿಘಾಸನ್ ವಿಧಾನಸಭಾ ಕ್ಷೇತ್ರದ ಮತದಾನ ಕೇಂದ್ರಕ್ಕೆ ಮತ ಚಲಾಯಿಸಲು ಬಂದ ಅಜಯ್ ಮಿಶ್ರಾ ಅವರ ಸುತ್ತಲೂ ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿ ಇರುವುದು ಸಾಮಾಜಿಕ ಮಾಧ್ಯಮದಲ್ಲಿ ಹರದಾಡುತ್ತಿರುವ ವಿಡಿಯೊದಲ್ಲಿ ಕಂಡುಬಂದಿದೆ.
ಯುಪಿ: ಯೋಗಿ ರ್ಯಾಲಿ ಮೈದಾನದಲ್ಲಿ ಬಿಡಾಡಿ ದನಗಳನ್ನು ಬಿಟ್ಟ ರೈತರು
2021 ರ ಅಕ್ಟೋಬರ್ನಲ್ಲಿ ತಮ್ಮ ಸ್ಥಳೀಯ ಜಿಲ್ಲೆಯ ಟಿಕುನಿಯಾ ಪ್ರದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದಾಗ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರು ಗಮನ ಸೆಳೆದರು. ಅವರ ಪುತ್ರ ಆಶಿಶ್ ಮಿಶ್ರಾ ಪ್ರಕರಣದಲ್ಲಿ ಆರೋಪಿಯಾಗಿದ್ದು, ಆತನನ್ನು ಬಂಧಿಸಲಾಗಿತ್ತು.
#WATCH | MoS Home Ajay Mishra Teni leaves from a polling booth in Banbirpur of Lakhimpur Kheri, after casting his vote for the fourth phase of #UttarPradeshElections2022 pic.twitter.com/kgRpdoC9GP
— ANI UP/Uttarakhand (@ANINewsUP) February 23, 2022
ಈ ತಿಂಗಳ ಆರಂಭದಲ್ಲಿ ಅಲಹಾಬಾದ್ ಹೈಕೋರ್ಟ್ನಿಂದ ಆಶಿಶ್ಗೆ ಜಾಮೀನು ನೀಡಲಾಯಿತು, ಮೃತ ರೈತರ ಕುಟುಂಬಗಳು ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ಗೆ ತೆರಳಲು ಪ್ರೇರೇಪಿಸಿತು. ಚುನಾವಣಾ ಆಯೋಗದ ಪ್ರಕಾರ, ಲಖಿಂಪುರ ಖೇರಿಯಲ್ಲಿ ಬೆಳಿಗ್ಗೆ 11 ಗಂಟೆಯವರೆಗೆ 26.28 ರಷ್ಟು ಮತದಾನವಾಗಿದೆ. ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗುತ್ತದೆ.
ಉತ್ತರಪ್ರದೇಶದಲ್ಲಿ ಈಗಾಗಲೇ ಮೂರನೇ ಹಂತದ ಮತದಾನ ಮುಗಿದಿದ್ದು, ಇಂದು (ಫೆಬ್ರವರಿ 23) ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ನಾಲ್ಕನೇ ಹಂತದಲ್ಲಿ ಒಂಬತ್ತು ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಈ ಹಂತದಲ್ಲಿ 59 ವಿಧಾನಸಭಾ ಸ್ಥಾನಗಳಿಗೆ 624 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಲ್ಕನೇ ಹಂತದ ಮತದಾನವೂ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದ್ದು, ಸಂಜೆ 6 ರವರೆಗೆ ನಡೆಯಲಿದೆ. ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಒಟ್ಟು ಏಳು ಹಂತದಲ್ಲಿ ನಡೆಯಲಿದ್ದು ಈಗಾಗಲೇ ಮೂರು ಹಂತದ ಚುನಾವಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇನ್ನೂ ನಾಲ್ಕು ಹಂತದ ಮತದಾನ ನಡೆಯಬೇಕಿದೆ. ಈ ಹಂತದ ಪ್ರಮುಖ ಅಭ್ಯರ್ಥಿಗಳಲ್ಲಿ ಉತ್ತರ ಪ್ರದೇಶದ ಕಾನೂನು ಸಚಿವ ಬ್ರಿಜೇಶ್ ಪಾಠಕ್ ಅವರು ಲಕ್ನೋ ಕಂಟೋನ್ಮೆಂಟ್ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಎರಡು ಬಾರಿ ಕಾರ್ಪೊರೇಟರ್ ಸುರೇಂದ್ರ ಸಿಂಗ್ ಗಾಂಧಿ ಅವರನ್ನು ಎದುರಿಸುತ್ತಿದ್ದಾರೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪ್ರಕಾರ, ಉತ್ತರ ಪ್ರದೇಶದ ನಾಲ್ಕನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಒಟ್ಟು 27% ಅಭ್ಯರ್ಥಿಗಳು ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದರೆ, 37% ರಷ್ಟು ಜನರು 1 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.
ಪ್ರಮುಖ ಪಕ್ಷಗಳ ಪೈಕಿ ಕಾಂಗ್ರೆಸ್ನ 58 ಅಭ್ಯರ್ಥಿಗಳಲ್ಲಿ 31, ಸಮಾಜವಾದಿ ಪಕ್ಷದ (ಎಸ್ಪಿ) 57 ಅಭ್ಯರ್ಥಿಗಳಲ್ಲಿ 30, ಬಹುಜನ ಸಮಾಜ ಪಕ್ಷದ (ಬಿಎಸ್ಪಿ) 59 ಅಭ್ಯರ್ಥಿಗಳಲ್ಲಿ 26, ಬಿಜೆಪಿಯ 57 ಅಭ್ಯರ್ಥಿಗಳಲ್ಲಿ 23 ಮತ್ತು ಎಎಪಿಯ 45 ಅಭ್ಯರ್ಥಿಗಳಲ್ಲಿ 11 ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ. ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆ 2022 ಹಂತ 4 ರಲ್ಲಿ ಸ್ಪರ್ಧಿಸುವ ಪ್ರತಿ ಅಭ್ಯರ್ಥಿಯ ಸರಾಸರಿ 2.46 ಕೋಟಿ ರೂ. ಸರಾಸರಿ ಆಸ್ತಿಯನ್ನು ಹೊಂದಿದ್ದಾರೆ.












Click it and Unblock the Notifications