ಕೊರೊನಾ ದೆಸೆಯಿಂದ ಈ ರಾಜ್ಯದಲ್ಲಿ ಪಾನ್ ಮಸಾಲ ನಿಷೇಧ!
ಲಕ್ನೋ, ಮಾರ್ಚ್ 26: ಕೊರೊನಾವೈರಸ್ ಸೋಂಕು ಹರಡದಂತೆ ಅನೇಕ ರಾಜ್ಯಗಳು ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತಿವೆ. ಈಗ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಉತ್ತರಪ್ರದೇಶ ರಾಜ್ಯದಲ್ಲಿ ಪಾನ್ ಮಸಾಲ ಉತ್ಪಾದನೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿರುವ ಯೋಗಿ ಆದಿತ್ಯನಾಥ್ ಇದರಿಂದ ಸೋಂಕು ಹರಡುವುದನ್ನು ತಡೆಗಟ್ಟಬಹುದು ಎಂದಿದ್ದಾರೆ.
ಸರ್ಕಾರದ ಆದೇಶದಂತೆ ಉತ್ಪಾದನೆ ಹಾಗೂ ಮಾರಾಟ ಮಾತ್ರವಲ್ಲದೆ, ಶೇಖರಿಸಿಟ್ಟುಕೊಳ್ಳಲು ಕೂಡಾ ಸದ್ಯಕ್ಕೆ ಅನುಮತಿ ಇಲ್ಲ ಎಂದು ಆಹಾರ ಇಲಾಖೆ ಆಯುಕ್ತರು ಹೇಳಿದ್ದಾರೆ.

2013ರ ಏಪ್ರಿಲ್1ರಂದು ರಾಜ್ಯದಲ್ಲಿ ಗುಟ್ಕಾ ಸೇವನೆಯನ್ನು ನಿಷೇಧ ಹೇರಲಾಗಿದೆ. ಈಗ ಪಾನ್ ಮಸಾಲ ಬಳಕೆ ನಿಷೇಧ ಹಾಕಲಾಗಿದ್ದು, ಆದೇಶವನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ಹೇಳಿದೆ.












Click it and Unblock the Notifications