ತಂದೆಯನ್ನು ಕೊಂದು ಸಾಕ್ಷ್ಯ ಮುಚ್ಚಿಹಾಕಲು ಅಪ್ರಾಪ್ತ ಬಾಲಕ ಮಾಡಿದ್ದೇನು?
ಲಕ್ನೋ, ಅಕ್ಟೋಬರ್ 30: ಕ್ರೈಂ ಶೋಗಳಿಂದ ಸ್ಫೂರ್ತಿ ಪಡೆದು ಅಪ್ರಾಪ್ತ ಬಾಲಕನೊಬ್ಬ ತಂದೆಯನ್ನು ಹತ್ಯೆ ಮಾಡಿದ್ದಲ್ಲದೆ ಸಾಕ್ಷ್ಯವನ್ನು ನಾಶಮಾಡಲು ಇನ್ನೂ ಹಲವು ಕ್ರೈಂ ಶೋಗಳನ್ನು ವೀಕ್ಷಿಸಿದ್ದ.
ಮಥುರಾದಲ್ಲಿ ನಡೆದ ಘಟನೆ ಇದಾಗಿದ್ದು, ಮೇ ತಿಂಗಳಲ್ಲಿ ನಡೆದ ಘಟನೆ ಈಗ ಬೆಳಕಿಗೆ ಬಂದಿದೆ.ಮನೋಜ್ ಮಿಶ್ರಾ ಕೊಲೆಯಾದವರು,ಅವರು ತುಂಬಾ ಕೋಪದ ಸ್ವಭಾವ ಹೊಂದಿದ್ದರು, ಕೋಪದಲ್ಲಿ ಮಗಳಿಗೆ ಹೊಡೆಯುತ್ತಿದ್ದರು.
ಅದನ್ನು ಸಹಿಸಲಾಗದೆ ಅವರ ಪುತ್ರ ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದಿದ್ದ, ಬಳಿಕ ಸಾಯದಿದ್ದಾಗ ತಾಯಿಯ ಸಹಾಯದಿಂದ ಮತ್ತು ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಗುರುತು ಸಿಗದ ಹಾಗೆ ಬಟ್ಟೆಯಿಂದ ಕತ್ತು ಹಿಸುಕಿ ಕೊಲೆ ಮಾಡಿ, ಬೈಕಿನಲ್ಲಿ ತೆಗೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಸುಟ್ಟು ಹಾಕಿದ್ದರು.

ಅದು ಆತ್ಮಹತ್ಯೆ ಎಂದು ಬಿಂಬಿಸಲು ಚಪ್ಪಲಿ, ಕನ್ನಡಕವನ್ನು ಅಲ್ಲಿಯೇ ಇಟ್ಟಿದ್ದ, ಮೇ 31ರವರೆಗೂ ಕುಟುಂಬದವರು ನಾಪತ್ತೆಯಾಗಿರುವ ಕುರಿತು ದೂರು ನೀಡಿರಲಿಲ್ಲ.
ವೈಷ್ಣೋ ಧಾಮ್ ಬಳಿ ಮೃತದೇಹವೊಂದು ದೊರೆತಿತ್ತು ಅದಾದ ಬಳಿಕ ಅಪ್ರಾಪ್ತ ಬಾಲಕ ಮತ್ತು ಆತನ ತಾಯಿಯನ್ನು ಪದೇ ಪದೇ ಪ್ರಶ್ನಿಸಿದಾಗ ಸತ್ಯ ಬಾಯ್ಬಿಟ್ಟಿದ್ದಾರೆ.
ಅಪ್ರಾಪ್ತ ಬಾಲಕ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತಹ ವಿಡಿಯೋವನ್ನು 100 ಬಾರಿ ವೀಕ್ಷಿಸಿದ್ದ, ಹಾಗೆಯೇ ಸಂಚು ರೂಪಿಸಿದ್ದ. ಇದೀಗ ತಾವು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾರೆ, ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications