ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ: ಕಾರ್ಯಕ್ರಮಕ್ಕೆ ಸಿಎಂ ಯೋಗಿಗೆ ಆಹ್ವಾನ!
ಲಕ್ನೌ, ಆಗಸ್ಟ್ 8: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿದ ಬೆನ್ನಲ್ಲೆ, ಮಸೀದಿ ನಿರ್ಮಾಣ ಕಾರ್ಯಕ್ಕೆ ಟ್ರಸ್ಟ್ ಮುಂದಾಗಿದೆ. ಮಸೀದಿ ನಿರ್ಮಾಣ ಕಾರ್ಯಕ್ರಮಕ್ಕೆ ಸಿಎಂ ಯೋಗಿ ಆಧಿತ್ಯನಾಥ್ ಅವರನ್ನು ಆಹ್ವಾನಿಸಲಾಗುವುದು ಎಂದು ಟ್ರಸ್ಟ್ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ನಿಗದಿಪಡಿಸಲಾಗಿದ್ದು, ಈ ಸ್ಥಳದಲ್ಲಿ ಮಸೀದಿ, ಆಸ್ಪತ್ರೆ, ಗ್ರಂಥಾಲಯ, ಸಮುದಾಯ ಅಡಿಗೆ ಭವನ ಮತ್ತು ಸಂಶೋಧನಾ ಕೇಂದ್ರವನ್ನು ಸಹ ನಿರ್ಮಿಸಲಾಗುವುದು ಎಂದು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಕಾರ್ಯದರ್ಶಿ ಮತ್ತು ಟ್ರಸ್ಟ್ ವಕ್ತಾರ ಅಥರ್ ಹುಸೇನ್ ಪಿಟಿಐಗೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಹಾಗೂ ಆಸ್ಪತ್ರೆ, ಗ್ರಂಥಾಲಯ, ಸಮುದಾಯ ಅಡಿಗೆ ಭವನ ನಿರ್ಮಾಣಕ್ಕೆ ಸಹಕಾರ ನೀಡಲಿದ್ದಾರೆ ಎಂದು ಟ್ರಸ್ಟ್ ವಕ್ತಾರ ಅಥರ್ ಹುಸೇನ್ ಮಾಹಿತಿ ನೀಡಿದ್ದಾರೆ.

ಮಸೀದಿ ನಿರ್ಮಾಣಕ್ಕೆ ಯೋಗಿ ಆದಿತ್ಯನಾಥ್ ಅಡಿಪಾಯ ಹಾಕುತ್ತಾರೆಯೇ ಎಂಬ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಹುಸೇನ್, ಇಸ್ಲಾಂ ಧರ್ಮದ ಹನಾಫಿ, ಹನ್ಬಾಲಿ, ಶಫಿ ಮತ್ತು ಮಾಲಿಕಿಯ ಪ್ರಕಾರ ಮಸೀದಿಗೆ ಅಡಿಪಾಯ ಹಾಕಲು ಯಾವುದೇ ಅವಕಾಶವಿಲ್ಲ' ಎಂದಿದ್ದಾರೆ.
ಅಯೋಧ್ಯೆಯಲ್ಲಿ ನಿರ್ಮಿಲಿಸಲಿರುವ ಮಸೀದಿಗೆ ಬಾಬ್ರಿ ಮಸೀದಿ ಎಂದು ಹೆಸರಿಡಲಾಗುತ್ತದೆಯೇ ಎಂದು ಕೇಳಿದ್ದಕ್ಕೆ, 'ಅಂತಹ ಆಲೋಚನೆ ಇಲ್ಲ, ಹೆಸರನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ.' ಎಂದು ಹೇಳಿದ್ದಾರೆ.
ಇನ್ನು ಬಾಬ್ರಿ ಮಸೀದಿ ನಿರ್ಮಾಣ ಅಥವಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರೆ, ನಾನು ಹಿಂದೂ ಧರ್ಮದ ಯೋಗಿಯಾಗಿ ಭಾಗವಹಿಸಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈಗಾಗಲೇ ಬಹಿರಂಗವಾಗಿ ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications