ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಜೊತೆ ಯೋಗಿ ಆದಿತ್ಯನಾಥ್ ಚರ್ಚೆ
ಲಕ್ನೌ, ಜುಲೈ 25: ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸಲು ದಿನಾಂಕ ನಿಗದಿಯಾಗಿದ್ದು, ಈ ಹಿನ್ನೆಲೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಅಯೋಧ್ಯೆಗೆ ಭೇಟಿ ನೀಡಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು.
Recommended Video
ಆಗಸ್ಟ್ 5 ರಂದು ನಡೆಯಲಿರುವ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ 12.15ಕ್ಕೆ ರಾಮ ಜನಮಭೂಮಿ ನಿರ್ಮಾಣಕ್ಕೆ ಅಡಿಪಾಯ ಹಾಕಲಿದ್ದಾರೆ.
ಅಯೋಧ್ಯೆ ರಾಮ ಮಂದಿರ ಶಿಲಾನ್ಯಾಸಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ
ಈ ಹಿನ್ನೆಲೆ ಇಂದು ಅಯೋಧ್ಯೆಗೆ ಭೇಟಿ ನೀಡಿದ ಸಿಎಂ ಯೋಗಿ ಆದಿತ್ಯನಾಥ್, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯರ ಜೊತೆ ಚರ್ಚೆ ನಡೆಸಿದರು. ಅದಕ್ಕೂ ಮುಂಚೆ ರಾಮನ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
Ayodhya: Uttar Pradesh Chief Minister Yogi Adityanath is holding a meeting with the members of Shri Ram Janmabhoomi Teerth Kshetra Trust and local administration. pic.twitter.com/WOhbbzSB3v
— ANI UP (@ANINewsUP) July 25, 2020
ಭೂಮಿ ಪೂಜೆ ಕಾರ್ಯಕ್ರಮದ ಸಿದ್ಧತೆ ಮತ್ತು ಆಯೋಜನೆ ಕುರಿತು ಟ್ರಸ್ಟ್ ಹಾಗೂ ಸ್ಥಳಿಯ ಆಡಳಿತ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು. ಕೊರೊನಾ ಭೀತಿ ಇರುವುದರಿಂದ ಅನ್ಲಾಕ್ ನಿಯಮಗಳನ್ನು ಪಾಲಿಸಬೇಕಾದ ಅನಿವಾರ್ಯತೆ ಇದೆ. ಹಾಗಾಗಿ, ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ನೋಡಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು.
ಇನ್ನು ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಕ್ಕೆ ತಡೆ ನೀಡಬೇಕೆಂದು ದೆಹಲಿ ಮೂಲದ ಪತ್ರಕರ್ತರೊಬ್ಬರು ಅಲಹಾಬಾದ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಲಾಕ್ಡೌನ್ ನಿಯಮ ಉಲ್ಲಂಘನೆಯಾಗಲಿದೆ ಎಂದು ದೂರಿದ್ದರು. ಆದರೆ, ನ್ಯಾಯಾಲಯ ಈ ಅರ್ಜಿಯನ್ನಿ ತಿರಸ್ಕರಿಸಿದೆ. ಈ ಆರೋಪದಲ್ಲಿ ವಾಸ್ತವತೆ ಇಲ್ಲ ಎಂದು ನಿರಾಕರಿಸಿದೆ.