ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಗೆಲುವಿಗೆ ದಲಿತ, ಬ್ರಾಹ್ಮಣರ ಮೇಲಿನ ದಬ್ಬಾಳಿಕೆ ಅಸ್ತ್ರ ಪ್ರಯೋಗ
ಲಕ್ನೋ, ಆಗಸ್ಟ್ 31: ಉತ್ತರ ಪ್ರದೇಶದಲ್ಲಿ 2022ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಾಗಲೇ ರಣತಂತ್ರ ಹಣೆಯುವುದಕ್ಕೆ ಶುರು ಮಾಡಿವೆ. ರಾಜ್ಯದಲ್ಲಿ ಬ್ರಾಹ್ಮಣರು ಮತ್ತು ದಲಿತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನೇ ತನ್ನ ರಾಜಕೀಯ ಅಸ್ತ್ರವಾಗಿ ಪ್ರಯೋಗಿಸುವುದಕ್ಕೆ ಬಹುಜನ ಸಮಾಜ ಪಕ್ಷ ಮುಂದಾಗಿದೆ.
ರಾಜ್ಯದಲ್ಲಿ ಬಹುಜನ ಸಮಾಜ ಪಕ್ಷವು ತನ್ನದೇ ಆಗಿರುವ ಸೋಷಿಯಲ್ ಇಂಜಿನಿಯರಿಂಗ್ ಸೂತ್ರದ ಮೇಲೆ ಕಾರ್ಯ ನಿರ್ವಹಿಸಲಿದೆ. ಮುಂಬರುವ ವಿಧಾನಸಭಾ ಚುನಾವಣೆಯನ್ನು ಗೆಲ್ಲುವುದಕ್ಕೆ ಈ ತಂತ್ರ ಹೆಚ್ಚು ಸಹಾಯಕವಾಗಲಿದೆ ಎಂದು ಬಿಎಸ್ ಪಿ ಮುಖಂಡರೊಬ್ಬರು ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಬುದ್ಧ ಸಮ್ಮೇಳನಗಳ ನಂತರ ಈ ಕಾರ್ಯಸೂಚಿಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಲಕ್ನೋದಲ್ಲಿ ಇದ್ದುಕೊಂಡೇ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಅವರ ಸಲಹೆ ಸೂಚನೆಯಂತೆ ಬ್ರಾಹ್ಮಣರನ್ನು ಪಕ್ಷದೊಂದಿಗೆ ಸಂಯೋಜಿಸಿಕೊಂಡು ಸತೀಶ್ ಚಂದ್ರ ಮಿಶ್ರಾ ಅವರು ಪ್ರಬುದ್ಧ ಸಮ್ಮೇಳನಗಳನ್ನು ನಡೆಸುತ್ತಾರೆ ಎನ್ನಲಾಗುತ್ತದೆ.

ಏನಿದು ಸೋಷಿಯಲ್ ಇಂಜಿನಿಯರಿಂಗ್ ಸೂತ್ರ:
ಉತ್ತರ ಪ್ರದೇಶದಲ್ಲಿ "ದಲಿತರು ಮತ್ತು ಬ್ರಾಹ್ಮಣರ ಮೇಲಿನ ದೌರ್ಜನ್ಯ ಪ್ರಕರಣಗಳು ವರದಿಯಾಗಿರುವ" ಸ್ಥಳಗಳಿಗೆ ಬಿಎಸ್ ಪಿ ನಾಯಕರು ಭೇಟಿ ನೀಡುತ್ತಾರೆ. ಸೋಷಿಯಲ್ ಇಂಜಿನಿಯರಿಂಗ್ ಮೂಲಕ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪ್ರತಿಭಟಿಸುವುದು ಹಾಗೂ ಒಗ್ಗಟ್ಟು ಪ್ರದರ್ಶಿಸುವುದಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ.
ಬಹುಜನ ಸಮಾಜ ಪಕ್ಷದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಬ್ರಾಹ್ಮಣರು, ದಲಿತರು ಹಾಗೂ ಮುಸ್ಲೀಮರು ಸಾಕಷ್ಟು ತುಳಿತಕ್ಕೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆ ಕಳೆದ ಐದು ವರ್ಷಗಳ ಬಿಜೆಪಿ ಆಡಳಿತದ ಬಗ್ಗೆ ಟೀಕಿಸಿರುವ ಬಹುಜನ ಸಮಾಜ ಪಕ್ಷವು ರಾಜ್ಯದಲ್ಲಿ ತುಳಿತಕ್ಕೊಳಗಾದ ಬ್ರಾಹ್ಮಣರು, ದಲಿತರು ಮತ್ತು ಮುಸ್ಲಿಮರ ಬಗ್ಗೆ ಪ್ರಸ್ತಾಪಿಸಿತು. ಇದರ ಜೊತೆಗೆ ಚುನಾವಣಾ ಸಭೆಯಲ್ಲಿ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗಿತ್ತು.
ಸಪ್ಟೆಂಬರ್ 7ರಂದು ರಾಜಕೀಯ ಅಖಾಡಕ್ಕೆ ಮಾಯಾವತಿ:
ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಲು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಈಗಾಗಲೇ ದಿನಾಂಕ ನಿಗದಿಗೊಳಿಸಿದ್ದಾರೆ. ಸಪ್ಟೆಂಬರ್ 7ರಂದು ಲಕ್ನೋದಲ್ಲಿ ನಡೆಯಲಿರುವ ಬ್ರಾಹ್ಮಣ ಸಮ್ಮೇಳನದ ಮುಖೇನ ತಮ್ಮ ರಾಜಕೀಯ ಪ್ರಚಾರವನ್ನು ಅಧಿಕೃತವಾಗಿ ಶುರು ಮಾಡಲಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications