ಯುಪಿ ಚುನಾವಣೆ: ಐಶ್ವರ್ಯಾ ಸೆಂಗಾರ್ ಪ್ರಿಯಾಂಕಾ ಗಾಂಧಿ ವಿರುದ್ಧ ವಾಗ್ದಾಳಿ
ಉನ್ನಾವೋ, ಜನವರಿ 16: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಬಿಡುಗಡೆ ಮಾಡಿರುವ ಈ ಮೊದಲ ಪಟ್ಟಿಯಲ್ಲಿ ಉನ್ನಾವೋ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ತಾಯಿಯ ಹೆಸರೂ ಸೇರಿದೆ. ಉನ್ನಾವೋ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ತಾಯಿಯ ಹೆಸರನ್ನು ಕಾಂಗ್ರೆಸ್ ನಾಮನಿರ್ದೇಶನ ಮಾಡಿದೆ. ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗ್ಯಾಂಗ್ರೇಪ್ನ ಪ್ರಮುಖ ಆರೋಪಿಯಾಗಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್ ಪ್ರಸ್ತುತ ತಿಹಾರ್ ಜಾಝ್ನಲ್ಲಿ ನೆಲೆಸಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್ ಅವರ ಪುತ್ರಿ ಐಶ್ವರ್ಯಾ ಸೆಂಗಾರ್ ಈ ವಿಚಾರದಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.

'ಸಮಾಜವು ನಿಮ್ಮನ್ನು ಎಂದಿಗೂ ಕ್ಷಮಿಸುವುದಿಲ್ಲ'
ಕುಲದೀಪ್ ಸಿಂಗ್ ಸೆಂಗಾರ್ ಅವರ ಪುತ್ರಿ ಐಶ್ವರ್ಯಾ ಸೆಂಗಾರ್ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನುದ್ದೇಶಿಸಿ ವಿಡಿಯೋದಲ್ಲಿ ಮಾತನಾಡಿದ್ದಾರೆ. 'ಪ್ರಿಯಾಂಕಾ ಗಾಂಧಿ ರಾಜಕೀಯ ದೃಷ್ಟಿಕೋನದಿಂದ ತೆಗೆದುಕೊಂಡ ಈ ಹೆಜ್ಜೆ ನಿಮಗೆ ಸರಿ ಎನಿಸಬಹುದು. ಆದರೆ ಸಮಾಜದ ಧರ್ಮ ಮತ್ತು ನೈತಿಕತೆಯು ನಿಮ್ಮನ್ನು ಎಂದಿಗೂ ಕ್ಷಮಿಸುವುದಿಲ್ಲ' ಎಂದಿದ್ದಾರೆ. ಜೊತೆಗೆ ಐಶ್ವರ್ಯಾ ಸೆಂಗಾರ್ ಕೂಡ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ತಾಯಿ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಉನ್ನಾವೋ ಜನರ ಆಶೀರ್ವಾದ ನಮ್ಮೊಂದಿಗಿತ್ತು ಮತ್ತು ಯಾವಾಗಲೂ ಇರುತ್ತದೆ. ಮಾರ್ಚ್ 10 ರಂದು ನೀವೂ (ಪ್ರಿಯಾಂಕಾ ಗಾಂಧಿ ವಾದ್ರಾ) ಫಲಿತಾಂಶವನ್ನು ನೋಡುತ್ತೀರಿ ಎಂದು ಐಶ್ವರ್ಯಾ ಹೇಳಿದ್ದಾರೆ.

ಸಂತ್ರಸ್ತೆಯ ತಾಯಿ ಕಾಂಗ್ರೆಸ್ ಅಭ್ಯರ್ಥಿ ಎಂದ ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ 125 ಅಭ್ಯರ್ಥಿಗಳಿದ್ದಾರೆ. ಇದರಲ್ಲಿ ಉನ್ನಾವೋದ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ತಾಯಿಯನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಕಾಂಗ್ರೆಸ್ ಪಟ್ಟಿಯನ್ನು ಬಿಡುಗಡೆ ಮಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, 'ನಮ್ಮ ಅಭ್ಯರ್ಥಿ ಉನ್ನಾವೋ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ತಾಯಿ, ನಾವು ಅವರ ಹೋರಾಟವನ್ನು ಮುಂದುವರಿಸಲು ಅವರಿಗೆ ಅವಕಾಶ ನೀಡಿದ್ದೇವೆ. ಅವರ ಮಗಳಿಗೆ ಚಿತ್ರಹಿಂಸೆ ನೀಡಲಾಗಿದೆ. ಅವರ ಕುಟುಂಬಕ್ಕೆ ನೋವಾಗಿದೆ. ಅವರಿಗೆ ಅದೇ ಅಧಿಕಾರ ಸಿಗಬೇಕು. ಕಾಂಗ್ರೆಸ್ ಯಾವಾಗಲೂ ಅವರ ಜೊತೆ ನಿಂತಿರುತ್ತದೆ' ಎಂದಿದ್ದಾರೆ.

ಕುಲದೀಪ್ ಸಿಂಗ್ ಸೆಂಗಾರ್ ಆರೋಪಿ
ಜೂನ್ 4, 2017 ರಂದು ಉನ್ನಾವೊದಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು. ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಮೇಲೆ ಪ್ರಕರಣದ ಗಂಭೀರ ಆರೋಪವಿದೆ. ಎಪ್ರಿಲ್ 8, 2018 ರಂದು, ಸಂತ್ರಸ್ತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಘಟನೆಯ ನಂತರವೇ ಸಂತ್ರಸ್ತೆಯ ತಂದೆ ಸಾವನ್ನಪ್ಪಿದರು. ಸಂತ್ರಸ್ತೆ ಕುಲದೀಪ್ ಸೆಂಗಾರ್ ಅವರ ಮೇಲೆ ಆರೋಪ ಹೋರಿಸಿದ್ದರು. ಸುದೀರ್ಘ ಹೋರಾಟದ ನಂತರ ಕುಲದೀಪ್ ಸೆಂಗಾರ್ ಪೊಲೀಸರ ಮುಂದೆ ಹಾಜರಾದರು.
Recommended Video

ಬಿಜೆಪಿಯಿಂದ ಉಚ್ಚಾಟನೆ
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸೆಂಗಾರ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ಈ ಪ್ರಕರಣದಲ್ಲಿ ತೀವ್ರ ಆಘಾತಕ್ಕೊಳಗಾದ ಬಿಜೆಪಿ, ಸೆಂಗಾರ್ ಅವರನ್ನು ರಕ್ಷಿಸಲು ಪೊಲೀಸರ ಮೇಲೆ ಒತ್ತಡ ಹೇರಿದೆ. ಜೊತೆಗೆ ಸಂತ್ರಸ್ತೆಯ ಕುಟುಂಬ ಸದಸ್ಯರಿಗೆ ಬೆದರಿಕೆ ಹಾಕಿದೆ. ಇದೆಲ್ಲದರ ನಡುವೆ ಬಿಜೆಪಿ ಸೆಂಗಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸಿತು. ಇದರ ನಂತರ ಸಂತ್ರಸ್ತೆಯ ಕಾರು ಅಪಘಾತಕ್ಕೀಡಾಯಿತು. ಅದರಲ್ಲಿ ಆಕೆಯ ಕುಟುಂಬದ ಇಬ್ಬರು ಸದಸ್ಯರು ಸಾವನ್ನಪ್ಪಿದರು. ಇದಕ್ಕಾಗಿ ಸೆಂಗಾರ್ ಅವರನ್ನು ಆರೋಪಿಯನ್ನಾಗಿ ಮಾಡಲಾಯಿತು. ಆದರೆ ಈ ಪ್ರಕರಣದಲ್ಲಿ ಅವರನ್ನು ಖುಲಾಸೆಗೊಳಿಸಲಾಯಿತು. ಬಳಿಕ ಕುಲದೀಪ್ ಸೆಂಗಾರ್ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದ ಬಳಿಕ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.












Click it and Unblock the Notifications