ಯುಪಿ ಚುನಾವಣೆ: ಏಕಾಂಗಿಯಾಗಿ ಸ್ಪರ್ಧಿಸಲು ಜೆಡಿಯು ನಿರ್ಧಾರ
ಲಕ್ನೋ, ಜನವರಿ 16: ಭಾರತೀಯ ಜನತಾ ಪಕ್ಷ (ಬಿಜೆಪಿ) ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತನ್ನನ್ನು 'ಮಿತ್ರ ಪಕ್ಷವೆಂದು ಪರಿಗಣಿಸದ' ಕಾರಣ ಜೆಡಿಯು ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ರಾಜಕೀಯ ಮೈತ್ರಿಗೆ ಎರಡೂ ಕಡೆಯಿಂದ ದೃಢೀಕರಣದ ಅಗತ್ಯವಿದೆ. ಆದರೆ ಬಿಜೆಪಿ ಯುಪಿಯಲ್ಲಿ ತನ್ನ ಪಕ್ಷವನ್ನು ಕೈಬಿಟ್ಟಿದೆ. ಹೀಗಾಗಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಜನತಾ ದಳ (ಯುನೈಟೆಡ್) ನಿರ್ಧರಿಸಿದೆ ಎಂದು ಜೆಡಿಯು ರಾಷ್ಟ್ರೀಯ ವಕ್ತಾರ ಕೆಸಿ ತ್ಯಾಗಿ ಹೇಳಿದರು.
ಜೆಡಿಯು ಸಂಸದೀಯ ಪಕ್ಷದ ಅಧ್ಯಕ್ಷ ಉಪೇಂದ್ರ ಕುಶ್ವಾಹ ಕೂಡ ಉತ್ತರ ಪ್ರದೇಶ ಚುನಾವಣೆಗೆ ಬಿಜೆಪಿ ಜೊತೆಗಿನ ಮೈತ್ರಿ ಅಂತಿಮಗೊಳಿಸಲು ವಿಳಂಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು. ಬಿಜೆಪಿ ಮತ್ತು ಜೆಡಿಯು ಬಿಹಾರ ಹಾಗೂ ಕೇಂದ್ರದಲ್ಲಿ ಆಡಳಿತಾರೂಢ ಮೈತ್ರಿಕೂಟದಲ್ಲಿ ಪಾಲುದಾರರಾಗಿದ್ದಾರೆ. ಆದರೆ ಯುಪಿಯಲ್ಲಿ ಅವರು ಬೇರೆಯಾಗುತ್ತಿದ್ದಂತೆ ಚುನಾವಣೆಗೆ ತಂತ್ರವನ್ನು ಅಭಿವೃದ್ಧಿಪಡಿಸಲು ಜೆಡಿಯುನ ರಾಜ್ಯ ಘಟಕವು ಜನವರಿ 18 ರಂದು ಸಭೆ ಸೇರಲಿದೆ. ಸಭೆಯಲ್ಲಿ ಪಾಲ್ಗೊಳ್ಳಲು ಕೆಸಿ ತ್ಯಾಗಿ ಈ ದಿನ ಲಖನೌಗೆ ಭೇಟಿ ನೀಡಲಿದ್ದಾರೆ. ಉತ್ತರ ಪ್ರದೇಶ ರಾಜಕೀಯಕ್ಕೆ ಜೆಡಿಯು ಬಿಜೆಪಿಗೆ ನಿರ್ಲಕ್ಷ್ಯವಾಗಿರಬಹುದು. ಆದರೆ ರಾಜ್ಯದಲ್ಲಿ ಕುರ್ಮಿ ಸಮುದಾಯದ ಜನರು ಗಣನೀಯ ಪ್ರಮಾಣದಲ್ಲಿದ್ದಾರೆ ಎನ್ನುವು ಮಾತ್ರ ಗಮನಾರ್ಹ.
ಬಿಹಾರ ಬಿಜೆಪಿ ನಾಯಕರು ಈ ವಿಷಯವು ತಮ್ಮ ವ್ಯಾಪ್ತಿಗೆ ಒಳಪಡುವುದಿಲ್ಲ, ಆದ್ದರಿಂದ ಯಾವುದೇ ಔಪಚಾರಿಕ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ. ಆದರೆ ಪಕ್ಷದ ಕೇಂದ್ರ ನಾಯಕತ್ವವು ಆಪ್ನಾ ದಳದ ಅನುಪ್ರಿಯಾ ಪಟೇಲ್ ಅಥವಾ ನಿಶಾದ್ ಪಕ್ಷದ ಸಂಜಯ್ ನಿಶಾದ್ ಅವರಂತಹ ನೆಲದ ಪ್ರಭಾವ ಹೊಂದಿರುವ ಮಿತ್ರಪಕ್ಷಗಳೊಂದಿಗೆ ಮಾತುಕತೆ ನಡೆಸಿ ಸೀಟು ಲೆಕ್ಕಾಚಾರವನ್ನು ಅಂತಿಮಗೊಳಿಸುತ್ತಿದೆ.
ಮೊದಲ ಹಂತದಲ್ಲಿ 58 ಸ್ಥಾನಗಳಿಗೆ ಮತದಾನ
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ಮತ್ತು ಮಾರ್ಚ್ 7 ರ ನಡುವೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 58 ಸ್ಥಾನಗಳಿಗೆ ಮತದಾನ ನಡೆದರೆ, 55 ಸ್ಥಾನಗಳು ಮತ್ತು 59 ಸ್ಥಾನಗಳು ಕ್ರಮವಾಗಿ ಎರಡನೇ ಹಂತ ಮತ್ತು ಮೂರನೇ ಹಂತದಲ್ಲಿ ಗ್ರಾಬ್ ಆಗಲಿವೆ. ಮಾರ್ಚ್ 10 ರಂದು ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆ ನಡೆಯಲಿದೆ.
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್, ಎಎಪಿ ಮತ್ತು ಬಿಎಸ್ಪಿ ಏಕಾಂಗಿಯಾಗಿ ಮುನ್ನಡೆಯುತ್ತಿದ್ದರೆ, ಸಮಾಜವಾದಿ ಪಕ್ಷವು ಶಿವಪಾಲ್ ಯಾದವ್ ಅವರ ಪಿಎಸ್ಪಿ (ಎಲ್), ಮಹಾನ್ ದಳ, ಒಪಿ ರಾಜ್ಭರ್ ನೇತೃತ್ವದ ಎಸ್ಬಿಎಸ್ಪಿ, ಆರ್ಎಲ್ಡಿ ಮತ್ತು ಕೃಷ್ಣ ಪಟೇಲ್ರ ಅಪ್ನಾ ದಳ ಬಣದೊಂದಿಗೆ ಮೈತ್ರಿಯನ್ನು ಘೋಷಿಸಿದೆ. ಬಿಜೆಪಿ ಅಪ್ನಾ ದಳ ಮತ್ತು ನಿಶಾದ್ ಪಕ್ಷದೊಂದಿಗೆ ಕೈಜೋಡಿಸಿದೆ. ಈಗಾಗಲೇ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿವೆ. ಈ ಬಾರಿ ಬಿಜೆಪಿ ಹಾಗೂ ಎಸ್ಪಿ ನಡುವೆ ಪೈಪೋಟಿ ಜೋರಾಗಿದ್ದು ಉತ್ತರಪ್ರದೇಶ ಚುನಾವಣೆ ಭಾರೀ ನಿರೀಕ್ಷೆಯನ್ನು ಹುಟ್ಟಿಸಿದೆ. 1987 ರಿಂದ ಯುಪಿಯ ಯಾವುದೇ ಸಿಎಂ ಸತತ ಎರಡನೇ ಬಾರಿಗೆ ಗೆಲ್ಲಲು ಸಾಧ್ಯವಾಗದ ಕಾರಣ ಯೋಗಿ ಆದಿತ್ಯನಾಥ್ ಅವರಿಗೆ ಈ ಬಾರಿಯ ಚುನಾವಣೆ ಕಠಿಣ ಸವಾಲಾಗಿದೆ.