ಯುಪಿ: ಪ್ರಚಾರದ ವೇಳೆ ಅಪರ್ಣಾ ಯಾದವ್ ವಿರುದ್ಧ ಎಸ್ಪಿ ಪ್ರತಿಭಟನೆ
ಬಾರಾಬಂಕಿ ಫೆಬ್ರವರಿ 4: ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ವಿರುದ್ಧ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಸಮಾಜವಾದಿ ಪಕ್ಷದ ಕಾರ್ಯಕರ್ತರು ಗುರುವಾರದಂದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಸದರ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮೌತಾರಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪರ ಸಭೆಯನ್ನು ಉದ್ದೇಶಿಸಿ ಮಾತನಾಡಲು ಅವರು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಸಮಾಜವಾದಿ ಪಕ್ಷದ (ಎಸ್ಪಿ) ಕಾರ್ಯಕರ್ತರ ಗುಂಪು ಆಕೆಯನ್ನು ಗೇಲಿ ಮಾಡಿದ್ದಾರೆ. ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಹೊಗಳಿ ಘೋಷಣೆಗಳನ್ನು ಕೂಗಿದ್ದಾರೆ. ಆಕೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾಗ ಕೆಲವು ಎಸ್ಪಿ ಕಾರ್ಯಕರ್ತರು ಆಕೆಯ ವಾಹನವನ್ನೂ ಅಡ್ಡಗಟ್ಟಿದ್ದಾರೆಂದು ಪ್ರತ್ಯಕ್ಷದರ್ಶಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ.
ಮಾತ್ರವಲ್ಲದೆ ಅಖಿಲೇಶ್ ಯಾದವ್ ಪರ ಘೋಷಣೆಗಳನ್ನು ಕೂಗುತ್ತಿದ್ದವರಲ್ಲಿ ಒಬ್ಬ ಎಸ್ಪಿ ಕಾರ್ಯಕರ್ತನಿಗೆ ಕೆಲವು ಬಿಜೆಪಿ ಕಾರ್ಯಕರ್ತರು ಥಳಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಒಬ್ಬ ಎಸ್ಪಿ ಕಾರ್ಯಕರ್ತನನ್ನು ಬಂಧಿಸಲಾಯಿತು ಮತ್ತು ಇತರರು ಪೊಲೀಸರನ್ನು ನೋಡಿ ಓಡಿಹೋದರು ಎಂದು ಸಂತ್ರಿಖ್ ಪೊಲೀಸ್ ಠಾಣೆಯ ಅಧಿಕಾರಿ ಲಾಲ್ ಚಂದ್ರ ಸರೋಜ್ ಹೇಳಿದ್ದಾರೆ. ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಸಂತ್ರಿಖ್ ಹೇಳಿದರು.

ಇನ್ನೂ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅಪರ್ಣಾ ಯಾದವ್, ಎಸ್ಪಿ ಮಠಾಧೀಶ ಮುಲಾಯಂ ಸಿಂಗ್ ಯಾದವ್ ಅವರು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗುವಂತೆ ಆಶೀರ್ವದಿಸಿದಂತೆ, ಉತ್ತರ ಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಯೋಗಿ ಆದಿತ್ಯನಾಥ್ ಅವರನ್ನು ಜನರು ಆಶೀರ್ವದಿಸುತ್ತಿದ್ದಾರೆ.
ಭಾರತದ ಪ್ರಾಚೀನ ಶ್ರೀಮಂತ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಪುನರುಜ್ಜೀವನಗೊಳಿಸಿದ ಪಕ್ಷ ಬಿಜೆಪಿ ಎಂದು ಅಪರ್ಣಾ ಹೇಳಿದರು. ಜೊತೆಗೆ COVID-19 ವಿರುದ್ಧ ನಾಗರಿಕರಿಗೆ ಉಚಿತ ಲಸಿಕೆಗಳನ್ನು ಒದಗಿಸಿದ್ದಕ್ಕಾಗಿ ಅವರು ಪ್ರಧಾನ ಮಂತ್ರಿಯನ್ನು ಶ್ಲಾಘಿಸಿದರು.
ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿಲ್ಲ
ಲಕ್ನೋದಿಂದ ಸಮಾಜವಾದಿ ಪಕ್ಷದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಹಾಗೂ ಬಿಜೆಪಿ ಸಂಸದ ರೀಟಾ ಬಹುಗುಣ ಜೋಶಿ ಅವರ ಪುತ್ರ ಮಯಾಂಕ್ ಜೋಶಿ ಇಬ್ಬರೂ ಪಟ್ಟಿಯಲ್ಲಿಲ್ಲ. ಅಪರ್ಣಾ ಯಾದವ್ ಯಾದವ್ ಮತ್ತು ಜೋಶಿ ಇಬ್ಬರೂ ನಾಮನಿರ್ದೇಶನಗೊಳ್ಳಲು ಆಶಿಸುತ್ತಿದ್ದ ಹೈ-ಪ್ರೊಫೈಲ್ ಲಕ್ನೋ ಕಂಟೋನ್ಮೆಂಟ್ ಸ್ಥಾನವನ್ನು ರಾಜ್ಯ ಸಚಿವ ಬ್ರಿಜೇಶ್ ಪಾಠಕ್ ಅವರಿಗೆ ನೀಡಲಾಗಿದೆ. ಇದು ಪಕ್ಷಕ್ಕೆ ಸುರಕ್ಷಿತ ಸ್ಥಾನ ಎಂದು ಪರಿಗಣಿಸಲಾಗಿದೆ. ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ರೀಟಾ ಬಹುಗುಣ ಜೋಶಿ ಅವರು ಅಪರ್ಣಾ ಯಾದವ್ ಅವರನ್ನು ಸೋಲಿಸಿದ್ದರು. ಈ ಬಾರಿ ಈ ಕ್ಷೇತ್ರದ ಮೇಲೆ ಇಬ್ಬರಿಗೂ ಟಿಕೆಟ್ ಪಡೆಯುವ ಒಲವಿತ್ತು. ಆದರೆ ಬಿಜೆಪಿ ಇಬ್ಬರನ್ನೂ ಕೈ ಬಿಟ್ಟಿದೆ.
ಕುತೂಹಲಕಾರಿ ವಿಚಾರ ಅಂದರೆ ಅಪರ್ಣಾ ಯಾದವ್ ಸಮಾಜವಾದಿ ಪಕ್ಷವನ್ನು ಬಿಟ್ಟು ಕೆಲ ದಿನಗಳ ಹಿಂದೆ ಬಿಜೆಪಿ ಸೇರಿದ್ದರು. ಅಪರ್ಣಾ ಯಾದವ್ ಬಿಜೆಪಿ ಸೇರಲು ಪ್ರಮುಖ ಕಾರಣ ಎಸ್ಪಿ ಅವರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡಿಲ್ಲ ಎನ್ನುವುದೇ ಕಾರಣ ಎನ್ನಲಾಗಿತ್ತು. ಇದನ್ನು ಅಖಿಲೇಶ್ ಕೂಡ ಹೇಳಿಕೊಂಡಿದ್ದರು. ಆದರೆ ಅಪರ್ಣಾ ಯಾದವ್ ಈ ವಿಚಾರವನ್ನು ತಳ್ಳಿ ಹಾಕಿದ್ದರು. ತಾವು ಎಸ್ಪಿ ತೊರೆಯಲು ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿಲ್ಲ ಎನ್ನುವು ಕಾರಣವಲ್ಲ ಎಂದು ಸ್ಪಷ್ಟಪಡಿಸಿದ್ದರು.
"ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ-ಜಿ (ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್) ಅವರ ನೀತಿಗಳಿಂದ ನಾನು ಪ್ರಭಾವಿತಳಾಗಿದ್ದೆ" ಎಂದಿದ್ದರು. "ನಾನು ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಗೆ ಬಂದಿಲ್ಲ. ನಾನು ಚುನಾವಣೆಯುದ್ದಕ್ಕೂ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ" ಎಂದು 2017 ರ ವಿಧಾನಸಭಾ ಚುನಾವಣೆಯಲ್ಲಿ ಲಕ್ನೋ ಕಂಟೋನ್ಮೆಂಟ್ ಕ್ಷೇತ್ರದಿಂದ ಬಿಜೆಪಿಯ ರೀಟಾ ಬಹುಗಣ ಜೋಶಿ ವಿರುದ್ಧ ಎಸ್ಪಿಯಿಂದ ಮೊದಲ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಂಎಸ್ ಅಪರ್ಣಾ ಯಾದವ್ ಹೇಳಿದ್ದರು. ಆದರೆ ಅಪರ್ಣಾ ಅವರು ಸುಮಾರು 34,000 ಮತಗಳಿಂದ ಸೋತಿದ್ದರು.
Recommended Video
ಏಳು ಹಂತಗಳಲ್ಲಿ ಮೊದಲ ಹಂತದಲ್ಲಿ, ಫೆಬ್ರವರಿ 10 ರಂದು 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ ಮತದಾನ ನಡೆಯಲಿರುವ ಜಿಲ್ಲೆಗಳೆಂದರೆ ಶಾಮ್ಲಿ, ಮುಜಾಫರ್ನಗರ, ಬಾಗ್ಪತ್, ಮೀರತ್, ಗಾಜಿಯಾಬಾದ್, ಗೌತಮ್ ಬುದ್ಧ ನಗರ, ಹಾಪುರ್, ಬುಲಂದ್ಶಹರ್, ಅಲಿಘರ್, ಮಥುರಾ ಮತ್ತು ಆಗ್ರಾ. ಮಾರ್ಚ್ 7 ರಂದು ಅಂತಿಮ ಹಂತದ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications