Get Updates
Get notified of breaking news, exclusive insights, and must-see stories!

ದಿನಗೂಲಿ ಕಾರ್ಮಿಕರಿಗೆ ದಿನಕ್ಕೆ 1000ರೂ ಘೋಷಿಸಿದ ಆದಿತ್ಯನಾಥ್ ಸರ್ಕಾರ

ಲಕ್ನೌ, ಮಾರ್ಚ್ 21: ದಿನಗೂಲಿ ಕಾರ್ಮಿಕರಿಗೆ ಪ್ರತಿದಿನ 1000 ರೂಪಾಯಿ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ.

ದೇಶಾದ್ಯಂತ ಕೊರೊನಾ ವೈರಸ್ ಹರಡುತ್ತಿದ್ದು, ಸೋಂಕು ಹರಡದಂತೆ ತಡೆಯಲು ಜನರನ್ನು ಮನೆಯಲ್ಲಿ ಉಳಿದುಕೊಳ್ಳಿ ಎಂದು ಸರ್ಕಾರ ವಿನಂತಿಸಿಕೊಂಡಿದೆ. ಇದರಿಂದ ಸಹಜವಾಗಿ ಬೀದಿ ವ್ಯಾಪಾರಿಗಳಿಗೆ, ದಿನಗೂಲಿ ಕಾರ್ಮಿಕರ ದೈನಂದಿನ ಬದುಕು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.

ಇದನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಸರ್ಕಾರ, 15 ಲಕ್ಷ ದಿನಗೂಲಿ ಕಾರ್ಮಿಕರು ಹಾಗೂ 20.37 ಲಕ್ಷ ನಿರ್ಮಾಣ ಕಾರ್ಮಿಕರ ದೈನಂದಿನ ಜೀವನಕ್ಕೆ ಅಗತ್ಯವಾದ ವಸ್ತುಗಳನ್ನು ಪೂರೈಸಲು ದಿನಕ್ಕೆ ಸಾವಿರ ರೂಪಾಯಿ ಪರಿಹಾರವಾಗಿ ನೀಡಲಿದೆ.

UP Govt Will Give 1,000 To Daily Wage Labourers

ಇದುವರೆಗೂ ಭಾರತದಲ್ಲಿ ಒಟ್ಟು 270ಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ. ಒಟ್ಟು ಐದು ಜನರು ಸಾವನ್ನಪ್ಪಿದ್ದಾರೆ. ಇನ್ನು ಉತ್ತರ ಪ್ರದೇಶದಲ್ಲಿ ಒಟ್ಟು 23 ಕೇಸ್‌ಗಳು ದಾಖಲಾಗಿದೆ, ಅದರಲ್ಲಿ 9 ಜನರು ಚೇತರಿಸಿಕೊಂಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ಎಲ್ಲರು ಬೆಂಬಲ ನೀಡಿ, ಆ ದಿನ ಮನೆಯಲ್ಲೇ ಉಳಿದುಕೊಂಡು ಕೊರೊನಾ ವಿರುದ್ಧ ಒಟ್ಟಾಗಿ ಹೋರಾಡಬೇಕಾಗಿದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+