ಶಾಸಕನಿಗೆ ಸೇರಿದ ಅಕ್ರಮ ಕಟ್ಟಡಗಳ ನೆಲಸಮ ಮಾಡಿದ ಯೋಗಿ ಸರ್ಕಾರ
ಲಕ್ನೋ, ಆಗಸ್ಟ್ 27: ಸರ್ಕಾರಿ ಭೂಮಿಯ ಮೇಲಿನ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಉತ್ತರ ಪ್ರದೇಶದ ಅಧಿಕಾರಿಗಳು ಮಾಜಿ ಗ್ಯಾಂಗ್ಸ್ಟರ್, ಶಾಸಕ ಮುಖ್ತಾರ್ ಅನ್ಸಾರಿ ಮಾಲೀಕತ್ವದ ಎರಡು ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಿದ್ದಾರೆ. ಲಕ್ನೋದ ಐಷಾರಾಮಿ ದಾಲಿಬಾಗ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಈ ಕಾರ್ಯಾಚರಣೆ ನಡೆಸಲಾಗಿದೆ.
ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ವೇಳೆ ಭಾರಿ ಪ್ರಮಾಣದ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಹಾಜರಿದ್ದರು.
'ಉತ್ತರ ಪ್ರದೇಶ ಪೊಲೀಸರು ಇಂದು ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿಗೆ ಸೇರಿದ ಅಕ್ರಮ ಆಸ್ತಿಗಳನ್ನು ನೆಲಸಮಗೊಳಿಸಿದ್ದಾರೆ. ಈ ತೆರವು ಕಾರ್ಯಾಚರಣೆಗೆ ತಗುಲಿದ ಸಂಪೂರ್ಣ ವೆಚ್ಚವನ್ನು ಗ್ಯಾಂಗ್ಸ್ಟರ್ನಿಂದಲೇ ಯೋಗಿ ಸರ್ಕಾರ ವಸೂಲಿ ಮಾಡಲಿದೆ' ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮ ಸಲಹೆಗಾರ ಮೃತ್ಯುಂಜಯ್ ಕುಮಾರ್ ಹೇಳಿದ್ದಾರೆ.

'ಅಪರಾಧಿಗಳು ತಮ್ಮ ಅಪರಾಧಗಳನ್ನು ತ್ಯಜಿಸಬೇಕು ಇಲ್ಲವೇ ಇಂತಹ ಕಠಿಣ ನಿರ್ಧಾರಗಳನ್ನು ಎದುರಿಸಲು ಸಿದ್ಧರಾಗಿರಬೇಕು' ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪಾಕಿಸ್ತಾನಕ್ಕೆ ವಲಸೆ ಹೋಗಿದ್ದ ಜನರಿದ್ದ ಸ್ಥಳದಲ್ಲಿ ಈ ಕಟ್ಟಡಗಳನ್ನು ನಿರ್ಮಿಸಲಾಗಿತ್ತು. ಲಕ್ನೋ ಅಭಿವೃದ್ಧಿ ಪ್ರಾಧಿಕಾರವು ಈ ಆಸ್ತಿಯ ನಕಾಶೆಯನ್ನು ಅಂಗೀರಿಸಿರಲಿಲ್ಲ. ಈ ಕಾರ್ಯಾಚರಣೆಯ ಸಂಪೂರ್ಣ ವೆಚ್ಚವನ್ನು ಅವರಿಂದಲೇ ವಸೂಲಿ ಮಾಡಲಾಗುತ್ತದೆ. ಈ ಅಕ್ರಮ ಕಟ್ಟಡ ನಿರ್ಮಾಣಕ್ಕೆ ನೆರವು ನೀಡಿದ್ದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.
ಮೌ ಪ್ರದೇಶದ ಬಿಎಸ್ಪಿ ಶಾಸಕರಾಗಿರುವ ಮುಖ್ತಾರ್ ಅನ್ಸಾರಿಯ ಸಹಚರರಿಗೆ ಸೇರಿದ್ದ ಕೆಲವು ಆಸ್ತಿ ಪಾಸ್ತಿಗಳನ್ನು ಇತ್ತೀಚೆಗೆ ಸರ್ಕಾರ ಜಪ್ತಿ ಮಾಡಿತ್ತು. ಘಾಜಿಪುರ್ನಲ್ಲಿ ಅನ್ಸಾರಿಯ ನಾಲ್ವು ಸಹವರ್ತಿಗಳ ಶಸ್ತ್ರಾಸ್ತ್ರ ಪರವಾನಗಿಯನ್ನು ರದ್ದುಗೊಳಿಸಿತ್ತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications