ಸಾಲ ವಸೂಲಿಗೆ 34 ಪ್ರಯಾಣಿಕರಿದ್ದ ಬಸ್ ಹೈಜಾಕ್!
ಲಕ್ನೋ, ಆಗಸ್ಟ್.19: ಫೈನ್ಯಾನ್ಸ್ ನೀಡಿದ ಕಂಪನಿಯ ಸಿಬ್ಬಂದಿಯು ಹಣ ವಸೂಲಿಗಾಗಿ ಪ್ರಯಾಣಿಕರು ತುಂಬಿದ ಬಸ್ ನ್ನು ಹಿಂಬಾಲಿಸಿಕೊಂಡು ಹೋದ ಅಚ್ಚರಿಯ ಘಟನೆಯು ಉತ್ತರ ಪ್ರದೇಶದ ಆಗ್ರಾ ಬೈಪಾಸ್ ನಲ್ಲಿ ನಡೆದಿದೆ.
ಸಾಲದ ಹಣ ವಸೂಲಿಗಾಗಿ ಬೆನ್ನಟ್ಟಿದ ಹಣಕಾಸು ಸಂಸ್ಥೆಯ ಸಿಬ್ಬಂದಿಯು ಬಸ್ ನಿಲ್ಲಿಸುವಂತೆ ಚಾಲಕ ಮತ್ತು ನಿರ್ವಾಹಕರಿಗೆ ಹೇಳಿದ್ದಾರೆ. ಬಸ್ ನಿಲ್ಲಿಸದಿದ್ದಾಗ ಅದನ್ನು ಬೆನ್ನಟ್ಟಿಕೊಂಡು ಬಂದು ಆಗ್ರಾದ ಬಳಿ ಜಪ್ತಿ ಮಾಡಲಾಗಿದೆ. ಬಸ್ ಚಾಲಕ ನಿರ್ವಾಹಕ ಮತ್ತು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರವು ತಿಳಿಸಿದೆ.
ಫೈನ್ಯಾನ್ಸ್ ಕಂಪನಿಯ ಸಿಬ್ಬಂದಿ ಹಿಂಬಾಲಿಸಿದ ಸಂದರ್ಭದಲ್ಲಿ ಬಸ್ 34 ಪ್ರಯಾಣಿಕರನ್ನು ಹೊತ್ತು ಗುರುಗ್ರಾಮ್ ನಿಂದ ಮಧ್ಯಪ್ರದೇಶದ ಗ್ವಾಲಿಯಾರ್ ಗೆ ಸಂಚರಿಸುತ್ತಿತ್ತು. ಇನ್ನು, ಫೈನ್ಯಾನ್ಸ್ ಕಂಪನಿಯು ಕಾನೂನುಬಾಹಿರವಾಗಿ ಬಸ್ ಜಪ್ತಿ ಮಾಡಿಕೊಂಡಿದೆ ಎಂದು ಉತ್ತರ ಪ್ರದೇಶ ಸರ್ಕಾರವು ಸ್ಪಷ್ಟನೆ ನೀಡಿದೆ.

ಸಾವಿನ ಮನೆ ಸೇರಿದ್ದ ಬಸ್ ಮಾಲೀಕ:
ಈ ಘಟನೆ ನಡೆದ ಹಿಂದಿನ ದಿನವಷ್ಟೇ ಫೈನ್ಯಾನ್ಸ್ ಕಂಪನಿಯಿಂದ ಸಾಲ ಪಡೆದ ಬಸ್ ಮಾಲೀಕ ಮೃತಪಟ್ಟಿದ್ದರು. ತಂದೆಯ ಸಾವಿನ ನೋವಿನಲ್ಲೇ ಪುತ್ರ ಅಂತ್ಯಸಂಸ್ಕಾರ ನಡೆಸಿ ದುಃಖದಲ್ಲಿದ್ದರು. ಇಂಥ ಸಂದರ್ಭದಲ್ಲಿ ಫೈನ್ಯಾನ್ಸ್ ಕಂಪನಿಯು ಕ್ರೌರ್ಯ ತೋರಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಮೂಲಗಳಿಂದ ತಿಳಿದು ಬಂದಿದೆ. ಅವರ ಪುತ್ರ ಅಂತ್ಯಸಂಸ್ಕಾರ ನಡೆಸಿ ತಂದೆ ಸಾವಿನ ನೋವಿನಲ್ಲಿದ್ದರು ಎಂದು ಉತ್ತರ ಪ್ರದೇಶ ಸರ್ಕಾರವು ತಿಳಿಸಿದೆ.
ಫೈನ್ಯಾನ್ಸ್ ಕಂಪನಿ ಸಿಬ್ಬಂದಿ ವಿರುದ್ಧ ದೂರು:
ಬಸ್ ಹೈಜಾಕ್ ಮಾಡಿದ ಫೈನ್ಯಾನ್ಸ್ ಕಂಪನಿಯ ಗ್ವಾಲಿಯಾರ್ ಮೂಲದ ಮೂವರು ಸಿಬ್ಬಂದಿ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಆಗ್ರಾದ ಎಸ್ಎಸ್ ಪಿ ಬಬ್ಲು ಕುಮಾರ್ ತಿಳಿಸಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications