ಸಾಲ ವಸೂಲಿಗೆ 34 ಪ್ರಯಾಣಿಕರಿದ್ದ ಬಸ್ ಹೈಜಾಕ್!
ಲಕ್ನೋ, ಆಗಸ್ಟ್.19: ಫೈನ್ಯಾನ್ಸ್ ನೀಡಿದ ಕಂಪನಿಯ ಸಿಬ್ಬಂದಿಯು ಹಣ ವಸೂಲಿಗಾಗಿ ಪ್ರಯಾಣಿಕರು ತುಂಬಿದ ಬಸ್ ನ್ನು ಹಿಂಬಾಲಿಸಿಕೊಂಡು ಹೋದ ಅಚ್ಚರಿಯ ಘಟನೆಯು ಉತ್ತರ ಪ್ರದೇಶದ ಆಗ್ರಾ ಬೈಪಾಸ್ ನಲ್ಲಿ ನಡೆದಿದೆ.
ಸಾಲದ ಹಣ ವಸೂಲಿಗಾಗಿ ಬೆನ್ನಟ್ಟಿದ ಹಣಕಾಸು ಸಂಸ್ಥೆಯ ಸಿಬ್ಬಂದಿಯು ಬಸ್ ನಿಲ್ಲಿಸುವಂತೆ ಚಾಲಕ ಮತ್ತು ನಿರ್ವಾಹಕರಿಗೆ ಹೇಳಿದ್ದಾರೆ. ಬಸ್ ನಿಲ್ಲಿಸದಿದ್ದಾಗ ಅದನ್ನು ಬೆನ್ನಟ್ಟಿಕೊಂಡು ಬಂದು ಆಗ್ರಾದ ಬಳಿ ಜಪ್ತಿ ಮಾಡಲಾಗಿದೆ. ಬಸ್ ಚಾಲಕ ನಿರ್ವಾಹಕ ಮತ್ತು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರವು ತಿಳಿಸಿದೆ.
ಫೈನ್ಯಾನ್ಸ್ ಕಂಪನಿಯ ಸಿಬ್ಬಂದಿ ಹಿಂಬಾಲಿಸಿದ ಸಂದರ್ಭದಲ್ಲಿ ಬಸ್ 34 ಪ್ರಯಾಣಿಕರನ್ನು ಹೊತ್ತು ಗುರುಗ್ರಾಮ್ ನಿಂದ ಮಧ್ಯಪ್ರದೇಶದ ಗ್ವಾಲಿಯಾರ್ ಗೆ ಸಂಚರಿಸುತ್ತಿತ್ತು. ಇನ್ನು, ಫೈನ್ಯಾನ್ಸ್ ಕಂಪನಿಯು ಕಾನೂನುಬಾಹಿರವಾಗಿ ಬಸ್ ಜಪ್ತಿ ಮಾಡಿಕೊಂಡಿದೆ ಎಂದು ಉತ್ತರ ಪ್ರದೇಶ ಸರ್ಕಾರವು ಸ್ಪಷ್ಟನೆ ನೀಡಿದೆ.

ಸಾವಿನ ಮನೆ ಸೇರಿದ್ದ ಬಸ್ ಮಾಲೀಕ:
ಈ ಘಟನೆ ನಡೆದ ಹಿಂದಿನ ದಿನವಷ್ಟೇ ಫೈನ್ಯಾನ್ಸ್ ಕಂಪನಿಯಿಂದ ಸಾಲ ಪಡೆದ ಬಸ್ ಮಾಲೀಕ ಮೃತಪಟ್ಟಿದ್ದರು. ತಂದೆಯ ಸಾವಿನ ನೋವಿನಲ್ಲೇ ಪುತ್ರ ಅಂತ್ಯಸಂಸ್ಕಾರ ನಡೆಸಿ ದುಃಖದಲ್ಲಿದ್ದರು. ಇಂಥ ಸಂದರ್ಭದಲ್ಲಿ ಫೈನ್ಯಾನ್ಸ್ ಕಂಪನಿಯು ಕ್ರೌರ್ಯ ತೋರಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಮೂಲಗಳಿಂದ ತಿಳಿದು ಬಂದಿದೆ. ಅವರ ಪುತ್ರ ಅಂತ್ಯಸಂಸ್ಕಾರ ನಡೆಸಿ ತಂದೆ ಸಾವಿನ ನೋವಿನಲ್ಲಿದ್ದರು ಎಂದು ಉತ್ತರ ಪ್ರದೇಶ ಸರ್ಕಾರವು ತಿಳಿಸಿದೆ.
ಫೈನ್ಯಾನ್ಸ್ ಕಂಪನಿ ಸಿಬ್ಬಂದಿ ವಿರುದ್ಧ ದೂರು:
ಬಸ್ ಹೈಜಾಕ್ ಮಾಡಿದ ಫೈನ್ಯಾನ್ಸ್ ಕಂಪನಿಯ ಗ್ವಾಲಿಯಾರ್ ಮೂಲದ ಮೂವರು ಸಿಬ್ಬಂದಿ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಆಗ್ರಾದ ಎಸ್ಎಸ್ ಪಿ ಬಬ್ಲು ಕುಮಾರ್ ತಿಳಿಸಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications