Get Updates
Get notified of breaking news, exclusive insights, and must-see stories!

Breaking: ಯುಪಿ ಉಪಚುನಾವಣೆ: ರಾಂಪುರದಲ್ಲಿ ಎಸ್‌ಪಿ ಅಭ್ಯರ್ಥಿ, ಅಜಂಗಢದಲ್ಲಿ ಬಿಜೆಪಿ ಮುನ್ನಡೆ

ಲಕ್ನೋ (ಯುಪಿ) ಜೂನ್ 26: ಉತ್ತರಪ್ರದೇಶ ಲೋಕಸಭಾ ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದ್ದು ಮತ ಎಣಿಕೆ ಆರಂಭವಾಗಿದೆ. ರಾಮ್‌ಪುರ ಮತ್ತು ಅಜಂಗಢದಲ್ಲಿ ಮತ ಎಣಿಕೆ ಆರಂಭಗೊಂಡಿದ್ದು ರಾಮ್‌ಪುರ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮುನ್ನಡೆಯಲ್ಲಿದ್ದರೆ, ಅಜಂಗಢದಲ್ಲಿ ಬಿಜೆಪಿ ಅಭ್ಯರ್ಥಿ ಮುಂದಿದ್ದಾರೆ.

ಲಭ್ಯವಿರುವ ಮಾಹಿತಿ ಪ್ರಕಾರ ರಾಮ್‌ಪುರದಲ್ಲಿ ಎಸ್‌ಪಿ ಅಭ್ಯರ್ಥಿ ಮೊಹಮ್ಮದ್ ಅಸಿಂ ರಾಜಾ 767 ಮತಗಳಿಂದ ಮುನ್ನಡೆಯಲ್ಲಿದ್ದರೆ, ಬಿಜೆಪಿ ಅಭ್ಯರ್ಥಿ ದಿನೇಶ್ ಲಾಲ್ ಯಾದವ್ 'ನಿರಾಹುವಾ' ಬಿಎಸ್‌ಪಿಯ ಶಾ ಆಲಂ ಅಲಿಯಾಸ್ ಗುಡ್ಡು ಜಮಾಲಿಯಿಂದ 2,117 ಮತಗಳ ಅಂತರದಿಂದ ಅಜಂಗಢ ಕ್ಷೇತ್ರದಿಂದ ಮುನ್ನಡೆ ಸಾಧಿಸಿದ್ದಾರೆ. ಎಸ್ಪಿಯ ಧರ್ಮೇಂದ್ರ ಯಾದವ್ ಮೂರನೇ ಸ್ಥಾನದಲ್ಲಿದ್ದಾರೆ.

ಜೂನ್ 23 ರಂದು ಉಪಚುನಾವಣೆ ನಡೆದ ದೆಹಲಿ ಮತ್ತು ಐದು ರಾಜ್ಯಗಳಾದ್ಯಂತ ಮೂರು ಲೋಕಸಭೆ ಮತ್ತು ಏಳು ವಿಧಾನಸಭಾ ಸ್ಥಾನಗಳಲ್ಲಿ ಇಂದು ಮತಗಳನ್ನು ಎಣಿಕೆ ಮಾಡಲಾಗುತ್ತಿದೆ. ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ವಿಧಾನಸಭಾ ಉಪಚುನಾವಣೆಯ ಪ್ರಮುಖ ಅಭ್ಯರ್ಥಿಗಳಲ್ಲಿ ಒಬ್ಬರು.

ಫೆಬ್ರವರಿಯಲ್ಲಿ ಕೈಗಾರಿಕಾ ಸಚಿವ ಮೇಕಪತಿ ಗೌತಮ್ ರೆಡ್ಡಿ ನಿಧನರಾದ ನಂತರ ತೆರವಾದ ಸ್ಥಾನಕ್ಕೆ ಆಂಧ್ರಪ್ರದೇಶದಲ್ಲಿ ಉಪಚುನಾವಣೆ ನಡೆಸಲಾಯಿತು. ಅವರ ಕಿರಿಯ ಸಹೋದರ ವಿಕ್ರಮ್ ರೆಡ್ಡಿ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ. ಬಿಜೆಪಿ ಅಭ್ಯರ್ಥಿ ಜಿ ಭರತ್ ಕುಮಾರ್ ಯಾದವ್ ಕಣದಲ್ಲಿದ್ದಾರೆ.

UP Lok Sabha Bypolls: SP candidate leading in Rampur, BJP ahead in Azamgarh

ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಶಾಸಕ ಬಂಧು ಟಿರ್ಕಿ ಅವರನ್ನು ಅನರ್ಹಗೊಳಿಸಿದ ನಂತರ ಜಾರ್ಖಂಡ್‌ನಲ್ಲಿ ಉಪಚುನಾವಣೆ ಅನಿವಾರ್ಯವಾಗಿತ್ತು. ಆಡಳಿತಾರೂಢ ಜೆಎಂಎಂ ನೇತೃತ್ವದ ಒಕ್ಕೂಟದ ಸಾಮಾನ್ಯ ಅಭ್ಯರ್ಥಿಯಾಗಿ ಕಾಂಗ್ರೆಸ್ ಅವರ ಪುತ್ರಿ ಶಿಲ್ಪಿ ನೇಹಾ ಟಿರ್ಕಿಯನ್ನು ಕಣಕ್ಕಿಳಿಸಿತು, ಆದರೆ ಬಿಜೆಪಿ ಮಾಜಿ ಶಾಸಕ ಗಂಗೋತ್ರಿ ಕುಜೂರ್ ಅವರನ್ನು ನಾಮನಿರ್ದೇಶನ ಮಾಡಿದೆ. ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಬೆಂಬಲಿತ ಸ್ವತಂತ್ರ ಅಭ್ಯರ್ಥಿ ದೇವ್ ಕುಮಾರ್ ಧನ್ ಕೂಡ ಜಾರ್ಖಂಡ್ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಪಂಜಾಬ್ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಹತ್ಯೆ ಪ್ರಕರಣದ ಅಪರಾಧಿ ಬಲ್ವಂತ್ ಸಿಂಗ್ ರಾಜೋನಾ ಅವರ ಸಹೋದರಿ ಕಮಲದೀಪ್ ಕೌರ್ ಅವರನ್ನು ಶಿರೋಮಣಿ ಅಕಾಲಿ ದಳದಿಂದ ಕಣಕ್ಕಿಳಿಸಲಾಗಿದೆ. ಅಕಾಲಿಯ ಅಮೃತಸರ ಮುಖ್ಯಸ್ಥ ಸಿಮ್ರಂಜಿತ್ ಸಿಂಗ್ ಮಾನ್ ಕೂಡ ಸ್ಪರ್ಧೆಯಲ್ಲಿದ್ದಾರೆ. ಪಂಜಾಬ್‌ನಲ್ಲಿ, AAP ಪಕ್ಷದ ಸಂಗ್ರೂರ್ ಜಿಲ್ಲಾ ಉಸ್ತುವಾರಿ ಗುರ್ಮೈಲ್ ಸಿಂಗ್ ಅವರನ್ನು ಕಣಕ್ಕಿಳಿಸಿತು. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಧುರಿ ಶಾಸಕ ದಲ್ವಿರ್ ಸಿಂಗ್ ಗೋಲ್ಡಿ, ಬಿಜೆಪಿ ಅಭ್ಯರ್ಥಿ ಬರ್ನಾಲಾ ಮಾಜಿ ಶಾಸಕ ಕೇವಲ್ ಧಿಲ್ಲೋನ್ ಕಣದಲ್ಲಿದ್ದಾರೆ.

ಅಗರ್ತಲಾ, ಜುಬರಾಜನಗರ, ಸುರ್ಮಾ ಮತ್ತು ಟೌನ್ ಬರ್ಡೋವಾಲಿ ಕ್ಷೇತ್ರಗಳಲ್ಲಿ ತ್ರಿಪುರಾ ಉಪಚುನಾವಣೆ ನಡೆಯಿತು. ಟೌನ್ ಬರ್ಡೋವಾಲಿಯಿಂದ ಸ್ಪರ್ಧಿಸಿರುವ ರಾಜ್ಯಸಭಾ ಸಂಸದ ಸಹಾ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಗೆಲ್ಲಲೇಬೇಕಾಗಿದೆ.
ಉತ್ತರ ಪ್ರದೇಶದ ರಾಂಪುರ ಮತ್ತು ಅಜಂಗಢ್ ಮತ್ತು ಪಂಜಾಬ್‌ನ ಸಂಗ್ರೂರ್ ಲೋಕಸಭಾ ಉಪಚುನಾವಣೆಗಳು ನಡೆದಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+