ಗಾಯಕಿಯ ಅತ್ಯಾಚಾರ: ಶಾಸಕ ಮತ್ತು ಮಗನ ವಿರುದ್ಧ ಪ್ರಕರಣ
ಲಕ್ನೋ, ಅಕ್ಟೋಬರ್ 19: ಉತ್ತರ ಪ್ರದೇಶ ಪೊಲೀಸರು 25 ವರ್ಷದ ಗಾಯಕಿಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣದ ಆರೋಪದಲ್ಲಿ ನಿಶಾದ್ ಪಕ್ಷದ ಶಾಸಕ ವಿಜಯ್ ಮಿಶ್ರಾ ಮತ್ತು ಅವರ ಮಗ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನಿರ್ಬಲ್ ಇಂಡಿಯನ್ ಶೋಷಿತ್ ಹಮಾರಾ ಆಮ್ ದಳ್ (ನಿಶಾದ್) ಪಕ್ಷವು ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರದ ಮಿತ್ರ ಪಕ್ಷವಾಗಿದೆ.
2014ರಲ್ಲಿ ಕಾರ್ಯಕ್ರಮವೊಂದಕ್ಕಾಗಿ ಮಿಶ್ರಾ ಅವರು ತಮ್ಮನ್ನು ಮನಗೆ ಕರೆದಿದ್ದರು. ಅಲ್ಲಿ ಅವರು ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದರು. ಈ ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಗಾಯಕಿ ಆರೋಪಿಸಿದ್ದರು.

2015ರಲ್ಲಿ ವಾರಣಾಸಿಯ ಹೋಟೆಲ್ನಲ್ಲಿ ಕೂಡ ತಮ್ಮ ಮೇಲೆ ಅತ್ಯಾಚಾರ ನಡೆದಿತ್ತು. ಅತ್ಯಾಚಾರದ ಬಳಿಕ ತಮ್ಮನ್ನು ಮನೆಗೆ ಬಿಡುವಂತೆ ಮಗ ಹಾಗೂ ಸೋದರಳಿಯನಿಗೆ ಮಿಶ್ರಾ ಸೂಚಿಸಿದ್ದರು. ಆದರೆ ಮನೆಗೆ ವಾಒಸ್ ಬಿಡುವ ಮುನ್ನ ಅವರಿಬ್ಬರೂ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಆರೋಪ ಮಾಡಿದ್ದರು.
ಅಕ್ರಮ ಭೂ ಒತ್ತುವರಿ ಪ್ರಕರಣದಲ್ಲಿ ವಿಜಯ್ ಮಿಶ್ರಾ ಅವರನ್ನು ಮಧ್ಯಪ್ರದೇಶದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಬಂಧಿಸಲಾಗಿತ್ತು. ಅವರನ್ನು ಆಗ್ರಾ ಜೈಲಿನಲ್ಲಿ ಇರಿಸಲಾಗಿದೆ.
ಮಿಶ್ರಾ ಜೈಲಿನಲ್ಲಿ ಇದ್ದಾರೆ ಎಂಬ ಮಾಹಿತಿ ಗೊತ್ತಾದ ಬಳಿಕ ಗೋಪಿಗಂಜ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಧೈರ್ಯ ಮಾಡಿದ್ದಾಗಿ ಗಾಯಕಿ ತಿಳಿಸಿದ್ದಾರೆ. 'ವಿಜಯ್ ಮಿಶ್ರಾ ಬಳಿ ನನ್ನ ಅತ್ಯಾಚಾರದ ವಿಡಿಯೋ ದೃಶ್ಯಗಳಿವೆ. ಮಿಗಿಲಾಗಿ ಆತ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಬಹಳ ಪ್ರಭಾವಶಾಲಿ. ಹೀಗಾಗಿ ಇದಕ್ಕೂ ಮುನ್ನ ದೂರು ನೀಡಲು ಹೆದರಿದ್ದೆ' ಎಂದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications