ಯುಪಿ: ಡಿಜಿಪಿ ಹುದ್ದೆಯಿಂದ ಮುಕ್ತಿ ಪಡೆದ ಮುಕುಲ್ ಗೋಯಲ್
ಲಕ್ನೋ ಮೇ 11: ಯುಪಿ ಪೊಲೀಸ್ ಮಹಾನಿರ್ದೇಶಕ ಮುಕುಲ್ ಗೋಯೆಲ್ ಅವರನ್ನು ಡಿಜಿಪಿ ಹುದ್ದೆಯಿಂದ ವಜಾಗೊಳಿಸಲಾಗಿದೆ. ವರದಿಗಳ ಪ್ರಕಾರ ಮುಕುಲ್ ಗೋಯಲ್ ಅವರನ್ನು ಡಿಜಿಪಿ ಹುದ್ದೆಯಿಂದ ಮುಕ್ತಗೊಳಿಸಲಾಗಿದ್ದು, ಸರ್ಕಾರಿ ಕೆಲಸಗಳ ನಿರ್ಲಕ್ಷ್ಯ, ಇಲಾಖಾ ಕಾರ್ಯಗಳಲ್ಲಿ ಆಸಕ್ತಿಯ ಕೊರತೆ ಮತ್ತು ನಿಷ್ಕ್ರಿಯತೆ ಕಾರಣ ಎನ್ನಲಾಗಿದೆ. ಅವರನ್ನು ಡಿಜಿ ಸಿವಿಲ್ ಡಿಫೆನ್ಸ್ ಹುದ್ದೆಗೆ ಕಳುಹಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿ ಪ್ರಶಾಂತ್ ಕುಮಾರ್ ಅವರನ್ನು ಹಂಗಾಮಿ ಡಿಜಿಪಿಯನ್ನಾಗಿ ಮಾಡಲಾಗಿದೆ. ಜೊತೆಗೆ ಸದ್ಯ ಡಿಎಸ್ ಚೌಹಾಣ್ ಯುಪಿಯ ಹೊಸ ಡಿಜಿಪಿಯಾಗಬಹುದು ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಳೆದ ತಿಂಗಳು ಮಹತ್ವದ ಸಭೆಯನ್ನು ಕರೆದಿದ್ದರು. ಅದರಲ್ಲಿ ಡಿಜಿಪಿ ಮುಕುಲ್ ಗೋಯಲ್ ಅವರನ್ನು ಕರೆಯಲಿಲ್ಲ. ಅಂದಿನಿಂದ ಮುಕುಲ್ ಗೋಯಲ್ ಶೀಘ್ರದಲ್ಲೇ ರಿಲೀಫ್ ಆಗಬಹುದು ಎಂಬ ಮಾತು ಕೇಳಿಬಂದಿತ್ತು. ಇದರಂತೆ ಗೋಯಲ್ ಡಿಜಿಪಿ ಹುದ್ದೆಯಿಂದ ಮುಕ್ತಗೊಳಿಸಲಾಗಿದೆ. ಮೂಲಗಳ ಪ್ರಕಾರ, ಡಿಎಸ್ ಚೌಹಾಣ್ ಅವರು ಯುಪಿಯ ಮುಂದಿನ ಡಿಜಿಪಿಯಾಗಬಹುದು. ಡಿಎಸ್ ಚೌಹಾಣ್ ಅವರು ಪ್ರಸ್ತುತ ಡಿಜಿ ಇಂಟೆಲಿಜೆನ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮುಕುಲ್ ಗೋಯಲ್ ಮೂಲತಃ ಉತ್ತರ ಪ್ರದೇಶದ ಮುಜಾಫರ್ನಗರದವರು. ದೆಹಲಿಯ ಐಐಟಿಯಲ್ಲಿ ಬಿಟೆಕ್ ನಂತರ ಎಂಬಿಎ ಕೂಡ ಮಾಡಿದ್ದಾರೆ. ಮುಕುಲ್ ಗೋಯಲ್ ಅವರು ಉತ್ತರ ಪ್ರದೇಶದಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಅಜಂಗಢದ ಎಸ್ಪಿ ಮತ್ತು ವಾರಣಾಸಿ, ಗೋರಖ್ಪುರ, ಸಹರಾನ್ಪುರ, ಮೀರತ್ ಜಿಲ್ಲೆಗಳ ಎಸ್ಎಸ್ಪಿಯಾಗಿದ್ದರು. ಇದಲ್ಲದೆ ಕಾನ್ಪುರ, ಆಗ್ರಾ, ಬರೇಲಿ ವ್ಯಾಪ್ತಿಯ ಡಿಐಜಿ ಮತ್ತು ಬರೇಲಿ ವಲಯದ ಐಜಿ ಕೂಡ ಆಗಿದ್ದರು. ಫೆಬ್ರವರಿ 22, 1964 ರಂದು ಜನಿಸಿದ ಮುಕುಲ್ ಗೋಯಲ್ ಯುಪಿ ಕೇಡರ್ನ 1987 ಬ್ಯಾಚ್ನ ಐಪಿಎಸ್ ಅಧಿಕಾರಿ. ಬಿ.ಟೆಕ್ ಮತ್ತು ಎಂಬಿಎ ಪದವಿ ಪಡೆದಿದ್ದಾರೆ. ಅವರು ಫೆಬ್ರವರಿ 2024 ರಲ್ಲಿ ನಿವೃತ್ತರಾಗಲಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications