ಯುಪಿ: ಡಿಜಿಪಿ ಹುದ್ದೆಯಿಂದ ಮುಕ್ತಿ ಪಡೆದ ಮುಕುಲ್ ಗೋಯಲ್
ಲಕ್ನೋ ಮೇ 11: ಯುಪಿ ಪೊಲೀಸ್ ಮಹಾನಿರ್ದೇಶಕ ಮುಕುಲ್ ಗೋಯೆಲ್ ಅವರನ್ನು ಡಿಜಿಪಿ ಹುದ್ದೆಯಿಂದ ವಜಾಗೊಳಿಸಲಾಗಿದೆ. ವರದಿಗಳ ಪ್ರಕಾರ ಮುಕುಲ್ ಗೋಯಲ್ ಅವರನ್ನು ಡಿಜಿಪಿ ಹುದ್ದೆಯಿಂದ ಮುಕ್ತಗೊಳಿಸಲಾಗಿದ್ದು, ಸರ್ಕಾರಿ ಕೆಲಸಗಳ ನಿರ್ಲಕ್ಷ್ಯ, ಇಲಾಖಾ ಕಾರ್ಯಗಳಲ್ಲಿ ಆಸಕ್ತಿಯ ಕೊರತೆ ಮತ್ತು ನಿಷ್ಕ್ರಿಯತೆ ಕಾರಣ ಎನ್ನಲಾಗಿದೆ. ಅವರನ್ನು ಡಿಜಿ ಸಿವಿಲ್ ಡಿಫೆನ್ಸ್ ಹುದ್ದೆಗೆ ಕಳುಹಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿ ಪ್ರಶಾಂತ್ ಕುಮಾರ್ ಅವರನ್ನು ಹಂಗಾಮಿ ಡಿಜಿಪಿಯನ್ನಾಗಿ ಮಾಡಲಾಗಿದೆ. ಜೊತೆಗೆ ಸದ್ಯ ಡಿಎಸ್ ಚೌಹಾಣ್ ಯುಪಿಯ ಹೊಸ ಡಿಜಿಪಿಯಾಗಬಹುದು ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಳೆದ ತಿಂಗಳು ಮಹತ್ವದ ಸಭೆಯನ್ನು ಕರೆದಿದ್ದರು. ಅದರಲ್ಲಿ ಡಿಜಿಪಿ ಮುಕುಲ್ ಗೋಯಲ್ ಅವರನ್ನು ಕರೆಯಲಿಲ್ಲ. ಅಂದಿನಿಂದ ಮುಕುಲ್ ಗೋಯಲ್ ಶೀಘ್ರದಲ್ಲೇ ರಿಲೀಫ್ ಆಗಬಹುದು ಎಂಬ ಮಾತು ಕೇಳಿಬಂದಿತ್ತು. ಇದರಂತೆ ಗೋಯಲ್ ಡಿಜಿಪಿ ಹುದ್ದೆಯಿಂದ ಮುಕ್ತಗೊಳಿಸಲಾಗಿದೆ. ಮೂಲಗಳ ಪ್ರಕಾರ, ಡಿಎಸ್ ಚೌಹಾಣ್ ಅವರು ಯುಪಿಯ ಮುಂದಿನ ಡಿಜಿಪಿಯಾಗಬಹುದು. ಡಿಎಸ್ ಚೌಹಾಣ್ ಅವರು ಪ್ರಸ್ತುತ ಡಿಜಿ ಇಂಟೆಲಿಜೆನ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮುಕುಲ್ ಗೋಯಲ್ ಮೂಲತಃ ಉತ್ತರ ಪ್ರದೇಶದ ಮುಜಾಫರ್ನಗರದವರು. ದೆಹಲಿಯ ಐಐಟಿಯಲ್ಲಿ ಬಿಟೆಕ್ ನಂತರ ಎಂಬಿಎ ಕೂಡ ಮಾಡಿದ್ದಾರೆ. ಮುಕುಲ್ ಗೋಯಲ್ ಅವರು ಉತ್ತರ ಪ್ರದೇಶದಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಅಜಂಗಢದ ಎಸ್ಪಿ ಮತ್ತು ವಾರಣಾಸಿ, ಗೋರಖ್ಪುರ, ಸಹರಾನ್ಪುರ, ಮೀರತ್ ಜಿಲ್ಲೆಗಳ ಎಸ್ಎಸ್ಪಿಯಾಗಿದ್ದರು. ಇದಲ್ಲದೆ ಕಾನ್ಪುರ, ಆಗ್ರಾ, ಬರೇಲಿ ವ್ಯಾಪ್ತಿಯ ಡಿಐಜಿ ಮತ್ತು ಬರೇಲಿ ವಲಯದ ಐಜಿ ಕೂಡ ಆಗಿದ್ದರು. ಫೆಬ್ರವರಿ 22, 1964 ರಂದು ಜನಿಸಿದ ಮುಕುಲ್ ಗೋಯಲ್ ಯುಪಿ ಕೇಡರ್ನ 1987 ಬ್ಯಾಚ್ನ ಐಪಿಎಸ್ ಅಧಿಕಾರಿ. ಬಿ.ಟೆಕ್ ಮತ್ತು ಎಂಬಿಎ ಪದವಿ ಪಡೆದಿದ್ದಾರೆ. ಅವರು ಫೆಬ್ರವರಿ 2024 ರಲ್ಲಿ ನಿವೃತ್ತರಾಗಲಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications