Get Updates
Get notified of breaking news, exclusive insights, and must-see stories!

5 ವರ್ಷಗಳ ನಂತರ ಜೊತೆಯಾದ ಕುಟುಂಬ: ಪ್ರಚಾರದಲ್ಲಿ ಅಖಿಲೇಶ್, ಮುಲಾಯಂ, ಶಿವಪಾಲ್

ಲಕ್ನೋ, ಫೆಬ್ರವರಿ 18: ಉತ್ತರ ಪ್ರದೇಶದಲ್ಲಿ ಎರಡು ಹಂತದ ಮತದಾನದ ನಂತರ ಪ್ರಚಾರವು ಮತ್ತಷ್ಟು ತೀವ್ರಗೊಂಡಿದೆ. ಇಟಾವಾದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್, ಅವರ ತಂದೆ ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಪ್ರಚಾರದ ಹಾದಿಯಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಐದು ವರ್ಷಗಳ ನಂತರ ಮೊದಲ ಬಾರಿಗೆ ಕುಟುಂಬವೇ ಜೊತೆಯಾಗಿ ಪ್ರಚಾರದಲ್ಲಿ ತೊಡಗಿದೆ.

2017ರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಲಕ್ನೋದಲ್ಲಿ "ಸಮಾಜವಾದಿ ವಿಕಾಸ್ ರಥ" ಅನ್ನು ಆರಂಭ ಮಾಡಲು ಅಕ್ಟೋಬರ್ 2016 ರಲ್ಲಿ ಈ ಮೂವರು ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದರು. 2016ರಲ್ಲಿ ಕೌಟುಂಬಿಕ ಕಲಹದಿಂದಾಗಿ ಅಖಿಲೇಶ್ ತನ್ನ ಚಿಕ್ಕಪ್ಪ ಶಿವಪಾಲ್‌ರನ್ನು ಸಮಾಜವಾದಿ ಪಕ್ಷದಿಂದ ಹೊರಕ್ಕೆ ಇಟ್ಟಿದ್ದರು.

ಇದರಿಂದಾಗಿ ಆಕ್ರೋಶಕ್ಕೆ ಒಳಗಾದ ಅಖಿಲೇಶ್‌ ಯಾದವ್‌ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ತಮ್ಮದೇ ಆದ ಪ್ರಗತಿಶೀಲ ಸಮಾಜವಾದಿ ಪಕ್ಷವನ್ನು (ಲೋಹಿಯಾ) ಸ್ಥಾಪಿಸಿದರು. ಆದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಪಿಎಸ್‌ಪಿ ರಾಜ್ಯದಲ್ಲಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾಗಿತ್ತು. ಶಿವಪಾಲ್ ಸಿಂಗ್ ಯಾದವ್ ಅವರ ಪಕ್ಷವು ಈಗ ಅಖಿಲೇಶ್ ಯಾದವ್ ನೇತೃತ್ವದ ಮೈತ್ರಿಕೂಟದ ಭಾಗವಾಗಿದೆ.

UP Poll: On Campaign Trail in UP , Akhilesh, Mulayam, Shivpal Spotted Together After 5 Years

"ಬಿಜೆಪಿಯನ್ನು ಸೋಲಿಸಲು ನಮಗೆ ಸಹಾಯಕ"

ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಕೈಜೋಡಿಸಲು ನಿರ್ಧರಿಸಿದ್ದರಿಂದ ಕಳೆದ ವರ್ಷ ಅಖಿಲೇಶ್ ಮತ್ತು ಶಿವಪಾಲ್ ನಡುವಿನ ಭಿನ್ನಾಭಿಪ್ರಾಯ ಅಧಿಕೃತವಾಗಿ ಕೊನೆಗೊಂಡಿದೆ. ಆದರೆ, ಅಂದಿನಿಂದ ಇಬ್ಬರೂ ನಾಯಕರು ಒಟ್ಟಿಗೆ ವೇದಿಕೆ ಹಂಚಿಕೊಳ್ಳುವುದನ್ನು ಕಂಡಿರಲಿಲ್ಲ. ಒಮ್ಮೆ ಎಸ್‌ಪಿಯ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟ ಇಟಾವಾದಲ್ಲಿ, ಅಖಿಲೇಶ್ ಯಾದವ್ ಮತ್ತು ಶಿವಪಾಲ್ ಇಬ್ಬರೂ ವೇದಿಕೆಯನ್ನು ಹಂಚಿಕೊಂಡಿದ್ದಾರೆ. ಚಿಕ್ಕಪ್ಪನ (ಶಿವಪಾಲ್ ಸಿಂಗ್ ಯಾದವ್) ಮರಳುವಿಕೆಯು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ಯುಪಿ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ನಮಗೆ ಸಹಾಯ ಮಾಡುತ್ತದೆ ಎಂದು ಅಖಿಲೇಶ್ ಹೇಳಿದ್ದಾರೆ.

ಗುರುವಾರ, ಸಮಾಜವಾದಿ ಪಕ್ಷದ "ಸಮಾಜವಾದಿ ವಿಜಯ ರಥ" ಇಟಾವಾದ ಲಯನ್ ಸಫಾರಿಯಿಂದ ಪ್ರಾರಂಭವಾಯಿತು. 'ರಥ' ಚಳವಳಿಯ ಸಂದರ್ಭದಲ್ಲಿ, ಶಿವಪಾಲ್ ಮತ್ತು ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷ ಮತ್ತು ಅದರ ಮೈತ್ರಿಗಾಗಿ ಪ್ರಚಾರ ಮಾಡಿದರು. ಅಖಿಲೇಶ್ ಯಾದವ್ ತಮ್ಮ ಚೊಚ್ಚಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಲ್ಲಿ ಮುಲಾಯಂ ರ್‍ಯಾಲಿಯನ್ನು ನಡೆಸಿದರು.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ಮತ್ತು 14 ರಂದು ಎರಡು ಹಂತಗಳ ಮತದಾನ ಮುಗಿದಿದ್ದು, ಉಳಿದ ಐದು ಹಂತಗಳಿಗೆ ಫೆಬ್ರವರಿ 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಮತದಾನ ನಡೆಯಲಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಪಂಚ ರಾಜ್ಯಗಳಲ್ಲಿ ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಇನ್ನು ಬಿಜೆಪಿ ಅಭ್ಯರ್ಥಿ ಎಸ್‌ಪಿ ಸಿಂಗ್ ಬಾಘೆಲ್ ಮೇಲೆ ಸಮಾಜವಾದಿ ಪಕ್ಷದ ಗೂಂಡಾಗಳು ದಾಳಿ ನಡೆಸಿದ್ದಾರೆಂದು ಅಖಿಲೇಶ್ ಯಾದವ್ ವಿರುದ್ಧ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಅನುರಾಗ್ ಠಾಕೂರ್ ಅವರನ್ನೊಳಗೊಂಡ ಬಿಜೆಪಿ ನಿಯೋಗವು ಲಕ್ನೋದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. (ಒನ್‌ಇಂಡಿಯಾ ಸುದ್ದಿ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+